Home / ಕವನ / ಕವಿತೆ / ಸಾಮೇರ ಮಠದಾಗ ಚಪ್ಪಲ್ಲು ಮಠಮಾಯ

ಸಾಮೇರ ಮಠದಾಗ ಚಪ್ಪಲ್ಲು ಮಠಮಾಯ

ಸಾಮೇರ ಮಠದಾಗ ಚಪ್ಪಲ್ಲು ಮಠಮಾಯಾ
ಅಯವತ್ತು ರೂಪಾಯಿ ಗಪ್ಪಗಾರಾ ||ಪಲ್ಲ||

ಬ್ಹಾಳ್ಬಾಳ ಭಕ್ತೀಲಿ ಕೈ ಮುಗುದು ಹೋಗಿದ್ದೆ
ಜೋರ್‍ಜೋರು ಚಪ್ಪಲ್ಲು ಮಂಗಮಾಯಾ
ಹುಳ್ಳುಳ್ಳ ಹುಣಿಸೆಣ್ಣು ಹಲ್ಲೆಲ್ಲ ಚಳ್ಳಣ್ಣು
ಚಂದುಳ್ಳ ನನಭಕುತಿ ಚೂರುಚಾರಾ ||೧||

ಸಾಮೇರ ಗುರುಪಾದ ಗ್ಹುಕ್ಕೆಂದು ನಕ್ಕೀತ
ಕಿಸ್ಸಂತ ಕಿಸಮಂಗ ಆದೆನಲ್ಲ
ಮೂಗ್ನ್ಯಾಗ ಮೆಣಸಿಂಡಿ ಬಾಯಾಗ ಹಿಡಿಸುಂಠಿ
ಕಣ್ಣಾಗ ಖಾರ್ಪೂಡಿ ಬಿದ್ದಿತಲ್ಲ ||೨||

ತೇರ್‍ಮ್ಯಾಲೆ ತೇರಾತ ಜೋರ್‍ಮ್ಯಾಲೆ ಜೋರಾತ
ಕಾರ್‍ಮ್ಯಾಲೆ ಕಾರಾತ ಪೊಂವ್ವ ಪೊಂವ್ವ
ಯಾತಕ್ಕ ಬಂದಿದ್ದೆ ಯಾತಕ್ಕ ತಂಗಿದ್ದೆ
ಯಾತಕ್ಕ ಬೊಗಳಾಟ ಬೊವ್ವ ಬೊವ್ವ ||೩||

ಭಕುತೀಗಿ ಬೋಗೂಣಿ ಮುಕುತೀಗಿ ಹಂಡೇವು
ಯುಕುತೀಗಿ ಸರಸೋತಿ ಬಸರಾದಳ
ಪಡಿಚಿಂತಿ ಪಡಜಂತಿ ಮಠದಾಗ ಮಾಸಂತಿ
ಫಜೀತಿ ಪಾರೋತಿ ಹೆಸರಾದಳ ||೪||

ಮಠಮಠ ಮಧ್ಯಾನ್ಹ ಮಠದಾನ ದೆವ್ವಾದೆ
ಸಾಮೇರ ಲಿಂಗಕ್ಕೆ ಬಡಕೊಂಡೆ
ಮಠದಾನ ತೊಲಿಕಂಬ ಕಡಕೊಂಡು ಬಿದ್ದಾಗ
ಘಟದಿಂದ ಘನಲಿಂಗ ಪಡಕೊಂಡೆ ||೫||
*****
ಮಠ = ಸಂಸಾರ
ಘಟ = ದೇಹ
ಚಪ್ಪಲ್ಲು = ಚರ್ಮದೇಹದ ಅಭಿಮಾನ (Lower Consciousness)
ಐವತ್ತು ರೂಪಾಯಿ = ಹಳೆ ಸಂಸ್ಕಾರಗಳು
ಸರಸೋತಿ = ಶಾಸ್ತ್ರಬುದ್ದಿ (Intellectual egoism)
ಬಸರಾಗು = ಆತ್ಮಜ್ಞಾನಿಯಾಗು
ಲಿಂಗಕ್ಕ ಬಡಕೊ= ಸಾಕ್ಷಾತ್ಕಾರ

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...