Home / ಕವನ / ಕವಿತೆ / ಎಂದೆಂದೂ ಮುಗಿಯದ ಕತೆ

ಎಂದೆಂದೂ ಮುಗಿಯದ ಕತೆ


ಶೆರಜಾದೆ ಶೆರಜಾದೆ ಹೇಳೊಂದು ಕತೆಯ
ಹೊಗಲಾಡಿಸು ನನ್ನ ಮನಸಿನ ವ್ಯಥೆಯ

ಯಾವ ಕತೆ ಹೇಳಲಿ ನಾ ನಿನಗೆ ಇನಿಯ
ಹೆಚ್ಚೇನೂ ಉಳಿದಿಲ್ಲ ರಾತ್ರಿಯ ಸಮಯ

ಯಾರಿಗೂ ತೆರೆಯದ ಮಾಂತ್ರಿಕ ಕೋಟೆ
ಆದರೊಳಗೆ ಅವಿತಿಟ್ಟ ಚಿನ್ನದ ಮೂಟೆ

ಇಟ್ಟರೆ ಅದರೊಳಗೆ ಚಿನ್ನದ ಮೂಟೆ
ಮಾಡುವರು ಯಾರು ಆ ಚಿನ್ನದ ಬೇಟೆ


ಶೆರಜಾದೆ ಶೆರಜಾದೆ ಹೇಳೊಂದು ಕತೆಯ
ಹೋಗಲಾಡಿಸು ನನ್ನ ಮನಸಿನ ವ್ಯಥೆಯ

ಯಾವ ಕತೆ ಹೇಳಲಿ ನಾ ನಿನಗೆ ಇನಿಯ
ಹೆಚ್ಚೇನೂ ಉಳಿದಿಲ್ಲ ರಾತ್ರಿಯ ಸಮಯ

ಏಳು ಸಮುದ್ರಗಳಾಚೆಗೆ ದ್ವೀಪ
ಅಲ್ಲೊಂದು ಜೀವಕ್ಕೆ ಮುಗಿಯದ ಶಾಪ

ಇದ್ದರೆ ಜೀವಕ್ಕೆ ಮುಗಿಯದ ಶಾಪ
ಏನದು ಎಸಗಿದ ಮುಗಿಯದ ಪಾಪ


ಶೆರಜಾದೆ ಶೆರಜಾದೆ ಹೇಳೊಂದು ಕತೆಯ
ಹೋಗಲಾಡಿಸು ನನ್ನ ಮನಸಿನ ವ್ಯಥೆಯ

ಯಾವ ಕತೆ ಹೇಳಲಿ ನಾ ನಿನಗೆ ಇನಿಯ
ಹೆಚ್ಚೇನೂ ಉಳಿದಿಲ್ಲ ರಾತ್ರಿಯ ಸಮಯ

ಕಪ್ಪು ಕೊಳದೊಳಗೊಂದು ಕೋಮಳೆ ಹೂವು
ಆದನು ಕಿತ್ತವರಿಗೆ ಖಂಡಿತ ಸಾವು

ಅದನು ಕಿತ್ತವರಿಗೆ ಬಂದರೆ ಸಾವು
ಎಲ್ಲವನು ನೋಡುವುದು ಹತ್ತಿರದ ಮಾವು


ಶೆರಜಾದೆ ಶೆರಜಾದೆ ಹೇಳೊಂದು ಕತೆಯ
ಹೋಗಲಾಡಿಸು ನನ್ನ ಮನಸಿನ ವ್ಯಥೆಯ

ಯಾವ ಕತೆ ಹೇಳಲಿ ನಾ ನಿನಗೆ ಇನಿಯ
ಹೆಚ್ಚೇನೂ ಉಳಿದಿಲ್ಲ ರಾತ್ರಿಯ ಸಮಯ

ಆಲದ ಮರದಲ್ಲಿ ನೂರೊಂದು ಕೊಂಬೆ
ಒಂದೊಂದು ಕೊಂಬೆಯಲು ತೂಗುವ ಗೊಂಬೆ

ಒಂದೊಂದು ಕೊಂಬೆಯಲು ತೂಗಿದರೆ ಗೊಂಬೆ
ನೀನೆಂದೂ ನಿನ್ನ ಕಣ್ಣುಗಳ ನಂಬೆ


ಶೆರಜಾದೆ ಶೆರಜಾದೆ ಹೇಳೊಂದು ಕತೆಯ
ಹೋಗಲಾಡಿಸು ನನ್ನ ಮನಸಿನ ವ್ಯಥೆಯ

ಯಾವ ಕತೆ ಹೇಳಲಿ ನಾ ನಿನಗೆ ಇನಿಯ
ಹೆಚ್ಚೇನೂ ಉಳಿದಿಲ್ಲ ರಾತ್ರಿಯ ಸಮಯ

ಮಾಂತ್ರಿಕ ಕೊಟ್ಟಂತ ಮಂತ್ರದ ಕೋಲು
