Home / ಕವನ / ಕವಿತೆ / ಆತ್ಮಾನುರಾಗ

ಆತ್ಮಾನುರಾಗ

ಓ ಶಿವೆಯೇ !
ಮಲ್ಲಿಗೆ ಹೂ ಬನದ ನಿವಾಸಿಯೇ…
ಪ್ರೇಮದೆದೆಯ ನಡೆಮಡಿಯ ಹಾಸಿನ ಮೇಲೆ
ಹೂಪಾದ ಮುದ್ರೆಯನೊತ್ತುತ್ತ ಬಾರೆ.

ನಿನ್ನ ದರ್ಶಿಸುವ
ಲೆಕ್ಕವಿರದ ಮೆಚ್ಚುಗೆಯ ನಯನಗಳಲಿ
ಯುಗಾದಿ ಹಬ್ಬದ ಚಿಗುರು ಚಿಗುರು
ಮಾವು, ಬೇವು ಹೊಂಗೆ ತರುಗಳ
ಕುಂದದ ಸೊಂಪು, ತಂಪನೆರೆಯ ಬಾರೆ.

ಜಾಜಿ, ಮಲ್ಲಿಗೆ, ಸಂಪಿಗೆ, ಸೇವಂತಿಗೆ ತೋಟದಲಿ
ಮಧುವ ಹೀರುತ್ತಾ ಮೈಮರೆವ
ಬಣ್ಣ ಬಣ್ಣದ ಚಿಟ್ಟೆ, ದುಂಬಿಗಳ
ಕೇಳಿ ಕಲರವ ಗೋಷ್ಠಿಯ ರಸಾನಂದ
ವಿಹಾರಕ್ಕೆ ನೇತಾರಳಾಗಿ ಬಾರೆ.

ಸಗ್ಗದಾಘ್ರ್‍ಆಣಕ್ಕೆ ವಶವಾಗಿ
ಎಗ್ಗಿಲ್ಲದೆ ಮಾಡು, ಗೂಡುಗಳ ಮಾಡಿಕೊಂಡು
ಚಿತ್ತಾರದ ವರ್ಣಮಯ ತನುಗಳಲಿ
ರುದ್ರ ಭೀಕರ ಹೊರಳು, ಸುರುಳಿಗಳಲಿ ಮಲೆತಿರುವ
ಸನಿಹ ಸಾರೆ ಪೂತ್ಕರಿಸುವ
ಕ್ಷಣ ಮರೆಯೆ ಯಮ ಸದನಕ್ಕಟ್ಟುವ
ಸರ್ಪ ಬಗೆಗಳ ಮಣಿಸಿ
ಪ್ರೇಮ ಕೇದಿಗೆಯ ಮುಡಿಸ ಬಾರೆ.

ವಿಜ್ಞಾನ, ತಂತ್ರಜ್ಞಾನದ ನೇತ್ಯಾತ್ಮಕ ಪ್ರಭಾವದಲಿ
ಶ್ರಮದ ಸೊಲ್ಲೂ ಕೇಳ ಬಯಸದ
ಭೋಗ ಸಂಸ್ಕೃತಿಯ ಬೆನ್ನು ಬಿದ್ದಿರುವ

ಮಾರಿಗೆ ಸಂಸ್ಕೃತಿ ಅಪ್ಪಿ
ಜನ್ಮಜಾತ ಗುಣ, ನೀತಿಗೆ ತಿಲಾಂಜಲಿಯನಿತ್ತು
ಹಾಡುವುದನ್ನೇ ಮರೆತಿರುವ ಮಾನವ ಕೋಗಿಲೆಗಳ
ಜಾಗೃತಗೊಳಿಸುವ ಚಿತ್ತ ಚೇತನಿಯೆ ಬಾರೆ.

ಶುದ್ಧ ಸಲಿಲದಿ ತುಂಬಿ
ಜುಳು ಜುಳು ನಾದ ಮಾಡುತ್ತಾ
ನರ್ತಕಿಯ ಲಾಸ್ಯದಲಿ ಪ್ರವಹಿಸುವ ಹಿರಿಯ ತರಂಗಿಣಿಯ
ಇಕ್ಕೆಲದಲಿ ಸೊಕ್ಕಿ ಬೆಳೆದು
ವಸಂತನಾಗಮನದಿ ನವ ಜೀವದಾಂಗುಡಿಯ
ಗುಡಿಯಂತಿರುವ
ಮಾಮರಗಳೆದೆಯಲ್ಲಡಗಿ
ಅಮೃತ ಗಾನಧಾರೆಯ ಹರಿಸುವ
ಕೋಗಿಲೆ ಸಂಕುಲದ ಮುಂದಾಳಾಗಿ ಬಾರೆ.

ಭುವನ ಭಾಗ್ಯನು ಮೂಡಿ ಬರುವ ಪ್ರಶಸ್ತ ಕಾಲದಲಿ
ಕೀಟ, ಪಕ್ಷಿ, ಪ್ರಾಣಿಗಳು
ಆನಂದದಲಿ ದನಿಗೆ ದನಿ ಬೆರೆಸಿ
ಹೊಮ್ಮಿಸುವ ದಿವ್ಯಗಾನ ಧಾರೆಯಾಸ್ವಾದನೆಯಲಿ
ಒತ್ತೊತ್ತಿ ಕುಳಿತು
ಹೃದಯದಲಿ ಹೃದಯ ಬೆಸೆಯುವ
ಜೀವ ಸೊಬಗಿನ ದರ್ಶನವ ಮಾಡಿಸುವ
ಸತ್ಯ ಪ್ರೇಮವೇ ಮೈವೆತ್ತ ಮೂರುತಿಯಾಗಿ ಬಾರೆ
ಬಾ! ಬಾರೆ ಶಿವೆ!
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...