Home / ಕವನ / ಕವಿತೆ / ನನ್ನೂರ ಬಾಲೆ

ನನ್ನೂರ ಬಾಲೆ

ನನ್ನೂರ ಬಾಲೆ
ರಸ ಕಾವ್ಯ ನವ್ವಾಲೆ
ಸಿಹಿ ನೀರ ತರಲೆಂದು ಅಂಗಳಕ ಇಳಿದಳಂದರೆ…
ಓಣಿಯ ಗಂಡು ಹೆಣ್ಣು ಒಟ್ಟಾಗಿ
ತೇಜಃ ಪುಂಜವು ಕಂಡಂತೆ
ಬಿಟ್ಟ ಕಣ್ಣು ಬಿಟ್ಟಂತೆ ನೋಡುತ್ತ ನಿಲ್ಲುವರು.

ಅವಳೋ… ಕಂಡವರ ಕಣ್ಣುಗಳು ಕೆಟ್ಟದಿದು ಅನ್ನದ ಹಾಗೆ
ಸೂಕ್ಷ್ಮವಾಗಿ ಅತ್ತಿತ್ತ ನೋಡುತ್ತ
ಏನನ್ನೋ ಹುಡುಕುತ್ತ
ತೇಲುತ್ತ ನಡೆಯುವಳು ಚಾಣಾಕ್ಷಿ

ಒಳಗಿರುವ ಜೀವ
ಹೊರಗೆಲ್ಲೂ ಸುಳಿಯದಿರಲು
ಒಂದೆಳೆ ಕುಗ್ಗುವಳು ತರಳೆ
ಎಳೆ ಬಾಳೆ ಸುಳಿಗೆ ಬೆಂಕಿ ಝಳವು ಸೋಕಿದಂತೆ.

ಯಾಕಿಲ್ಲ ಯಾಕಿಲ್ಲ ವೆನುತಲಿ
ತನ್ನನ್ನು ತಾನೇ ಸಂಭಾಳಿಸಿ ಕೊಳುತಲಿ
ಸೇದೊ ಬಾವಿಯ ಸಾರುವಳು ಅಭಿಸಾರಿಕೆ.

ಮನಸಿಲ್ಲದ ಮನಸಿನಲಿ
ಆಗಲೂ ಅವಲೋಕನ ಮುಂದುವರಿಸಿ
ಕಂಠಕ್ಕೆ ಸರಕುಣಿಕೆ ಬಿಗಿವಳು
ಬಾವಿಯಲಿ ಇಳಿಬಿಟ್ಟು
ಗುಳು ಗುಳು ತುಂಬಿಸುವಳು ಕೊಡಗಳ.

ಕಲ್ಲು ಕಟ್ಟೆಯ ಪದ್ದಿಗೆ ತುಸುವೆ ಎಡ ಪಾದವ ತೂರಿಸಿ
ಹಾರುತ್ತ, ಹಾರುತ್ತ ಸೆಳೆಯುವಳು ಮೇಲೆ
ನೋಡುವ ಕಣ್ಣಿಗೆ ಹಬ್ಬವನು ತರುವಂತ ಲಾಸ್ಯದಲಿ
ಜಾನಪದ ಲೋಕದ ಐಸಿರಿ; ಕನ್ನಡ ಕುವರಿ.

ತುಂಬಿದ ಕೊಡದಂತ ಹುಡುಗಿ.
ತಲೆಯ ಮೇಲೊಂದು ಎಡದ ನಡುವಲ್ಲೊಂದು ಕೊಡವ
ಬಾಳೆ ಬಾಹುಗಳಲ್ಲಿ ಅವುಕಿ ಹಿಡಿದು
ಭಾರವನು ತೋಲಿಸುತ
ಹೆಜ್ಜೆಯನು ಹಾಕುವಳು ತ್ರಿಭಂಗಿ ಮುದ್ರೆಯಲಿ
ನನ್ನೂರ ಬೆಡಗಿನ ಬಿಡದಿ.

ಸಾಲದು ಎಂಬಂತೆ
ಹುಡುಕಿ ಹುಡುಕಿ ಮುತ್ತಿಟ್ಟ ಆ ತುಂಟ ಸೂರ್ಯ
ಮೂಗುತಿ ಮೇಲೆ ತುಳುಕಿದ ಹನಿಯೊಂದ
ಸುರ ಬಿಲ್ಲು ಮೂಡಿದವು.
ಅಂದಕ್ಕೆ ಮಕುಟವಿಟ್ಟಂತಾಯ್ತು.

ಮರೆಯಲ್ಲಿ ನಿಂತು
ಬಿಡದೆ ಎಲ್ಲವನು ಆಸ್ವಾದ ಮಾಡುತ್ತಿದ್ದ ಪೋರ
ಅಂತರಂಗದ ಚೋರ
ಇದುವೆ ಸಮಯವೆಂದ
ಛಂಗನೆ ಹೊರ ಜಿಗಿದು ಎದುರಿಗೆ ನಡೆದು ಬಂದ.

ಫಕ್ಕನೆ ಮಿನುಗಿದವು ಕಣ್ಣು
ಎದೆಯ ಸೆರಗು ಬೇರೆ ಸರಿದಿತ್ತು
ನಾಚಿ ರಂಗೇರಿ ಮುಖದಿರುವೆ
ತಾರಕದಲಿ ಮಿಡಿಯಿತು ಮಿದು ಹೃದಯದ ವೀಣೆ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...