Home / ಕವನ / ಕವಿತೆ / ಆತನ ಕದಪುಗಳ ತಟ್ಟಿ ಮುತ್ತಿಕ್ಕಿದಾಗಲೆಲ್ಲಾ

ಆತನ ಕದಪುಗಳ ತಟ್ಟಿ ಮುತ್ತಿಕ್ಕಿದಾಗಲೆಲ್ಲಾ

ಎಷ್ಟು ಸವರಿದರೂ ಮತ್ತೆ ಮತ್ತೆ
ಮುಟ್ಟಬೇಕೆನ್ನಿಸುವ
ಆತನ ಕದಪುಗಳ ತಟ್ಟಿ ಮುತ್ತಿಕ್ಕಿದಾಗಲೆಲ್ಲ
ಅಕ್ಷರಗಳು
ನನ್ನೊಳಗಿನ ಆತ್ಮದಂತೆ ಹರಿದಾಡುತ್ತವೆ.

ಆತನ ತುಟಿಗಳ ಮೇಲೆ
ಬೆರಳಾಡಿಸಿದಾಗೆಲ್ಲ
ಅನೂಹ್ಯವಾದ ಬೆಸುಗೆ
ಕರುಳ ಕೊಂಡಿಯಂತೆ
ಒಳಗೊಳಗೆ ಬಲಿಯುತ್ತದೆ.
ನನ್ನೊಳಗಿನ ಆತ್ಮದ ಕುರುಡು
ಕರಗಿ ಹೋಗಲೆಂದು
ಆತನ ಪತ್ರಕ್ಕೆ ಮಾತ್ರ ರುಜು ಹಾಕಿದೆ.

ಸತ್ಯಕ್ಕೂ ಸುಳ್ಳಿಗೂ ನಡುವಿನ ಪಟ
ಕಳೆದು ಕಪ್ಪುಕಲೆಗಳು
ಎದ್ದುಬಿದ್ದು ಹೊರಳಾಡಿ
ಶುದ್ಧ ಮಣ್ಣಿನೆದೆಗಳು ಬರಸೆಳೆದು
ತಬ್ಬಿಕೊಂಡವು.
ಲೋಕದ ಜಂಜಾಟಗಳಿಗೆ
ಆರ್ತನಾದಗೈವ ಅಕ್ಷರಗಳಿಲ್ಲ ಈಗ

ನೀಲಾಕಾಶದ ನಿರಭ್ರತೆಯ
ಹೊಟ್ಟೆ ಸೀಳಿ
ಮಿಂಚಿನ ಕಣವೊಂದು ಆಳಕ್ಕೆ
ಗರ್ಭದೊಳಗೆ ಹೊಕ್ಕಿದ್ದೇ ತಡ,
ನೆಲ ಮುಗಿಲನ್ನು
ಮೋಹಿಸುತ್ತಾ ಎದೆತೆರೆದು ಕಣ್ಣರಳಿಸಿತು.
ಈ ದಾರಿಯ ಸೊಬಗಿನಲ್ಲಿ
ಕಣ್ಸೆಳೆಯುವ
ಬಿಸಿಲು-ಬೆಳದಿಂಗಳು, ಹಸಿರು-ಕೆಸರು
ಎಲ್ಲವನ್ನೂ ಇನ್ನಿಲ್ಲದಂತೆ ಪ್ರೀತಿಸುತ್ತಾ,
ಎರಡೂ ತೆಕ್ಕೆಗಳಲ್ಲಿ
ಬರಸೆಳೆದುಕೊಂಡು ಮುದ್ದಿಸುತ್ತಿದ್ದೇನೆ.

ಬಿಚ್ಚು ಮನಸ್ಸಿನಂತೆ
ದೇಹದ ಬಿಚ್ಚು ಕೂಡಾ ಆಪ್ತವಾದಂತೆ
ಅವನೂ ನಾನು ಕ್ಷಣಕ್ಷಣವೂ ಬಿಡದೇ
ಆವರಿಸಿಕೊಳ್ಳುತ್ತಲೇ,
ನೆಲದ ಹಸಿ ಚಿಗುರನ್ನು
ಜಗವೊಪ್ಪುವ ಪದಗಳಿಂದ ಹಿಡಿದು
ಮತ್ತದನ್ನು ಸುರವಿ ಹರವುದನು ಕಲಿತಿದ್ದೇನೆ.

ಆತನ ಕೈಸಂದಿನೊಳಗೆ
ಬೆರಳು ತೂರಿಸಿಕೊಂಡೇ
ದೇಹ ಮೀರಿದ ಪ್ರೇಮದ
ಠೇವಣಿ ಇಟ್ಟಿದ್ದು
ಮೊನ್ನೆ ಮೊನ್ನೆಯಷ್ಟೇ ನಗದಾಗಿದೆ.
ಈಗ ನಾನು ಅವನೂ ಕೂಡಿಯೇ
ಮನೆ ಕಟ್ಟುತ್ತಿದ್ದೇವೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...