Home / ಕವನ / ಕವಿತೆ / ತೆಂಕಣ ಗಾಳಿಯಾಟ

ತೆಂಕಣ ಗಾಳಿಯಾಟ

(ರಗಳೆಯ ಪ್ರಭೇದ)

ಬರಲಿದೆ! ಅಹಹಾ! ದೂರದಿ ಬರಲಿದೆ-

ಬುಸುಗುಟ್ಟುವ ಪಾತಾಳದ ಹಾವೊ? |
ಹಸಿವಿನ ಭೂತವು ಕೂಯುವ ಕೂವೊ? ||
ಹೊಸತಿದು ಕಾಲನ ಕೋಣನ -ಓವೊ! |
ಉಸಿರಿನ ಸುಯ್ಯೋ? – ಸೂಸೂಕರಿಸುತ,

ಬರುವುದು! ಬರಬರ ಭರದಲಿ ಬರುವುದು- ||೧||

ಬೊಬ್ಬೆಯ ಹಬ್ಬಿಸಿ, ಒಂದೇ ಬಾರಿಗೆ |
ಉಬ್ಬರ ಎಬ್ಬಿಸಿ ಕಡಲಿನ ನೀರಿಗೆ, ||
ಬೊಬ್ಬುಳಿ ತೆರೆಯನು ದಡಕ್ಕೆ ಹೊಮ್ಮಿಸಿ, |
ಅಬ್ಬರದಲಿ ಭೋರ್ ಭೋರೆನೆ ಗುಮ್ಮಿಸಿ,

ಬರುತದೆ! ಮೈತೋರದೆ ಬರುತದೆ! ಅದೆ- ||೨||

ನಡುಮುರಿಯುತ ನಗನಾವೆಗೆ, ಕೂವೆಗೆ |
ಉಡಿಸಿದ ಹಾಯಿಯ ಹರಿಯುತ ಬಿರಿಯುತ, ||
ಹಡಗನು ಕೀಲಿಸಿ, ತುಮುರನು ತೇಲಿಸಿ, |
ದಡದಲಿ ಝಾಡಿಸಿ, ದೋಣಿಯನಾಡಿಸಿ,

ಇದೆ! ಇದೆ! ಬರುತಿದೆ! ಇದೆ! ಇದೆ! ಬರುತಿದೆ – ||೩||

ಹಕ್ಕಿಯ ಕಣ್ಣಿಗೆ ಧೂಳಿನ ಕಾಡಿಗೆ |
ಇಕ್ಕುತ, ಹೊಲದೆತ್ತಿಗೆ ದನಕಾಡಿಗೆ ||
ಫಕ್ಕನೆ ಹಟ್ಟಿಗೆ ಅಟ್ಟಿಸಿ, ಕಾಡಿಗೆ |
ಸಿಕ್ಕಿದ ಕಿಚ್ಚನು ಊದಲು ಹಾರುತ,

ಬರುತಿದೆ! ಇದೆ! ಇದೆ! ಇದೆ! ಇದೆ! ಬರುತಿದೆ- ||೪||

ಸಡಲಿಸಿ ಮಡದಿಯರುಡಿಯನು ಮುಡಿಯನು,
ಬಡಮುದುಕರ ಕೊಡೆಗರಿ ಹರಿದಾಡಿಸಿ,
ಹುಡುಗರ ತಲೆ ತಲೆ ಟೊಪ್ಪಿಯ ಆಟವ
ದಡಬಡನಾಡಿಸಿ ಮನೆಮನೆತೋಟವ
ಅಡಿಮೇಲಾಗಿಸಿ, ತೆಂಗನು ಲಾಗಿಸಿ,
ಅಡಿಕೆಯ ಬಾಗಿಸಿ, ಪನೆ ಇಬ್ಭಾಗಿಸಿ,
ಬುಡದೂಟಾಡಿಸಿ, ತಲೆ ತಾಟಾಡಿಸಿ,
ಗುಡಿಸಲ ಮಾಡನು ಹುಲುಹುಲುಮಾಡಿಸಿ,

ಬಂತೈ! ಬಂತೈ! ಇದೆ! ಇದೆ! ಬಂತೈ!- ||೫||

ಗಿಡಗಿಡದಿಂ-ಚೆಲು ಗೊಂಚಲು ಮಿಂಚಲು-
ಮಿಡಿಯನು ಹಣ್ಣನ್ನು ಉದುರಿಸಿ ಕೆದರಿಸಿ
ಎಡದಲಿ ಬಲದಲಿ ಕೆಲದಲಿ ನೆಲದಲಿ,
ಪಡುವಣ ಮೋಡವ ಬೆಟ್ಟಕೆ ಗಟ್ಟಕೆ
ಹೊಡೆದಟ್ಟುತ, ಕೋಲ್‌ ಮಿಂಚನು ಮಿರುಗಿಸಿ,
ಗುಡುಗನು ಗುಡುಗಿಸಿ, ನೆಲವನು ನಡುಗಿಸಿ,
ಸಿಡಿಲನು ತಾಳೆಗೆ ಬಾಳೆಗೆ ಎರಗಿಸಿ,
ಜಡಿಮಳೆ ಸುರಿವೋಲ್‌, ಬಿರುಮಳೆ ಬರುವೋಲ್‌,
ಕುಡಿ ನೀರನು ಒಣಗಿದ ನೆಲಕೆರೆವೋಲ್.
ಬಂತೈ ಬೀಸುತ! ಬೀಸುತ ಬಂತೈ!
ತೆಂಕಣ ಗಾಳಿಯು ಕೊಂಕಣ ಸೀಮೆಗೆ
ಬಂತೈ! ಬಂತೈ! ಬಂತೈ! ಬಂತೈ! ||೬||
*****
(ಪದ್ಯ ಪುಸ್ತಕ)

Tagged:

Leave a Reply

Your email address will not be published. Required fields are marked *

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...