Home / ಕವನ / ಕವಿತೆ / ಹುತ್ತರಿ ಹಾಡು

ಹುತ್ತರಿ ಹಾಡು

ಎಲ್ಲಿ ಭೂರಮೆ ದೇವಸನ್ನಿಧಿ ಬಯಸಿ ಬಿಮ್ಮನೆ ಬಂದಳೋ?
ಎಲ್ಲಿ ಮೋಹನ ಗಿರಿಯ ಬೆರಗಿನ ರೂಪಿನಿಂದಲಿ ನಿಂದಳೋ?
ಎಲ್ಲಿ ಮುಗಿಲಲಿ ಮಿಂಚಿನೋಲ್‌ ಕಾವೇರಿ ಹೊಳೆ ಹೊಳೆ ಹೊಳೆವಳೋ?
ಎಲ್ಲ ನೆಲವನು ತಣಿಸಿ ಜನಮನ ಹೊಲದ ಕಳೆ ಕಳೆ ಕಳೆವಳೋ?
ಅಲ್ಲೆ ಆ ಕಡೆ ನೋಡಲಾ!
ಅಲ್ಲೆ ಕೊಡಗರ ನಾಡಲಾ!
ಅಲ್ಲೆ ಕೊಡಗರ ಬೀಡಲಾ!

ಸವಿದು ಮೆದ್ದರೊ ಯಾರು ಪೂರ್ವದಿ ಹುಲಿಯ ಹಾಲಿನ ಮೇವನು?
ಕವಣೆ ತಿರಿ ಕಲ್ಲಾಟ ಹಗ್ಗಕೆ ಸೆಳೆದರೋ ಹೆಬ್ಬಾವನು?
ಸವರಿ ಆನೆಯ ಸೊಂಡಿಲಲಿ ರಣಕೊಂಬನಾರ್‌ ಭೋರ್ಗರೆದರೋ?
ಸವೆದು ಸವೆಯದ ಸಾಹಸತ್ವದ ಕ್ಷಾತ್ರ ಬೇಟೆಯ ಮೆರೆದರೋ?
ಅವರೆ ಸೋಲ್‌ ಸಾವರಿಯರು!
ಅವರೆ ಕಡುಗಲಿ ಗರಿಯರು!
ಅವರೆ ಕೊಡಗಿನ ಹಿರಿಯರು!

ತಮ್ಮ ನಾಡಿನ ಕೊರಳು ದಾಸ್ಯದ ನೊಗದ ಭಾರಕೆ ಬಗ್ಗದೊಲ್‌,
ಹೆಮ್ಮೆಹಗೆಗಳ ಹೊಡೆದು ಹಿರಿಯರು ಹಸಿದು ಹಾರುವ ಬಗ್ಗದೊಲ್‌,
ಬೊಮ್ಮಗಿರಿಯಿ೦ ಪುಷ್ಪಗಿರಿಪರ್ಯಂತ ಬೆಳೆದೀ ದೇಶವು
ಧರ್ಮದಾನದ ಕಟ್ಟುಕಟ್ಟಳೆ ರೀತಿನೀತಿಯ ಕೋಶವು!
ನಮ್ಮ ಕೊಡಗಿದು ಜಮ್ಮದು;
ಜಮ್ಮ ಕೊಡಗಿದು ನಮ್ಮದು;
ನಮ್ಮೊಡಲ್ ಬಿಡಲಮ್ಮದು!

ಇದು ಅಗಸ್ತ್ಯನ ತಪದ ಮನೆ, ಕಾವೇರಿ ತಾಯ ತವರ್ಮನೆ
ಕದನಸಿರಿಗುಯ್ಯಾಲೆ ತೂಗಿದನಿಲ್ಲಿ ಚಂದಿರವರ್ಮನೆ!
ಇದಕೊ! ಚೆಂಗಾಳ್ವರಸರಾಡಂಬರವು ಕುಣಿದ ಶ್ರೀರಂಗವು!
ಇದೊ! ಇದೊ! ಇಲ್ಲುರುಳ್ದ ಹಾಲೇರಿಯರ ಬಲಗಿರಿಶೃಂಗವು!
ವಿಧಿಯ ಮಾಟದ ಕೊಡಗಿದು!
ಮೊದಲೆ ನಮ್ಮದು, ಕಡೆಗಿದು
ಕದಲದೆಮ್ಮನು; ಬೆಡಗಿದು!

ಒಮ್ಮತವು ಒಗ್ಗಟ್ಟು ಒಂದೇ ಮನವು ಎಲ್ಲಿದೆ ಹೇಳಿರಿ?
ಸುಮ್ಮನಿತ್ತರೊ ದಟ್ಟಿಕುಪ್ಪಸ! ಹಾಡು ಹುತ್ತರಿಗೇಳಿರಿ?
ಚಿಮ್ಮಿ ಪಾತುರೆಕೋಲ ಹೊಯ್ಲಿಗೆ ಕುಣಿವ ಪದ ಹೊರ ಹೊಮ್ಮಲಿ!
ಅಮ್ಮೆ ಹರಸಿದ ಸೀಮೆ ನಮಗಿದು ಇರಲಿ ನಮ್ಮದೆ ನಮ್ಮಲ್ಲಿ!
ನೆಮ್ಮದಿಯನಿದು ತಾಳಲಿ!
ಆಮ್ಮೆಯಾ ಬಲ ತೋಳಲಿ
ನಮ್ಮ ಕೊಡಗಿದು ಬಾಳಲಿ!
*****
(ಪದ್ಯ ಪುಸ್ತಕ)

Tagged:

Leave a Reply

Your email address will not be published. Required fields are marked *

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...