Home / ಕವನ / ಕವಿತೆ / ಕಾಲಾತೀತ ತಲಬು

ಕಾಲಾತೀತ ತಲಬು

ಇದ್ದ ಬಿದ್ದ ಶಕ್ತಿಯನ್ನೆಲ್ಲಾ ಇಡಿಯಾಗಿಸಿ
ಕೊಂಡು ಹೊರಟೆ, ಉನ್ಮಾದ ತಡೆಯಲಾರದೇ
ಬಾಯಿ ತೆರೆದುಕೊಂಡೆ.
ಈಗ ಮೆಲ್ಲಲೇಬೇಕು ಕವಳ.
ಚಟ ಎಷ್ಟೆಂದರೂ ಚಟವೇ:
ಹುಡುಕಿದರೂ ಸಿಗಲಿಲ್ಲ ಸಂಚಿಯಲ್ಲಿ ನಾಲ್ಕಾಣೆ
ಹಂಗೆಲ್ಲ ಸಿಕ್ಕುವ ಸರಕಲ್ಲ.
ಎದುರಿಗೆ ಅದೇ ಹಳೆಯ ಶತ್ರು
ಹಲ್ಲುಗಿಂಜುತ್ತ
ಧನದ ಥಾಲಿ ಹಿಡಿದ ಕೋರೆದಂತಗಳ ಧನಿಕ.

ಹಂಬಲಿಸಿ ಲೇಪಿಸಿದ ಲಿಪಸ್ಟಿಕ್ಕು,
ಕ್ರೀಮು, ಮುಖಬಣ್ಣಗಳು
ಸೋತು ಸುಣ್ಣವಾಗಿವೆ.
ಒತ್ತಿ ಕುಳಿತುಕೊಳ್ಳಲಾಗದೇ ಶತ್ರುವಿನಂತೆ.
ಕಾಲನ ಕೈಯಲ್ಲಿ ಸಿಕ್ಕು ತರಗೆಲೆಗಳಂತೆ
ಮುದುಡಿ,
ತುಪ್ಪೆಯಾಗಿರುವ ಚರ್ಮದ
ಸುಕ್ಕು ನೋಡಿ ಮುಸಿ ಮುಸಿ ನಗುತ್ತ,
ಲೇವಡಿ ಮಾಡುತ್ತಿವೆ ಶತ್ರುವಿನಂತೆ

ಈಗಷ್ಟೇ ಬಿಚ್ಚಿಟ್ಟ ಬಳೆ ಮಂಗಮಾಯವಾದಂತೆ.
ಹುಡುಕಿ ಹುಡುಕಿ ಸಾಕಾಗಿ
ಪ್ರಾಯ ದಕ್ಕಿಸಿಕೊಟ್ಟ ಶತ್ರುವಿಗೆ ಹಿಡಿಶಾಪ ಹಾಕುತ್ತ
ಕೈ ನೋಡಿಕೊಂಡೆ.
ಅರೇ ಯಾವಾಗ ಕೈ ಸೇರಿತು,
ಮಂದಿ ಮಗಂದು?
ಜಿಗುಪ್ಸೆಯಾದರೂ ಚಿನ್ನಚಿನ್ನವೇ?
ಶತ್ರುವಾದರೇನು?

ಮೇಲಿನ ಕೇರಿ ಮಾಯಣ್ಣನ ಮಗಳು
ಮೈನೆರೆದಾಳಂತೆ. ದೇವರಿಗೆ ಬಿಡ್ತಾರಂತೆ.
ಅದಕ್ಕೆ ಬಳೆ ನೆನಪಾಯ್ತು.
“ಹೀರೇಕಿ ನೀನು, ನಿತ್ಯ ಸುಮಂಗಲಿ.
ಹರಸಿ ಹೋಗು ಬಾ.” ಎಂದಿದ್ದ.
ಯಾವ ಕಾಲದಲ್ಲಿದ್ದಾನೆ ಮಾಯಣ್ಣ.
ಕಾಲ ಯಾವುದಾದ್ರೇನೂ ಈಗೆಲ್ಲ
ಹೈಟೆಕ್ಕು ಕಾಲವಂತೆ.
ಹೊಸ ನಮೂನೆ ದಂಧೆಗಳು.

ಗೊನೆ ಕಡಿದ ಬಾಳೆಹಂಗೆ ಬದುಕು.
ಹರಕು ಚಾಪೆ ಹಂಗೆ ದೇಹ
ಆಗುತ್ತೆ ಅಂತ ಗೊತ್ತಿಲ್ಲೇನು?
ಕಟಕಟ ಹಲ್ಲುಕಡಿಯೋದ ಬಿಟ್ಟು
ಬೇರೇನೂ ಮಾಡೋಕಾಗಲ್ಲ.
ಹರಕು ಕಚ್ಚೆ ಧಣಿಗೂ
ಮೆಳ್ಳೆಗಣ್ಣ ಪೂಜಾರಿಗೂ ಬೆಂಕಿ ಹಾಕ.
ಅರೇ ಶತ್ರು ಅಂದ್ರೆ ಯಾರು?
ಈ ಕವಳದ ತಲುಬಿಗಿಷ್ಟು
ಹೊಗೆ ಹಾಕ. ತೂ.. ತೂ…
*****

Tagged:

Leave a Reply

Your email address will not be published. Required fields are marked *

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...