Home / ಕವನ / ಕವಿತೆ / ಕೋಣ ಮತ್ತು ನಾವು

ಕೋಣ ಮತ್ತು ನಾವು

ಏಕೆ ಜನುವ ಕೊಟ್ಟೆಯಮ್ಮಾ !
ಗಂಡಾಗಿ
ಜನರ ದೇವರಿಗೆ ತಲೆ ಕೆಡಿಸಿಕೊಳ್ಳಲಿಕೆ.

ನಾನು ಹುಟ್ಟಿದ ಕೂಡಲೆ
ಮಾರಿದೇವಿಯ ಒಳಿತು ಕೋರಿ
ಹರಕೆ ಕಟ್ಟಿ, ಕಾಲು ತೊಳೆದು ಬಿಟ್ಟರು
ಸಾಕಿದ್ದಕ್ಕೆ ಸುಂಕವಾಗಿ ಪ್ರಾಣ ಕೇಳುವ ಜನರು.

ನಾನು ಕೋಣ! ಉಬ್ಬಿ ಹೋದೆ
ದುಡಿಸಿ ದಣಿಸದೆ
ತಿಂದು ತಿರುಗಾಡಿಕೊಂಡು ಬೆಳೆಯಲು ಬಿಟ್ಟಿದ್ದಕ್ಕೆ;
ಗೊತ್ತಾಗಲಿಲ್ಲ ಆಗ ಇದರ ಹಿಂದಿನ ಹಿಕ್ಮತ್ತು.

ಮತ್ತನಾದೆ
ಸಿಕ್ಕ ಸಿಕ್ಕ ಕಡೆಗೆ ನುಗ್ಗಿ
ಸಿಕ್ಕ ಸಿಕ್ಕದ್ದು ಮೇದು
ಸಿಕ್ಕ ಸಿಕ್ಕಂಗೆ ಅಡ್ಡಾಡುತ್ತ
ಸಿಕ್ಕ ಸಿಕ್ಕಲ್ಲಿ ಮಲಗಿ ಎದ್ದು
ಸಿಕ್ಕ ಸಿಕ್ಕಂಗೆ ಕೊಬ್ಬಿ ಬೆಳೆದೆ.

ಕಂಬದಂತ ಕಾಲು
ಹಳೇ ರುಬ್ಬು ಗುಂಡಿನಂತ ತಲೆ
ಉಕ್ಕಿನಂತ ಕೋಡು
ಬೆಂಕಿ ಉಂಡೆಯಂತ ಕಣ್ಣು

ಹೊಗೆ ಕಾರುವ ಹೊಳ್ಳೆ
ಕರ್ರಗೆ ಮಿರ ಮಿರ ಮಿಂಚುವ
ಸಣ್ಣ ಗುಡ್ಡದಂತ ದೇಹ
ನಡೆದಾಡುತಿದ್ದ ನೆಲ ನಡುಗುತಿತ್ತು
ಅಂತಕನ ಕೋಣದಂತೆ.

ಊರೊಳಗೆ ನುಗ್ಗಿದರೆ
ಸಾವನ್ನು ಕಂಡಂತೆ
ಓಡಿ ಹೋಗಿ
ಮಕ್ಕಳು ಮರಿ ಬಾಚಿಕೊಂಡು
ಬಯಲಲ್ಲಿ ಕಟ್ಟಿದ್ದ ದನ ಕರು ಕಣ್ಣಿ ಹರಿದು
ಬಾಗಿಲು ಹಾಕಿ ಕೊಳ್ಳುವರು;
ಕನಸಲ್ಲಿ ಕಂಡರೂ ಬೆಚ್ಚಿ ಬೀಳುವರು.

ನನ್ನ ದೇಹ, ಭಾವದಿ
ಮಾರಿದೇವಿ ಪರಿಭಾವಿಸಿ
ಕೇಡಿನ ಭೀತಿಯಲ್ಲಿ
ತಿರುಗಿ ಬೀಳರು
ಸಹಿಸಿ ನಡೆವರು.

ಅಂತ್ಯವಿಲ್ಲದದು ಯಾವುದಿದೆ ಈ ಲೋಕದಲಿ
ನನಗೂ ಬಂತು;
ಜಾತ್ರೆಯು ಗೊತ್ತಾಯಿತು
ಹುಡುಕಿಸಿ ತಂದರು ನನ್ನನ್ನು ಬಿಡದೆ
ಸುತ್ತಿಸಿದರು ಏಳೂರ ಮನೆ, ಮನೆಯನ್ನು.

