Home / ಕವನ / ಕವಿತೆ / ಏಕೆ ಹುಡುಕಲಿ ನಿನ್ನ?

ಏಕೆ ಹುಡುಕಲಿ ನಿನ್ನ?

ಏಕೆ ಹುಡುಕಲಿ ನಿನ್ನ?
ಜಗಜ್ಜಾಹೀರವಾಗಿರಲು ನೀನು|
ಏಕೆ ಕಾಣಿಸುವುದಿಲ್ಲವೆನ್ನಲಿ
ಸರ್ವವ್ಯಾಪಿಯಾಗಿರುವ ನಿನ್ನ|
ಅಣುರೇಣು ತೃಣಕಾಷ್ಟದಲಿ, ಎಲ್ಲಂದರಲ್ಲಿ
ಸರ್ವಾಂತರ್ಯಾಮಿಯಾದ ನಿನ್ನ||

ನಿನ್ನ ಒಂದು ಈ ಭೂ‌ಅರಮನೆಯಲಿ
ಗಾಳಿ, ನೀರು, ಬೆಳಕು
ಶಕ್ತಿಯಾಗಿ ನಿರಂತರ ಚಲಿಸುತಿರಲು|
ಎಂದೋ ಅತಿಥಿಯಾಗಿ
ಬಂದು ಹೋಗುವ ನಾನು
ನಿನ್ನ ಅರಿಯಲು ಸಾಧ್ಯವೇ||

ಅನಂತ ಶತಮಾನಗಳ ಹಿಂದೆ
ನೀ ಸೃಷ್ಟಿಸಿರುವ ನಿನ್ನ ಕುರುಹುಗಳ
ಸರಿಯಾಗಿ ಅರಿಯದಲೆ
ನಿನ್ನ ಅಲ್ಲಗಳೆವುದು ನ್ಯಾಯವೇ?
ನೀನಿತ್ತ ಮತಿಯ ಉಪಯೋಗಿಸಿ
ನಿನ್ನ ಪ್ರಶ್ನೆಮಾಡುವುದು ಸರಿಯೇ||

ಕುರುಡನೊಬ್ಬ ಆನೆಯ ಕಾಲ ಮುಟ್ಟಿ
ಅದು ಕಂಬದಂತಿದೆ ಎಂದಂತೆ
ಪರಿಕಲ್ಪಿಸುವುದು ಸರಿಯೇ?
ನಿನ್ನನರಿಲುಬೇಕು ಅಂತರಂಗದ ಕಣ್ಣು,
ಸತ್ಯವನರಿಯುವ ಕಣ್ಣು||

ಚಂದ್ರ, ಮಂಗಳನ ಮೇಲೆ ಕಾಲಿರುಸಿದಕೆ|
ತಂತ್ರಜ್ಞಾನದಿ ಹಕ್ಕಿಯಂದದಿ
ಹಾರಾಡುವುದ, ಪ್ರಾಣಿಯಂತೆ ನೀರಲಿ
ಚಲಿಸುವುದ ಕಲಿತಿದಕೆ,
ಅಂತರಿಕ್ಷದಲಿ ಸಂಚರಿಸುವುದ
ಅರಿತಿರುವುದಕೆ
ದೇವರಿಲ್ಲವೆಂಬುದು ತರವೇ?||

ಕೋಟ್ಯಾನು ಕೋಟಿ
ಜೀವ ಜಂಗುಳಿಯ ಸೃಷ್ಟಿಸಿ
ಅನ್ನಾದಿಗಳನಿತ್ತು ಸಲಹುವ
ಆ ದೈವವ ಅಪಮಾನಿಸುವುದು
ನ್ಯಾಯವೇ, ಧರ್ಮವೇ ? ||

ಬೇಡ, ಹೆತ್ತತಾಯಿಯನೇ
ಶಂಕಿಸಿಸುವುದು ದೂಷಿಸುವುದು|
ತಾಯಿ ಎದೆಹಾಲು ಕುಡಿದು
ಬೆಳೆದಾದ ಮೇಲೆ,
ಅದು ನಿನ್ನೆಯದೊ ಇಂದಿನದೊ
ಎಂಬ ರಾಜಕೀಯತೆ||

ನೀ ಚಲಿಸುತ್ತಿರುವುದು
ನಿನ್ನ ಶಕ್ತಿಯಿಂದ ಎನ್ನುವುದಾದರೆ!
ಈ ಭೂಮಿ, ಈ ಬ್ರಹ್ಮಾಂಡ
ಸಹಾಸ್ರಾರು ವರುಷ ನಿರಂತರ
ಹೀಗೆ ಸಾಗುತ್ತಿರುವುದು
ಆ ದೈವದಶಕ್ತಿ ಇರುವುದರಿಂದಲೇ|
ಅನ್ಯತಾ ಕಾಲಹರಣವ ಮಾಡದಲೆ
ಅನ್ಯರ ಮಾರ್ಗದಲಿ ತೊಡಕಾಗದೆ
ನೀ ಬಂದ ಕಾರ್ಯ ಮುಗಿಸುವುದೇ ಲೇಸು||
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...