Home / ಕವನ / ಕವಿತೆ / ಯುಗಾದಿ ಹರವು

ಯುಗಾದಿ ಹರವು

ಹರವು ಹೆಚ್ಚಲು ಮುಗಿಲ ನೆಲದಲಿ
ಬೆಳಕು ಚಿಮ್ಮಿತು
ಕೊಸರು ಕರಗಲು ಹಸೆಯು ಹರಡಲು
ಎದೆಯ ಬನದಲಿ ತನ್ನಿಂತಾನೇ
ಚೆಲುವು ಮೂಡಿತು.

ಯುಗವು ಕಳೆಯಲು ಯುಗವು ಮರಳಲು
ಜಗದ ನಿಯಮ ಸಹಜವಾಗಲು
ವಿಳಂಬಿ ವಿಳಂಬವೆನ್ನದೇ
ದಾಪುಗಾಲು ಹಾಕಿ ಬರುತಿರೆ
ಹೇಮಲಂಬಿ ಹಳೆಯ ಬಿಂಬಿ
ದೂರ ಸರಿಯಿತು.

ಕೆಂದಳಿರಿಗೂ ಮೀಗಿ ಕೆಂದೂಳು
ಹುಡಿಯೆದ್ದು
ಜಗವು ಸುಗ್ಗಿಯ ಸೊಬಗ ಹೊದೆದು
ರಸದೌತಣ ಇಳೆಯ ಮನೆಯೊಳೆದ್ದು
ತೇಲುತೇಲುತ
ಕನಸ ಹೆಣೆಯುವ ಕಾಲ ಬಂದಿತು.

ಹೂಬಿಸಿಲು ನೃತ್ಯಗೈಯಲು
ಮಾಮರದ ಸೆರಗ ಹಿಡಿಯಲು
ದುಂಬಿ ನುಡಿಯಲು,
ಕುಕಿಲ ಉಲಿಯಲು
ರೈತ ಬವಣೆಯು ಮುಗಿದು ಹೋಗಲು
ಸುಗ್ಗಿ ಸಂಭ್ರಮ ಮುಷ್ಟಿ ಹಿಡಿದು
ಸೃಷ್ಟಿ ಮೆರೆಯಿತು.

ಬೇವು ಬೆಲ್ಲ ನೋವು ನಲಿವು
ಮೆರಗು ಚೆಲ್ಲಿತು.
ಹೊಸ ಭರವಸೆಯ ಬೆಳಕ ಸೂಡಿ.
ಎದೆಗೂ ಎದೆಗೂ ಅರಿವು ಹರಡಿ
ವೈರುಧ್ಯ ತೊರೆದು ಜ್ಞಾನ ಮೂಡಿ
ಏಕತೆಯ ಗಾನ ಹೊರಟಿತು.

ಶಿಶಿರ ಋತುವು ಬೇಲಿದಾಟಲು
ವಸಂತ ಗಾನದ ಮಧುರ ಮೈತ್ರಿಯು
ಚೈತ್ರ ಸೊಬಗು ಬಲೆಯ ಬೀಸಲು
ಬಿರಿದ ಮೊಗ್ಗಿನ ಘಮವು ಪಸರಿಸೆ
ಹಾರೋ ಹೆಜ್ಜೆಗೂ ಗೆಜ್ಜೆ ಕಟ್ಟಿತು.

ಜಗವ ಹರಸಲು,
ರಮೆಯ ರಮಿಸಲು
ಬವಣೆ ಭಾವ ಕಳೆದು ಹೋಗಲು
ತಳಿರುತೋರಣ ಮುತ್ತಿನಾರತಿ
ಸುಮದರಾಶಿಯ ಹೊತ್ತು ತಂದಿತು
ವಿಳಂಬವೆನ್ನದೇವಿಳಂಬಿಯೊಡನೆ
ಇಳೆಗೆ ಹಬ್ಬವು ಹಬ್ಬಿತು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...