Home / ಕವನ / ಕವಿತೆ / ಪರೀಕ್ಷೆಯಲ್ಲಿ ಪರಾಜಿತನಾದ ವಿದ್ಯಾರ್ಥಿಯ ಪ್ರಲಾಪ

ಪರೀಕ್ಷೆಯಲ್ಲಿ ಪರಾಜಿತನಾದ ವಿದ್ಯಾರ್ಥಿಯ ಪ್ರಲಾಪ

ಚತುಷ್ಪದಿ

ಸಾಧ್ಯವಿಲ್ಲವು ಪರೀಕ್ಷೆಯೊಳನಗೆ ಜಯವು; |
ವಿದ್ಯಾಪರೀಕ್ಷಕರಿಗಿಲ್ಲವೈ ದಯವು||

ಆರು ವರ್ಷಗಳಿಂದ ಪೋಗುವೆನು ನಾನು; |
ದೂರ ಗುಡ್ಡಕೆ ಬರಿದೆ ಮಣ್ಣ ತುಂಬಿದೆನು. ||
ತೋರಲಿಲ್ಲವು ಪರೀಕ್ಷೆಯೊಳು ಜಯವಿನ್ನು |
ನೀರೊಳಗೆ ಹೋಮ ಗೈದಂತದುದೇನು? ||೧||

ನೊಸಲ ಪೊರೆಯಾಯ್ತು ಪಾಠದ ಭಾರ ಚಿಂತೆ, |
ಹಸಿವು ನೀರಡಿಕೆಯಿರದಾ ವೊಂಟೆಯಂತೆ, ||
ಉಸುಬೆಂಬ ಜೀವಕಾಲದಿ ನಡೆದು ಮುಂತೆ, |
ಬಸವಳಿದು ಬರಿದೆ ಸೇರ್ದೆನು ಪರಿಕೆ (೧) ಸಂತೆ. ||೨||

ಆಟಗಳ ಬರಿದೆ ನಾನಾಡದೇ ಬಿಟ್ಟು, |
ಪಾಟದಲಿ ಬಯಲಾಗಿ ಪೂರ್ಣ ಮನವಿಟ್ಟು, ||
ಮೂಟೆ ಹೊರುವಾ ಎತ್ತಿನೊಲ್ ನಿದ್ದೆಗೆಟ್ಟು, |
ಓಟವೋಡಿದೆ. ನೋವ್ಲಿದ್ ಕಣ್ಣುಕಟ್ಟು! ||೩||

ಹಲವು ಪುಸ್ತಕಗಳನ್ನು ಪರರೊಡನೆ ಬೇಡಿ, |
ಕೆಲವನ್ನು ಕೊಂಡೆನೈ ಹಣವನು ಬಿಸಾಡಿ, ||
ಕಲಿತೆನಾನೆಲ್ಲವನು ಪೂರ್ಣ ಮನಮಾಡಿ, |
ಗೆಲಲಿಲ್ಲವಿದು ಪರೀಕ್ಷೆಯ ಮಂತ್ರಮೋಡಿ! ||೪||

ತಂದೆ ಮನೆಯನ್ನು ಬಿಟ್ಟು, ಪರರ ಕೂಳುಂಡು, |
ಚೆಂದದಾ ಸತಿಯ ನೋಡದೆ ಸಾಸಗೊಂಡು, ||
ಬಂದು ಕಲಿತುದುದೆಲ್ಲ ಇಂಗ್ಲೀಷು ಬಂಡು |
ಸಂದ ಸಂಬಳವು ಸರಕಾರಕ್ಕೆ ದಂಡು! (೨) ||೫||

ನೆನೆಯದಿರ್ದೆನು ಸ್ನಾನಜಪಯೋಗವೆಲ್ಲ; |
ಮನೆಯ ಹಬ್ಬವ ಬಿಟ್ಟರೂ ಸಾಗಲಿಲ್ಲ; ||
ಅನುಜನಿಗೆ ಮದುವೆಯಾಗಲು ಪೋಗಲಿಲ್ಲ; |
ವನಿತೆ ಬಳೆದಾಗ ಸುಖದನುರಾಗವಿಲ್ಲ. ||೬||

ಮರುಗುವನು ಗುರು ನಾನು ಬಹುಮೂರ್ಖನೆಂದು, |
ಹುರುಳಿಲ್ಲ (೩) ವೆನುತ ಹೀನಿಪರು ಜನರಿಂದು. ||
ಬರಿದೆ ಹಣ ತಿಂದೆನೆಂದಾ ತಂದೆ ನೊಂದು, |
ಜರೆಯುವನು, ಜಾರುವುದು ಸ್ತ್ರೀಪ್ರೇಮಬಿಂದು. ||೭||

೧ ಪರೀಕ್ಷೆ ಎಂಬ ಸಂತೆ
೨ ಜುರುಮಾನೆ
೩ ಸತ್ವ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...