Home / ಕವನ / ಕವಿತೆ / ಭೀಷ್ಮ ನಿರ್‍ಯಾಣ

ಭೀಷ್ಮ ನಿರ್‍ಯಾಣ

(ಮತ್ತೇಭವಿಕ್ರೀಡಿತ)

ಇಳಿದಂ ಪರ್ವತದಗ್ರದಿಂದೆ ದಿನವಂ, ಕೆಂಪೇರ್ದುದಾಕಾಶಮಂ-
ಡಳಮುಂ ಶೋಭಿಸಿದತ್ತು. ಪೂರ್ವದಿಶೆಯೊಳ್‌ ಕಾಲಿಟ್ಟುದೈ ಕತ್ತಲುಂ.
ಇಳಿದಸ್ತ೦ಗತನಾಗುತಿರ್ದನಧಿಕ ಶ್ರೇಯಃಪ್ರತಾಪಂಗಳಿಂ
ವಿಳಸದ್ಭಾರತದದ್ವಿತೀಯ ರವಿಯುಂ ಭೀಷ್ಮಂ ಕುರುಕ್ಷೇತ್ರದೊಳ್.

ಶಿರಮಂ ಬಾಗಿಸೆ ಚಿಂತೆಯಿಂ, ಗಳದ ಸಂದೊಳ್ ಸಿಲ್ಕಲಾ ನಿಟ್ಟುಸಿರ್,
ಸುರಿದುಂ ಕಂಬನಿ ಜಾರೆ ಗಲ್ಲತಟದೊಳ್‌, ಕುಂತೀಕುಮಾರರ್ ವಲಂ
ಮರಣಾಸನ್ನನ ತಲ್ಪಮಂ ಬಳಸಿ ನಿಂದರ್; ಭೀಷ್ಮನುಂ ಕಂಗಳಂ
ತೆರೆದುಂ ನೋಡಿದನೊಮ್ಮೆ ಕೃಷ್ಣಮುಖಮಂ ಮಂದಸ್ಮಿತಾಹ್ಲಾದದಿಂ

“ಆರೆರೇ! ಧರ್ಮಜ! ಮಾತೃಭೂಮಿಯ ಪರಾಧೀನತ್ವದಾಪಾಶಮಂ
ತರಿದುಂ, ಧರ್ಮಪತಾಕೆಯಂ ಭರತಕ್ಷೋಣೀ ವಕ್ಷದೊಳ್‌ ನೆಟ್ಟಿಹೈ!
ಶಿರದೊಳ್‌ ಪಾತಕಮಿಲ್ಲಮಿಲ್ಲಮಿನಿಸುಂ ದುರ್ಯೋಧನ ಧ್ವಂಸದಿಂ,
ಧರೆಯಂ ಪಾಲಿಸು ಮೆಚ್ಚುವೊಲ್ ಪ್ರಜೆಗಳುಂ! ಕರ್ತವ್ಯದೊಳ್‌ ಕಣ್ಣಿಡೈ!

ನುಡಿಯಿಂದುಜ್ವಲಕಾಂತಿ ಭೀಷ್ಮಮುಖದೊಳ್‌ ವಿಭ್ರಾಜಿಸಲ್‌, ಹಸ್ತದಿಂ-
ದೊಡನಾಶೀರ್ವದಿಸುತ್ತ ಧರ್ಮಸುತನಂ, ಶ್ರೀಕೃಷ್ಣನುತ್ಸಂಗದೊಳ್
ಮುಡಿಯಂ ನೀಡಿ, ಮಲಂಗಿದಂ ಸುಭಟಭೀಷ್ಮಂ ಯೋಧಶಾರ್ದೂಲಮಂ
ದೊಡಲಿಂ ನೀಡಿ, ಮಲಗಿದಂ ಸುಭಟಭೀಷ್ಮಂ ಯೋಧಶಾರ್ದೂಲಮಂ
ದೊಡಲಿಂ ನಂದುದು ಲೇಶಜೀವಕಳೆಯುಂ-ನಿರ್ಯಾಣದಾ ದೀಪದೋಲ್
*****
(ಸುವಾಸಿನಿಯಿಂದ ೧೯೦೨)

Tagged:

Leave a Reply

Your email address will not be published. Required fields are marked *

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...