Home / ಕಥೆ / ಕಿರು ಕಥೆ / ಲಂಚದ ಮನೆ

ಲಂಚದ ಮನೆ

ಆನಂದಪ್ಪ ಆ ಶಹರದ ಹೃದಯಭಾಗದಲ್ಲಿ ಮನೆ ಕಟ್ಟಿಸಲು ಶುರು ಮಾಡಿದ. ಅಲ್ಲಿನದು ಬಹು ಮೌಲ್ಯದ ಬಯಲು ಜಾಗೆ. ಅದು ಅವನಿಗೆ ಬಳುವಳಿಯಾಗಿ ಸಿಕ್ಕಿತ್ತು.

ಆನಂದಪ್ಪ ಒಬ್ಬ ಇಂಜಿನಿಯರ್‍. ಸರಕಾರಿ ಹುದ್ದೆಯಲ್ಲಿದ್ದ. ತಾನು ಕಟ್ಟಿಸುವ ಮನೆ ಭೂಮಿಯ ಮೇಲಿನ ಸ್ವರ್ಗಧಾಮದಂತಿರಬೇಕೆಂದು ಕನಸು ಕಂಡಿದ್ದ. ಅವನ ಕೈ ಕೆಳಗಿನ ನಾಲ್ಕಾರು ಜನ ಇಂಜಿನಿಯರ್‌ಗಳು ಆ ಕನಸಿನ ಸಾಕಾರಕ್ಕಾಗಿ ಸತತವಾಗಿ ಪರಿಶ್ರಮಿಸತೊಡಗಿದ್ದರು.

ಕೆಲವು ಕಂಟ್ರಾಕ್ಟರರು ಆನಂದಪ್ಪ ಹೇಳದಿದ್ದರೂ ಮನೆಯ ಕಟ್ಟಡಕ್ಕೆ ಬೇಕಾಗುವಷ್ಟು ಕಬ್ಬಿಣ, ಸಿಮೆಂಟು, ಕಲ್ಲು, ಉಸುಕು, ಕಿಟಕಿ, ಬಾಗಿಲು ಪೂರೈಸಿದ್ದರು. ಗೌಂಡಿಗಳು ತಮ್ಮ ಶ್ರಮದ ಬೆವರನ್ನು ಕಟ್ಟಡಕ್ಕೆ ಹನಿಸುತ್ತ ಬಹಳ ಮುತುವರ್ಜಿಯಿಂದ ಕೆಲಸ ಮಾಡುತ್ತಿದ್ದರು.

ಹಣ ಎಷ್ಟು ಖರ್ಚಾದರೂ ಚಿಂತೆಯಿಲ್ಲ. ಮನೆ ಮಾತ್ರ ಸುಂದರವಾಗಿರಬೇಕೆಂದು ಇಂಜಿನಿಯರ್‍ ಪತ್ನಿ ಪದೆ ಪದೆ ಹೇಳುತ್ತಿದ್ದಳು. ಅವಳ ಮನಸ್ಸಿಗೆ ಬೇಸರವೆನಿಸಿದರೆ ಕಟ್ಟಡವನ್ನು ಕೆಡವಿ ಹಾಕಲಾಗುತ್ತಿತ್ತು. ಇಂಜಿನಿಯರಿಂದ ಶುಕ್ರದೆಸೆ ಅನುಭವಿಸಿದ್ದ ಕಾಂಟ್ರಾಕ್ಟರರು ಒಂದು ಚಕಾರ ಶಬ್ದ ಆಡದೇ ಅವಳ ನಿರ್ದೇಶನಗಳನ್ನು ಪಾಲಿಸುತ್ತಿದ್ದರು.

ಕೊನಗೂ ಮನೆ ತಯಾರಾಯಿತು. ಎಂಥ ಅಪರೂಪದ ಮನೆ ಅದು!

ಒಳ-ಹೊರ ಗೋಡೆಗಳಿಗೆ ಸಂಗಮವರಿ ಕಲ್ಲುಗಳನ್ನು ಹೊರಿಸಲಾಗಿತ್ತು. ನೆಲದ ಹಾಸುಗಲ್ಲುಗಳಲ್ಲಿ ನಡೆದಾಡುವವರ ಪ್ರತಿಬಿಂಬ ಕಾಣಿಸುತ್ತಿತು. ತೇಗ-ಗಂಧದ ಕಿಟಕಿ, ಬಾಗಿಲುಗಳು ಹೊಸ ವಿನ್ಯಾಸದೊಂದಿಗೆ ಮನಮೋಹಕವಾಗಿದ್ದವು. ಮನೆ ನೋಡಿದವರೆಲ್ಲ ಬೆರಗುಗೊಂಡು ಅದ್ಭುತ! ಎಂದು ಬಣ್ಣಿಸುವರು.

ಅಂತೂ ಆ ಮನೆ ಗೃಹ ಪ್ರವೇಶಕ್ಕೆ ಸಿದ್ಧಗೊಂಡಿತು.

ಇಂಜಿನಿಯರ್‍ ಪತ್ನಿ ಮೂಹೂರ್ತ ಗೊತ್ತುಪಡಿಸಲು ಕಾರು ಹತ್ತಿ ಜೋಯಿಸರ ಮನೆಗೆ ಹೋದಳು. ತಿರುಗಿ ಬರುವಾಗ ರಸ್ತೆಯ ತಿರುವಿನಲ್ಲಿ ಕಾರು ಅಪಘಾತಕ್ಕೀಡಾಗಿ ಆಕೆ ಸ್ಥಳದಲ್ಲಿಯೇ ಅಸುನೀಗಿದ್ದಳು. ಹೆಂಡತಿಯ ಸಾವಿನ ಸುದ್ದಿ ಕೇಳಿದ್ದೆ ತಡ ಇಂಜಿನಿಯರ್‍ ಸಾಹೇಬರು ಹಠಾತ್ತನೆ ಹೃದಯಾಘಾತಕ್ಕೆ ಕುಸಿದು ಬಿದ್ದರು.

ಆ ಚೆಂದದ ಮನೆಯಲ್ಲಿ ಬದುಕುವ ತೀವ್ರ ತುಡಿತವಿದ್ದ ಗಂಡ-ಹೆಂಡತಿ ತಣ್ಣಗೆ ಸ್ಮಶಾನದ ಮಣ್ಣಲ್ಲಿ ಮಲಗಿದರು. ಮನೆಯನ್ನು ಹೊಗಳಿದ ಜನರೆ “ಇದು ಗೃಹದೋಷದ ಪ್ರಭಾವ!” ಎಂದರು.

*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...