Home / ಕವನ / ಕವಿತೆ / ಸಿರಿಗೊಂಬೆ

ಸಿರಿಗೊಂಬೆ

ಒಳ್ಳೆ
ಉಗಾದಿ ಹೊಂಗೆ ಮರದ್ಹಂಗೆ
ತಬ್ಬೊ ಹಂಗಿದ್ದೆ…
ನೋಡಿದ ಯಾರಿಗೂ
ಇನ್ನೊಂದ್ಸಾರಿ
ನೋಡೋ ಅಂಗಿದ್ದೆ

ಹೇಳೋದೇನು
ನಿನ್ನನ್ನೋಡಿದ ಮಾನವ್ರೆಲ್ಲಾ
ಅಬ್ಬಬ್ಬಾ! ಏನು ಚೆಲುವು; ಎಂತಾ ಸಿರಿಗೊಂಬೆ
ಕೆಟ್ಟ ಕಣ್ಣಿಲಿ ನೋಡಿದ್ರೆ
ಸಿಡಿಯಂಗೈದಳನ್ತಿದ್ರು.

ಏನಿಲ್ಲ ಅಂದ್ರು
ಕೊನೆಗೆ
ನಿನ್ನ ಕಯ್ಯಾರ
ಒಂದು ಲೋಟ ನೀರನ್ನಾದ್ರು ಕುಡಿಬೇಕು
ಅನ್ಸೋ ಅಂಗಿದ್ದೆ.

ನಿನ್ನ ಗಮನ ಸೆಳ್ಯೋಕೆ
ಒಂದು ಸೊಲ್ಲು ನುಡಿಸೋಕೆ
ತಮ್ಮ ತಮ್ಮಲ್ಲೆ ಪಂದ್ಯ ಕಟ್ಕೊತಿದ್ರು
ಏನೇನೋ ಮಾಡ್ತಿದ್ರು
ನಮ್ಮ ಊರ ಹುಡುಗರು.

ನೀನು
ಸುಮ್ನೆ ಅಂಗೆ ನೋಡಿದ್ರು
ಉಪ್ಚಾರಕೆಂದೆ ಆಡಿದ್ರು
ಸ್ವರ್ಗ ಸಿಕ್ಕಂಗಾಡ್ತಿದ್ರು.

ಏನ್ ತಿಂದು ಮಾಡಿದ್ರು
ಒಂದ್ಸಾರಿನಾದ್ರು ನೀನು
ಕಣ್ಣಿಗೆ ಬೀಳದಿದ್ರೆ
ಆವೊತ್ತೆಲ್ಲಾ…
ಏನೋ ಕಳಕಂಡಂಗೆ… ಒಳಗೊಳಗೆ

ನೀನು
‘ಸ್ವಾಮಿ’ ಹುಟ್ಟಾಕಿಂತ ಮುಂಚೆ
ಮನೆ ಕೆಲ್ಸ ಎಲ್ಲಾ ಮುಗ್ಸಿ
ನಿತ್ಯದಂತೆ ಹೋಲಕೆ ಹೊರಟು ನಿಂತರೆ…

ಎದ್ದ ಕೂಡ್ಲೆ
ನಿನ್ನ ಕಂಡು
ಖುಷಿಗೊಂಡ ಹಕ್ಕಿ ಪಕ್ಷಿ
ಉದಯರಾಗ ಹಾಡ್ತಿದ್ವು.

ಆತುರ ತಡೆಯದ ಆ ‘ಸೂರ್‍ಜ’
ನಿನ್ನ ನೋಡಾಕೆ
ಮರ ಮಂಡಿ ತೆರೆ ಸರ್‍ಸಿ
ಇಣಕ್ ಹಾಕಿದ್ದ.

ನಿನ್ನ ಹುಚ್ಚು ತುಂಬಿಕೊಂಡ
ಹಾದಿಬದಿ ಗಿಡ ಮರ
ಒಮ್ಮೆಗೆ ಎಚ್ಚೆತ್ತು…
ನಿಂತಲ್ಲೆ ಮುಲು ಮುಲುಗುಟ್ತಿದ್ವು.

ನಮ್ಮನ್ನಾರು ಕೇಳ್ತಾರಕ್ಕ
ನಿನ್ನ ತಲ್ಯಾಗಾದ್ರು ಇದ್ರೆ ಒಂದು ಸಾರ್ಥಕ
ನನ್ನ ಎತ್ಗೊ ನನ್ನ ಎತ್ಗೊ
ಬಾರೆ… ನಮ್ಮಕ್ಕ ಎಂದು
ಬಾಯ್ಬಿಟ್ ಕರಿತಿದ್ವು
ಬಣ್ಣ ಬಣ್ಣದ ಬಳ್ಳಿ ಬೇಲಿ ಹೂವು.

ಒಂದೊಂದು
ಒಂದೊಂದು ರೀತಿ
ಸವಿ ಸವಿ ಗಂಧ ಸೂಸಿ
ಪೈಪೋಟಿ ನಡೆಸ್ತಿದ್ವು.

ಹೋಗ್ಗ! ಆ ಮಣ್ಣಿಗೂ ಏನು ಮೋಹ
ನಾನ್ ಬೇರೆ ಕಾಣೆ
ಇಬ್ಬನಿ ಬಿದ್ದು ತಣ್ಣಗಾಗಿದ್ರು
ನಿನ್ನ ಪಾದ ಸೋಕಿದ ಕೂಡ್ಲೆ
ಮೆತ್ಗಂಬುಡ್ತಿತ್ತು.
*****

Tagged:

Leave a Reply

Your email address will not be published. Required fields are marked *

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...