Home / ಕವನ / ಕವಿತೆ / ಗೂಸಬಮ್ಸ ನಿರೀಕ್ಷೆಯಲ್ಲಿ

ಗೂಸಬಮ್ಸ ನಿರೀಕ್ಷೆಯಲ್ಲಿ

ಕಡಲ ತಡಿಯಲ್ಲಿ ನಿಂತು
ವಿರುದ್ಧ ಮುಖವಾಗಿ
ಚಿತ್ತೈಸಿದರೆ ಎಂಥ ಸಹಜತೆ
ಲ್ಯಾಂಡಸ್ಕೇಪ್ ಮಾಡಿದ
ಮಹಾನ್ ತೋಟಗಾರನೊಬ್ಬ
ಅಂಚಂಚನ್ನು ಬಿಡದೆ
ಕಲೆಯ ಗ್ಯಾಲರಿಯನ್ನೆ ಇಳಿಬಿಟ್ಟ ಹಾಗೆ.
ನೋಡುತ್ತ ಮೈಮೇಲೆ
ಗೂಸಬಮ್ಸಗಾಗಿ ಕಾದೆ.

ಗಗನ ಚುಂಬಿ ಕಟ್ಟಡದ
ಏರುವ ಇಳಿಯುವ
ಎಸ್ಕಲೇಟರಗಳ ಮೇಲೆ
ಕಿರು ಸೊಂಟದ
ಏಳು ಮಲ್ಲಿಗೆ ತೂಕದ ಹೆಣ್ಣುಗಳನ್ನು
ಧಡೂತಿ ತೊಡೆಗಳ ಇಳಿಬಿದ್ದ ಸ್ತನಗಳ ಭಾರ
ಜೀವ ಹೊತ್ತ ಗಜಗಾಮಿನಿಯರನ್ನು
ಕಂಡು ಅರೆರೆ.. ಎಂದುಕೊಳ್ಳುತ್ತ
ಮೈ ರೋಮ ನಿಮಿರಿತೇ?
ಕಾಣದೇ ವ್ಯಗ್ರಗೊಂಡೆ.

ಮೆಟ್ರೋ ಸಿಟಿಗಳಲ್ಲಿಯ ರಸ್ತೆಗಳಲ್ಲಿ
ಸೂಟುಬೂಟು ಹಾಕಿದ
ಮಿಂಚು ಕಂಗಳ
ಸುಂದರಾಂಗರ ಕಣ್ಣಿನ ಸಂಚಲನೆಗೆ
ಕೆತ್ತಿಸಿಕೊಂಡ ಮುಖಗಳ ಮಾದಕತೆಗೆ ಇದ್ದ
ಸೆಳೆತಕ್ಕೆ ಮನಸ್ಸು ಜೋಲಿ ಹೊಡೆದು
ಕೈ ನೋಡಿದರೆ
ರೋಮಾಂಚನ ವ್ಯಾಕ್ಸಾಯನ.

ಹೆತ್ತವರ ಶ್ರಾದ್ದಕ್ಕೆ ಪಿಂಡ ಬಿಡುವಾಗಲೆಲ್ಲಾ
ನೆನಪುಕ್ಕಿ ಕಣ್ಣೀರಾಗುತ್ತಿದ್ದಾಗಲೆಲ್ಲಾ
ನನ್ನಪ್ಪನ ಮೈಮೇಲಿನ ಕರಿಕಪ್ಪುರೋಮ
ನಿಮಿರಕೊಳ್ಳುತ್ತ ಅದ ನೋಡುತ್ತ
ಎದೆಯಲ್ಲಾಡುವ ಅಂಜಿಕೆಯ ಕಪ್ಪೆ
ನನ್ನಪ್ಪನ ಶ್ರಾದ್ಧದ ಹೆಸರಿನಲ್ಲಿ ಗಡದ್ದಾಗಿ ತಿಂದು
ಬರುವ ನನಗೆ ಪ್ರತಿವರ್ಷವೂ
ಮೈ ರೋಮ ನೆಟ್ಟಗಾಗಲಿಲ್ಲವೆಂದು ಖುಷಿ.

ಸಂಜೆ ಗೋಧೂಳಿ ಹೊತ್ತು
ಗದ್ದೆ ಬದುವಿಗೆ ಕೂತ ಪೆಡ್ಡೆ ಹೈಕಳು
ಬಾಲನೆಗರಿಸಿ ಓಡುತ್ತ ಬರುವ
ಕರುಗಳ ಕಂಡು
ಕುಂಡೇ ಹರಿದ ಚಡ್ಡಿಯಲ್ಲಿಯೇ
ರಿಲೇ ಓಡುತ್ತಾ ಗೂಸಬಮ್ಸ ಆವಾಹಿಸಿಕೊಳ್ಳತ್ತಿದ್ದಾರೆ.
ಹುಡಿ ಎದ್ದ ಮಣ್ಣಿಗೆ ತಟ್ಟನೆ ಬಿದ್ದ
ಒಂದೆರಡು ಮಳೆಹನಿಗಳ ಆಘ್ರಾಣಿಸುತ್ತಾ
ಎದ್ದ ರೋಮದ ಲೆಕ್ಕಾಚಾರ ಮಾಡುತ್ತಿದ್ದಾರೆ
ಇಲ್ಲಿ ಪಟ್ಟಣಗಳಲ್ಲಿ
ಸಂಜೆಯಾಗುತ್ತದೆ ಅಷ್ಟೇ
ರೋಮ ಸೆಟೆದುಕೊಳ್ಳುವುದಿಲ್ಲ.

ಹೂವಿನ ದಳಗಳ ಮುಗುಳು
ಮೈಸೋಕಿಸಿಕೊಂಡು ತಟ್ಟನೆ ಏಳುವ
ಮೈರೋಮಕ್ಕಾಗಿ
ಕೃತಕ
ಕಾತರಿಸುತ್ತಲೇ ಇದ್ದೇನೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...