ಬಿಸಿಲ ನಾಡಿನ ಬೇಸಿಗೆ

ಆಡಿ ಹಗುರವಾಗಲೇನಲ್ಲ! ನಿಜ!
ಕೇಳಿ ಬಿಸಿಲ ನಾಡಿನ ಬವಣೆ.

ರವಿ
ಹತ್ತಿರವೆ ಸರಿದವನಂತೆ
ಉದಯಾಸ್ತಗಳಲಿ ಒಗ್ಗರಣೆಗೆ ಸೌಮ್ಯನಾಗಿ
ಉಳಿದಂತೆ ಬೆಂಕಿ ಬಿಸಿಲನು ಕಾರಿ
ಕಾಲಗಳ ಕತ್ತು ಹಿಸುಕಿ
ಜೀವಗಳ ಜೀವಂತ ಬೇಯಿಸುವನು.

ಗಾಳಿ
ಎಲ್ಲೋ ಬಂಧಿಯಾಗಿ
ಸುಳಿಯದೆ
ಜೀವಕ್ಕೆ ಬಿಸಿಲ ಜ್ವರ ಬಡಿಸಿ
ಮೈ ಮನ ಕೆಂಡ ಮಾಡಿ
ಆಂತಿಕಾವಸ್ಥೆ ತಲುಪಿಸಿ
ನರಳಾಡಿಸುವುದು.

ಧಗೆ.
ಹೊರಗೂ ಒಳಗೂ ತಕ್ಕೈಸಿ
ನೆಲ್ಲು ಕಣ ಮಾಡುವಾಗ ಹಾರಿ
ಬೆವರಿಳಿವ ಮೈಯನ್ನೇರಿ ಕಚ್ಚುವ
ಅಸಾಧ್ಯ ತುರಿಕೆ ತರುವ ಸುಂಕಿನಂತೆ
ಜೀವ ಕಸಿವಿಸಿಗೊಳಿಸುವುದು.

ಗಿಡ ಮರಗಳು
ಮಾಟಕ್ಕೆ ಮಣಿದವರಂತೆ
ಸ್ಥಬ್ದವಾಗಿ
ಸೂತಕದ ಮನೆಯ ಜನರಂತೆ
ಅರಕ್ತ ಮುಖವ ಹೊತ್ತು
ಚಿತ್ರದಂತೆ ನಿಂತು ಕೊಲ್ಲುವವು.

ಬೆಟ್ಟ ಗುಡ್ಡಗಳು
ಅರುಣನ ವಿಕಟ ಅಟ್ಟಹಾಸಕ್ಕೆ ಶರಣಾಗಿ
ಬೆಂಕಿ ಉಂಡೆಗಳಾಗಿ
ಅಸ್ತವಾದ ಬಹು ಹೊತ್ತಿನವರೆಗೂ ಕಾವು ಕಕ್ಕಿ
ಜೀವಕ್ಕೆ ತಹತಹಿಕೆ ತರುವವು.

ಮಣ್ಣು
ನಿರುಪಾಯವಾಗಿ
ನಿರ್ದಯ ರವಿಯು ಕಾರುವ ಎಲ್ಲಾ ಉರಿ ಹೀರಿ
ಬಿರಿದು ಧೂಳಾಗಿ, ಮೇಲೇರಿ
ಒಡಲೊಳಗಿನ ಉರಿಯನ್ನು ಸೇರಿಸಿ
ಪರಿಸರ ಪೂರ ಕುಂಬಾರನ ಆವಿಗೆಯ ಮಾಡಿ
ಜೀವದ ಸಮಾಧಾನ ಕೆಡಿಸುವುದು.

ತಾಯಿ ತುಂಗಭದ್ರೆ
ದುರ್ಭರ ಬದುಕಿನ ಬೇಗೆಯಲಿ ಬೆಂದ ಜೀವದಂತೆ
ಬಲ, ಚೆಲುವು ಸೋರಿಹೋಗಿ.
ಅಸ್ಥಿ ಪಂಜರದಂತೆ ವಿಕಾರವಾಗಿ
ಧಿಗ್ಗನೆ ಎದುರಾದರೆ ಹೃದಯ ಸ್ಥಂಭಿಸುವ
ಭೂತದಂತಾಗಿದ್ದಾಳೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರಕೃತಿಬಲ
Next post ಹಾಗೂ ಹೀಗೂ ದಿನದ ಗುಣವೇ ಕುಸಿದಿರಲಿನ್ನೆನ್ನದೇನು ?

ಸಣ್ಣ ಕತೆ

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…