Home / ಕವನ / ಕವಿತೆ / ಸಾಮೇರ ಮಠದಾಗ ಚಪ್ಪಲ್ಲು ಮಠಮಾಯ

ಸಾಮೇರ ಮಠದಾಗ ಚಪ್ಪಲ್ಲು ಮಠಮಾಯ

ಸಾಮೇರ ಮಠದಾಗ ಚಪ್ಪಲ್ಲು ಮಠಮಾಯಾ
ಅಯವತ್ತು ರೂಪಾಯಿ ಗಪ್ಪಗಾರಾ ||ಪಲ್ಲ||

ಬ್ಹಾಳ್ಬಾಳ ಭಕ್ತೀಲಿ ಕೈ ಮುಗುದು ಹೋಗಿದ್ದೆ
ಜೋರ್‍ಜೋರು ಚಪ್ಪಲ್ಲು ಮಂಗಮಾಯಾ
ಹುಳ್ಳುಳ್ಳ ಹುಣಿಸೆಣ್ಣು ಹಲ್ಲೆಲ್ಲ ಚಳ್ಳಣ್ಣು
ಚಂದುಳ್ಳ ನನಭಕುತಿ ಚೂರುಚಾರಾ ||೧||

ಸಾಮೇರ ಗುರುಪಾದ ಗ್ಹುಕ್ಕೆಂದು ನಕ್ಕೀತ
ಕಿಸ್ಸಂತ ಕಿಸಮಂಗ ಆದೆನಲ್ಲ
ಮೂಗ್ನ್ಯಾಗ ಮೆಣಸಿಂಡಿ ಬಾಯಾಗ ಹಿಡಿಸುಂಠಿ
ಕಣ್ಣಾಗ ಖಾರ್ಪೂಡಿ ಬಿದ್ದಿತಲ್ಲ ||೨||

ತೇರ್‍ಮ್ಯಾಲೆ ತೇರಾತ ಜೋರ್‍ಮ್ಯಾಲೆ ಜೋರಾತ
ಕಾರ್‍ಮ್ಯಾಲೆ ಕಾರಾತ ಪೊಂವ್ವ ಪೊಂವ್ವ
ಯಾತಕ್ಕ ಬಂದಿದ್ದೆ ಯಾತಕ್ಕ ತಂಗಿದ್ದೆ
ಯಾತಕ್ಕ ಬೊಗಳಾಟ ಬೊವ್ವ ಬೊವ್ವ ||೩||

ಭಕುತೀಗಿ ಬೋಗೂಣಿ ಮುಕುತೀಗಿ ಹಂಡೇವು
ಯುಕುತೀಗಿ ಸರಸೋತಿ ಬಸರಾದಳ
ಪಡಿಚಿಂತಿ ಪಡಜಂತಿ ಮಠದಾಗ ಮಾಸಂತಿ
ಫಜೀತಿ ಪಾರೋತಿ ಹೆಸರಾದಳ ||೪||

ಮಠಮಠ ಮಧ್ಯಾನ್ಹ ಮಠದಾನ ದೆವ್ವಾದೆ
ಸಾಮೇರ ಲಿಂಗಕ್ಕೆ ಬಡಕೊಂಡೆ
ಮಠದಾನ ತೊಲಿಕಂಬ ಕಡಕೊಂಡು ಬಿದ್ದಾಗ
ಘಟದಿಂದ ಘನಲಿಂಗ ಪಡಕೊಂಡೆ ||೫||
*****
ಮಠ = ಸಂಸಾರ
ಘಟ = ದೇಹ
ಚಪ್ಪಲ್ಲು = ಚರ್ಮದೇಹದ ಅಭಿಮಾನ (Lower Consciousness)
ಐವತ್ತು ರೂಪಾಯಿ = ಹಳೆ ಸಂಸ್ಕಾರಗಳು
ಸರಸೋತಿ = ಶಾಸ್ತ್ರಬುದ್ದಿ (Intellectual egoism)
ಬಸರಾಗು = ಆತ್ಮಜ್ಞಾನಿಯಾಗು
ಲಿಂಗಕ್ಕ ಬಡಕೊ= ಸಾಕ್ಷಾತ್ಕಾರ

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...