Home / ಕವನ / ಕವಿತೆ / ಸಾಮೇರ ಮಠದಾಗ ಚಪ್ಪಲ್ಲು ಮಠಮಾಯ

ಸಾಮೇರ ಮಠದಾಗ ಚಪ್ಪಲ್ಲು ಮಠಮಾಯ

ಸಾಮೇರ ಮಠದಾಗ ಚಪ್ಪಲ್ಲು ಮಠಮಾಯಾ
ಅಯವತ್ತು ರೂಪಾಯಿ ಗಪ್ಪಗಾರಾ ||ಪಲ್ಲ||

ಬ್ಹಾಳ್ಬಾಳ ಭಕ್ತೀಲಿ ಕೈ ಮುಗುದು ಹೋಗಿದ್ದೆ
ಜೋರ್‍ಜೋರು ಚಪ್ಪಲ್ಲು ಮಂಗಮಾಯಾ
ಹುಳ್ಳುಳ್ಳ ಹುಣಿಸೆಣ್ಣು ಹಲ್ಲೆಲ್ಲ ಚಳ್ಳಣ್ಣು
ಚಂದುಳ್ಳ ನನಭಕುತಿ ಚೂರುಚಾರಾ ||೧||

ಸಾಮೇರ ಗುರುಪಾದ ಗ್ಹುಕ್ಕೆಂದು ನಕ್ಕೀತ
ಕಿಸ್ಸಂತ ಕಿಸಮಂಗ ಆದೆನಲ್ಲ
ಮೂಗ್ನ್ಯಾಗ ಮೆಣಸಿಂಡಿ ಬಾಯಾಗ ಹಿಡಿಸುಂಠಿ
ಕಣ್ಣಾಗ ಖಾರ್ಪೂಡಿ ಬಿದ್ದಿತಲ್ಲ ||೨||

ತೇರ್‍ಮ್ಯಾಲೆ ತೇರಾತ ಜೋರ್‍ಮ್ಯಾಲೆ ಜೋರಾತ
ಕಾರ್‍ಮ್ಯಾಲೆ ಕಾರಾತ ಪೊಂವ್ವ ಪೊಂವ್ವ
ಯಾತಕ್ಕ ಬಂದಿದ್ದೆ ಯಾತಕ್ಕ ತಂಗಿದ್ದೆ
ಯಾತಕ್ಕ ಬೊಗಳಾಟ ಬೊವ್ವ ಬೊವ್ವ ||೩||

ಭಕುತೀಗಿ ಬೋಗೂಣಿ ಮುಕುತೀಗಿ ಹಂಡೇವು
ಯುಕುತೀಗಿ ಸರಸೋತಿ ಬಸರಾದಳ
ಪಡಿಚಿಂತಿ ಪಡಜಂತಿ ಮಠದಾಗ ಮಾಸಂತಿ
ಫಜೀತಿ ಪಾರೋತಿ ಹೆಸರಾದಳ ||೪||

ಮಠಮಠ ಮಧ್ಯಾನ್ಹ ಮಠದಾನ ದೆವ್ವಾದೆ
ಸಾಮೇರ ಲಿಂಗಕ್ಕೆ ಬಡಕೊಂಡೆ
ಮಠದಾನ ತೊಲಿಕಂಬ ಕಡಕೊಂಡು ಬಿದ್ದಾಗ
ಘಟದಿಂದ ಘನಲಿಂಗ ಪಡಕೊಂಡೆ ||೫||
*****
ಮಠ = ಸಂಸಾರ
ಘಟ = ದೇಹ
ಚಪ್ಪಲ್ಲು = ಚರ್ಮದೇಹದ ಅಭಿಮಾನ (Lower Consciousness)
ಐವತ್ತು ರೂಪಾಯಿ = ಹಳೆ ಸಂಸ್ಕಾರಗಳು
ಸರಸೋತಿ = ಶಾಸ್ತ್ರಬುದ್ದಿ (Intellectual egoism)
ಬಸರಾಗು = ಆತ್ಮಜ್ಞಾನಿಯಾಗು
ಲಿಂಗಕ್ಕ ಬಡಕೊ= ಸಾಕ್ಷಾತ್ಕಾರ

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...