ಪೂಜೆಯ ಮಾಡಿಸಿ
ಸುಲಭದಿ ಕಡಿಯಲು
ಪಟ್ಟೆ ಶಿರಕೆ ಎಣ್ಣೆ ಹೊಯ್ಯಿಸಿ
ಕೊಡತಿಯಲಿ ಗುದ್ದುತ್ತಿದ್ದರೆ
ಗುದ್ದು ಗುದ್ದಿಗೂ ಎದ್ದದ್ದು ಬೀಳುತಿತ್ತು ಜೀವ.

ಪಾಷಂಡಿಗಳು
ಕತ್ತರಿಸಿ ಎಸೆಯಲೊಲ್ಲರು!
ತೀರಿ ಹೋಗುತ್ತಿತ್ತಲ್ಲ! ಎಲ್ಲಾ!
ಎಚಿದೊರಲುತಿತ್ತು; ತರಹರಿಸುತಿತ್ತು ಜೀವ.

ಇವರವರೇ ಕೆಲವರು ಮಹಾನುಭಾವರು
ಹಿಂಸೆ ಬೇಡವೆಂದು ಸಾರಿ ಸಾರಿ ಹೇಳಿದರು
ಎಂದಿಗೂ ಕೇಳಿಲ್ಲ; ಕೇಳುವುದಿಲ್ಲ!
ಒಳ್ಳೆಯದನ್ನು ಹೇಳಿದ ಯಾರನ್ನೂ
ಸುಖವಾಗಿ ಸಾಯಲು ಬಿಟ್ಟಿಲ್ಲ
ನ್ಯಾಯವು ಇವರಿಗೆ ಒಂದಲ್ಲ; ಹೊಂದುವುದಿಲ್ಲ
ಜೀವ ಚಕ್ರದ ದುರ್ಬಳಕೆ ನಿಂತಿಲ್ಲ.

ಮೂಢ ನಂಬಿಕೆಯ
ಹೊಸ, ಹೊಸ ಬಟ್ಟೆಯುಟ್ಟುಕೊಂಡು
ಬಂಧು, ಬಳಗ ಕೂಡಿಕೊಂಡು
ಅಸಹಜ ಮಿಂಚನು ತುಂಬಿಕೊಂಡು
ವಿಧ, ವಿಧ ವಾದ್ಯಗಳ ಮೇಳದಲಿ
ಹಾಡುತ್ತ, ಕೂಗುತ್ತ, ಕುಣಿಯುತ್ತ,
ಉನ್ಮಾದ ಸೂಸುತ್ತ,
ಮೌರೆವಣಿಗೆಯಲಿ ಸಾಗಿದರು.

ಉತ್ತೇಜಿತ ಉತ್ಸವ ಗುಡಿಯನು ಸಾರಿತ್ತು
ಪೂಜೆಯು ಮೊದಲಾಯಿತು
ಸ್ಮಶಾನ ಮೌನವು ಕವಿಯಿತು
ಆರತಿಯಾಗಿ ಅಪ್ಪಣೆ ಹೊರಬಿತ್ತು
ಬಿದ್ದವು ತಲೆಗಳು ಸಾಲು, ಸಾಲಾಗಿ
ನನ್ನಿಂದ ಶುರುವಾಗಿ
ಕುರಿ, ಕೋಳಿ ತರುವಾಯ.

ನೋಡಿದರೆ…!
ಒಬ್ಬರ ತಲೆಯೂ ತಗ್ಗಿರಲಿಲ್ಲ
ಪಶ್ಚಾತ್ತಾಪದ ಒಂದು ಕ್ಷೀಣ ಶಬ್ಧವೂ ಕೇಳಿ ಬರಲಿಲ್ಲ.

ಸೃಷ್ಟಿಯಲಿ ಶ್ರೇಷ್ಠರೆನ್ನುವರು
ವಿಚಾರಿಸರು
ನಂಬಿಕಯಲಿ ಯಾವುದನ್ನೂ!!
ಸ್ವಹಿತವಾದಿಗಳು ಏನು ಮಾಡಲು ಹೇಸರು
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...