Home / ಕಥೆ / ಕಿರು ಕಥೆ / ಲಂಚದ ಮನೆ

ಲಂಚದ ಮನೆ

ಆನಂದಪ್ಪ ಆ ಶಹರದ ಹೃದಯಭಾಗದಲ್ಲಿ ಮನೆ ಕಟ್ಟಿಸಲು ಶುರು ಮಾಡಿದ. ಅಲ್ಲಿನದು ಬಹು ಮೌಲ್ಯದ ಬಯಲು ಜಾಗೆ. ಅದು ಅವನಿಗೆ ಬಳುವಳಿಯಾಗಿ ಸಿಕ್ಕಿತ್ತು.

ಆನಂದಪ್ಪ ಒಬ್ಬ ಇಂಜಿನಿಯರ್‍. ಸರಕಾರಿ ಹುದ್ದೆಯಲ್ಲಿದ್ದ. ತಾನು ಕಟ್ಟಿಸುವ ಮನೆ ಭೂಮಿಯ ಮೇಲಿನ ಸ್ವರ್ಗಧಾಮದಂತಿರಬೇಕೆಂದು ಕನಸು ಕಂಡಿದ್ದ. ಅವನ ಕೈ ಕೆಳಗಿನ ನಾಲ್ಕಾರು ಜನ ಇಂಜಿನಿಯರ್‌ಗಳು ಆ ಕನಸಿನ ಸಾಕಾರಕ್ಕಾಗಿ ಸತತವಾಗಿ ಪರಿಶ್ರಮಿಸತೊಡಗಿದ್ದರು.

ಕೆಲವು ಕಂಟ್ರಾಕ್ಟರರು ಆನಂದಪ್ಪ ಹೇಳದಿದ್ದರೂ ಮನೆಯ ಕಟ್ಟಡಕ್ಕೆ ಬೇಕಾಗುವಷ್ಟು ಕಬ್ಬಿಣ, ಸಿಮೆಂಟು, ಕಲ್ಲು, ಉಸುಕು, ಕಿಟಕಿ, ಬಾಗಿಲು ಪೂರೈಸಿದ್ದರು. ಗೌಂಡಿಗಳು ತಮ್ಮ ಶ್ರಮದ ಬೆವರನ್ನು ಕಟ್ಟಡಕ್ಕೆ ಹನಿಸುತ್ತ ಬಹಳ ಮುತುವರ್ಜಿಯಿಂದ ಕೆಲಸ ಮಾಡುತ್ತಿದ್ದರು.

ಹಣ ಎಷ್ಟು ಖರ್ಚಾದರೂ ಚಿಂತೆಯಿಲ್ಲ. ಮನೆ ಮಾತ್ರ ಸುಂದರವಾಗಿರಬೇಕೆಂದು ಇಂಜಿನಿಯರ್‍ ಪತ್ನಿ ಪದೆ ಪದೆ ಹೇಳುತ್ತಿದ್ದಳು. ಅವಳ ಮನಸ್ಸಿಗೆ ಬೇಸರವೆನಿಸಿದರೆ ಕಟ್ಟಡವನ್ನು ಕೆಡವಿ ಹಾಕಲಾಗುತ್ತಿತ್ತು. ಇಂಜಿನಿಯರಿಂದ ಶುಕ್ರದೆಸೆ ಅನುಭವಿಸಿದ್ದ ಕಾಂಟ್ರಾಕ್ಟರರು ಒಂದು ಚಕಾರ ಶಬ್ದ ಆಡದೇ ಅವಳ ನಿರ್ದೇಶನಗಳನ್ನು ಪಾಲಿಸುತ್ತಿದ್ದರು.

ಕೊನಗೂ ಮನೆ ತಯಾರಾಯಿತು. ಎಂಥ ಅಪರೂಪದ ಮನೆ ಅದು!

ಒಳ-ಹೊರ ಗೋಡೆಗಳಿಗೆ ಸಂಗಮವರಿ ಕಲ್ಲುಗಳನ್ನು ಹೊರಿಸಲಾಗಿತ್ತು. ನೆಲದ ಹಾಸುಗಲ್ಲುಗಳಲ್ಲಿ ನಡೆದಾಡುವವರ ಪ್ರತಿಬಿಂಬ ಕಾಣಿಸುತ್ತಿತು. ತೇಗ-ಗಂಧದ ಕಿಟಕಿ, ಬಾಗಿಲುಗಳು ಹೊಸ ವಿನ್ಯಾಸದೊಂದಿಗೆ ಮನಮೋಹಕವಾಗಿದ್ದವು. ಮನೆ ನೋಡಿದವರೆಲ್ಲ ಬೆರಗುಗೊಂಡು ಅದ್ಭುತ! ಎಂದು ಬಣ್ಣಿಸುವರು.

ಅಂತೂ ಆ ಮನೆ ಗೃಹ ಪ್ರವೇಶಕ್ಕೆ ಸಿದ್ಧಗೊಂಡಿತು.

ಇಂಜಿನಿಯರ್‍ ಪತ್ನಿ ಮೂಹೂರ್ತ ಗೊತ್ತುಪಡಿಸಲು ಕಾರು ಹತ್ತಿ ಜೋಯಿಸರ ಮನೆಗೆ ಹೋದಳು. ತಿರುಗಿ ಬರುವಾಗ ರಸ್ತೆಯ ತಿರುವಿನಲ್ಲಿ ಕಾರು ಅಪಘಾತಕ್ಕೀಡಾಗಿ ಆಕೆ ಸ್ಥಳದಲ್ಲಿಯೇ ಅಸುನೀಗಿದ್ದಳು. ಹೆಂಡತಿಯ ಸಾವಿನ ಸುದ್ದಿ ಕೇಳಿದ್ದೆ ತಡ ಇಂಜಿನಿಯರ್‍ ಸಾಹೇಬರು ಹಠಾತ್ತನೆ ಹೃದಯಾಘಾತಕ್ಕೆ ಕುಸಿದು ಬಿದ್ದರು.

ಆ ಚೆಂದದ ಮನೆಯಲ್ಲಿ ಬದುಕುವ ತೀವ್ರ ತುಡಿತವಿದ್ದ ಗಂಡ-ಹೆಂಡತಿ ತಣ್ಣಗೆ ಸ್ಮಶಾನದ ಮಣ್ಣಲ್ಲಿ ಮಲಗಿದರು. ಮನೆಯನ್ನು ಹೊಗಳಿದ ಜನರೆ “ಇದು ಗೃಹದೋಷದ ಪ್ರಭಾವ!” ಎಂದರು.

*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...