Home / ಕವನ / ಕವಿತೆ / ಕಾಲಾತೀತ ತಲಬು

ಕಾಲಾತೀತ ತಲಬು

ಇದ್ದ ಬಿದ್ದ ಶಕ್ತಿಯನ್ನೆಲ್ಲಾ ಇಡಿಯಾಗಿಸಿ
ಕೊಂಡು ಹೊರಟೆ, ಉನ್ಮಾದ ತಡೆಯಲಾರದೇ
ಬಾಯಿ ತೆರೆದುಕೊಂಡೆ.
ಈಗ ಮೆಲ್ಲಲೇಬೇಕು ಕವಳ.
ಚಟ ಎಷ್ಟೆಂದರೂ ಚಟವೇ:
ಹುಡುಕಿದರೂ ಸಿಗಲಿಲ್ಲ ಸಂಚಿಯಲ್ಲಿ ನಾಲ್ಕಾಣೆ
ಹಂಗೆಲ್ಲ ಸಿಕ್ಕುವ ಸರಕಲ್ಲ.
ಎದುರಿಗೆ ಅದೇ ಹಳೆಯ ಶತ್ರು
ಹಲ್ಲುಗಿಂಜುತ್ತ
ಧನದ ಥಾಲಿ ಹಿಡಿದ ಕೋರೆದಂತಗಳ ಧನಿಕ.

ಹಂಬಲಿಸಿ ಲೇಪಿಸಿದ ಲಿಪಸ್ಟಿಕ್ಕು,
ಕ್ರೀಮು, ಮುಖಬಣ್ಣಗಳು
ಸೋತು ಸುಣ್ಣವಾಗಿವೆ.
ಒತ್ತಿ ಕುಳಿತುಕೊಳ್ಳಲಾಗದೇ ಶತ್ರುವಿನಂತೆ.
ಕಾಲನ ಕೈಯಲ್ಲಿ ಸಿಕ್ಕು ತರಗೆಲೆಗಳಂತೆ
ಮುದುಡಿ,
ತುಪ್ಪೆಯಾಗಿರುವ ಚರ್ಮದ
ಸುಕ್ಕು ನೋಡಿ ಮುಸಿ ಮುಸಿ ನಗುತ್ತ,
ಲೇವಡಿ ಮಾಡುತ್ತಿವೆ ಶತ್ರುವಿನಂತೆ

ಈಗಷ್ಟೇ ಬಿಚ್ಚಿಟ್ಟ ಬಳೆ ಮಂಗಮಾಯವಾದಂತೆ.
ಹುಡುಕಿ ಹುಡುಕಿ ಸಾಕಾಗಿ
ಪ್ರಾಯ ದಕ್ಕಿಸಿಕೊಟ್ಟ ಶತ್ರುವಿಗೆ ಹಿಡಿಶಾಪ ಹಾಕುತ್ತ
ಕೈ ನೋಡಿಕೊಂಡೆ.
ಅರೇ ಯಾವಾಗ ಕೈ ಸೇರಿತು,
ಮಂದಿ ಮಗಂದು?
ಜಿಗುಪ್ಸೆಯಾದರೂ ಚಿನ್ನಚಿನ್ನವೇ?
ಶತ್ರುವಾದರೇನು?

ಮೇಲಿನ ಕೇರಿ ಮಾಯಣ್ಣನ ಮಗಳು
ಮೈನೆರೆದಾಳಂತೆ. ದೇವರಿಗೆ ಬಿಡ್ತಾರಂತೆ.
ಅದಕ್ಕೆ ಬಳೆ ನೆನಪಾಯ್ತು.
“ಹೀರೇಕಿ ನೀನು, ನಿತ್ಯ ಸುಮಂಗಲಿ.
ಹರಸಿ ಹೋಗು ಬಾ.” ಎಂದಿದ್ದ.
ಯಾವ ಕಾಲದಲ್ಲಿದ್ದಾನೆ ಮಾಯಣ್ಣ.
ಕಾಲ ಯಾವುದಾದ್ರೇನೂ ಈಗೆಲ್ಲ
ಹೈಟೆಕ್ಕು ಕಾಲವಂತೆ.
ಹೊಸ ನಮೂನೆ ದಂಧೆಗಳು.

ಗೊನೆ ಕಡಿದ ಬಾಳೆಹಂಗೆ ಬದುಕು.
ಹರಕು ಚಾಪೆ ಹಂಗೆ ದೇಹ
ಆಗುತ್ತೆ ಅಂತ ಗೊತ್ತಿಲ್ಲೇನು?
ಕಟಕಟ ಹಲ್ಲುಕಡಿಯೋದ ಬಿಟ್ಟು
ಬೇರೇನೂ ಮಾಡೋಕಾಗಲ್ಲ.
ಹರಕು ಕಚ್ಚೆ ಧಣಿಗೂ
ಮೆಳ್ಳೆಗಣ್ಣ ಪೂಜಾರಿಗೂ ಬೆಂಕಿ ಹಾಕ.
ಅರೇ ಶತ್ರು ಅಂದ್ರೆ ಯಾರು?
ಈ ಕವಳದ ತಲುಬಿಗಿಷ್ಟು
ಹೊಗೆ ಹಾಕ. ತೂ.. ತೂ…
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...