Home / ಕವನ / ಕವಿತೆ / ಸಿರಿಗೊಂಬೆ

ಸಿರಿಗೊಂಬೆ

ಒಳ್ಳೆ
ಉಗಾದಿ ಹೊಂಗೆ ಮರದ್ಹಂಗೆ
ತಬ್ಬೊ ಹಂಗಿದ್ದೆ…
ನೋಡಿದ ಯಾರಿಗೂ
ಇನ್ನೊಂದ್ಸಾರಿ
ನೋಡೋ ಅಂಗಿದ್ದೆ

ಹೇಳೋದೇನು
ನಿನ್ನನ್ನೋಡಿದ ಮಾನವ್ರೆಲ್ಲಾ
ಅಬ್ಬಬ್ಬಾ! ಏನು ಚೆಲುವು; ಎಂತಾ ಸಿರಿಗೊಂಬೆ
ಕೆಟ್ಟ ಕಣ್ಣಿಲಿ ನೋಡಿದ್ರೆ
ಸಿಡಿಯಂಗೈದಳನ್ತಿದ್ರು.

ಏನಿಲ್ಲ ಅಂದ್ರು
ಕೊನೆಗೆ
ನಿನ್ನ ಕಯ್ಯಾರ
ಒಂದು ಲೋಟ ನೀರನ್ನಾದ್ರು ಕುಡಿಬೇಕು
ಅನ್ಸೋ ಅಂಗಿದ್ದೆ.

ನಿನ್ನ ಗಮನ ಸೆಳ್ಯೋಕೆ
ಒಂದು ಸೊಲ್ಲು ನುಡಿಸೋಕೆ
ತಮ್ಮ ತಮ್ಮಲ್ಲೆ ಪಂದ್ಯ ಕಟ್ಕೊತಿದ್ರು
ಏನೇನೋ ಮಾಡ್ತಿದ್ರು
ನಮ್ಮ ಊರ ಹುಡುಗರು.

ನೀನು
ಸುಮ್ನೆ ಅಂಗೆ ನೋಡಿದ್ರು
ಉಪ್ಚಾರಕೆಂದೆ ಆಡಿದ್ರು
ಸ್ವರ್ಗ ಸಿಕ್ಕಂಗಾಡ್ತಿದ್ರು.

ಏನ್ ತಿಂದು ಮಾಡಿದ್ರು
ಒಂದ್ಸಾರಿನಾದ್ರು ನೀನು
ಕಣ್ಣಿಗೆ ಬೀಳದಿದ್ರೆ
ಆವೊತ್ತೆಲ್ಲಾ…
ಏನೋ ಕಳಕಂಡಂಗೆ… ಒಳಗೊಳಗೆ

ನೀನು
‘ಸ್ವಾಮಿ’ ಹುಟ್ಟಾಕಿಂತ ಮುಂಚೆ
ಮನೆ ಕೆಲ್ಸ ಎಲ್ಲಾ ಮುಗ್ಸಿ
ನಿತ್ಯದಂತೆ ಹೋಲಕೆ ಹೊರಟು ನಿಂತರೆ…

ಎದ್ದ ಕೂಡ್ಲೆ
ನಿನ್ನ ಕಂಡು
ಖುಷಿಗೊಂಡ ಹಕ್ಕಿ ಪಕ್ಷಿ
ಉದಯರಾಗ ಹಾಡ್ತಿದ್ವು.

ಆತುರ ತಡೆಯದ ಆ ‘ಸೂರ್‍ಜ’
ನಿನ್ನ ನೋಡಾಕೆ
ಮರ ಮಂಡಿ ತೆರೆ ಸರ್‍ಸಿ
ಇಣಕ್ ಹಾಕಿದ್ದ.

ನಿನ್ನ ಹುಚ್ಚು ತುಂಬಿಕೊಂಡ
ಹಾದಿಬದಿ ಗಿಡ ಮರ
ಒಮ್ಮೆಗೆ ಎಚ್ಚೆತ್ತು…
ನಿಂತಲ್ಲೆ ಮುಲು ಮುಲುಗುಟ್ತಿದ್ವು.

ನಮ್ಮನ್ನಾರು ಕೇಳ್ತಾರಕ್ಕ
ನಿನ್ನ ತಲ್ಯಾಗಾದ್ರು ಇದ್ರೆ ಒಂದು ಸಾರ್ಥಕ
ನನ್ನ ಎತ್ಗೊ ನನ್ನ ಎತ್ಗೊ
ಬಾರೆ… ನಮ್ಮಕ್ಕ ಎಂದು
ಬಾಯ್ಬಿಟ್ ಕರಿತಿದ್ವು
ಬಣ್ಣ ಬಣ್ಣದ ಬಳ್ಳಿ ಬೇಲಿ ಹೂವು.

ಒಂದೊಂದು
ಒಂದೊಂದು ರೀತಿ
ಸವಿ ಸವಿ ಗಂಧ ಸೂಸಿ
ಪೈಪೋಟಿ ನಡೆಸ್ತಿದ್ವು.

ಹೋಗ್ಗ! ಆ ಮಣ್ಣಿಗೂ ಏನು ಮೋಹ
ನಾನ್ ಬೇರೆ ಕಾಣೆ
ಇಬ್ಬನಿ ಬಿದ್ದು ತಣ್ಣಗಾಗಿದ್ರು
ನಿನ್ನ ಪಾದ ಸೋಕಿದ ಕೂಡ್ಲೆ
ಮೆತ್ಗಂಬುಡ್ತಿತ್ತು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...