ಅದರಿಂದ ಮುಟ್ಚಿದುದೆಲ್ಲವು ಕಲ್ಲು

ಮುಟ್ಟಿದುದೆಲ್ಲವು ಆದರೆ ಕಲ್ಲು
ಅಡಗುವುದು ಮತ್ತೆ ನಮ್ಮೆಲ್ಲರ ಸೊಲ್ಲು


ಶೆರಜಾದೆ ಶೆರಜಾದೆ ಹೇಳೊಂದು ಕತೆಯ
ಹೋಗಲಾಡಿಸು ನನ್ನ ಮನಸಿನ ವ್ಯಥೆಯ

ಯಾವ ಕತೆ ಹೇಳಲಿ ನಾ ನಿನಗೆ ಇನಿಯ
ಹೆಚ್ಚೇನೂ ಉಳಿದಿಲ್ಲ ರಾತ್ರಿಯ ಸಮಯ

ಬಲು ದೊಡ್ಡ ಅರಮನೆಯ ಏಳನೆ ಮಹಡಿ
ಅದರೊಳಗೆ ಯಾರಿಗೂ ಗೊತ್ತಿರದ ಕೊಠಡಿ

ಇದ್ದರೆ ಯಾರಿಗೂ ಗೊತ್ತಿರದ ಕೊಠಡಿ
ಹತ್ತಿರ ಸುಳಿದವರ ಹಿಡಿಯುವುದು ಕರಡಿ


ಶೆರಜಾದೆ ಶೆರಜಾದೆ ಹೇಳೊಂದು ಕತೆಯ
ಹೋಗಲಾಡಿಸು ನನ್ನ ಮನಸಿನ ವ್ಯಥೆಯ

ಯಾವ ಕತೆ ಹೇಳಲಿ ನಾ ನಿನಗೆ ಇನಿಯ
ಹೆಚ್ಚೇನೂ ಉಳಿದಿಲ್ಲ ರಾತ್ರಿಯ ಸಮಯ

ಎಲ್ಲಿಗೂ ತೆರೆಯದ ಕಿರಿದಾದ ಬೀದಿ
ಅಲ್ಲಿರುವನೊಬ್ಬ ಭೀಕರ ಮಂತ್ರವಾದಿ

ಇದ್ದರಲ್ಲೊಬ್ಬ ಭೀಕರ ಮಂತ್ರವಾದಿ
ಕಣ್ಣಿಗೆ ಎರಚುವನು ಮಂಕುಬೂದಿ


ಶೆರಜಾದೆ ಶೆರಜಾದೆ ಹೇಳೊಂದು ಕತೆಯ
ಹೋಗಲಾಡಿಸು ನನ್ನ ಮನಸಿನ ವ್ಯಥೆಯ

ಯಾವ ಕತೆ ಹೇಳಲಿ ನಾ ನಿನಗೆ ಇನಿಯ
ಹೆಚ್ಚೇನೂ ಉಳಿದಿಲ್ಲ ರಾತ್ರಿಯ ಸಮಯ

ಗೋಡೆಯ ಮೇಲೊಂದು ಕಂಚಿನ ಡೇಗೆ
ಅದರ ಬಾಯೊಳಗೊಂದು ಕಬ್ಬಿಣದ ಕಾಗೆ

ಬಾಯೊಳೆಗಿದ್ದರೆ ಕಬ್ಬಿಣದ ಕಾಗೆ
ತೆಂಗಿನ ಮರದಿಂದ ಬೀಳುವುದು ಸೋಗೆ


ತರಜಾದೆ ಶೆರಜಾದೆ ಹೇಳೊಂದು ಕತೆಯ
ಹೋಗಲಾಡಿಸು ನನ್ನ ಮನಸಿನ ವ್ಯಥೆಯ

ಯಾವ ಕತೆ ಹೇಳಲಿ ನಾ ನಿನಗೆ ಇನಿಯ
ಹೆಚ್ಚೇನೂ ಉಳಿದಿಲ್ಲ ರಾತ್ರಿಯ ಸಮಯ

ಕಡಲ ತೀರದಲೊಬ್ಬ ಚೆಲುವಿನ ಯುವತಿ
ಕಂಡರೆ ಸೆರೆ ಹಿಡಿವಳೆಂಬುದು ಖ್ಯಾತಿ

ಕಂಡರೆ ಸೆರೆ ಹಿಡಿವಳಾದರೆ ಯುವತಿ
ಇರಲೇಬೇಕವಳೊಬ್ಬ ಮಾಟಗಾತಿ

೧೦
ಶೆರಜಾದೆ ಶೆರಜಾದೆ ಹೇಳೊಂದು ಕತೆಯ
ಹೋಗಲಾಡಿಸು ನನ್ನ ಮನಸಿನ ವ್ಯಥೆಯ

ಯಾವ ಕತೆ ಹೇಳಲಿ ನಾ ನಿನಗೆ ಇನಿಯ
ಹೆಚ್ಚೇನೂ ಉಳಿದಿಲ್ಲ ರಾತ್ರಿಯ ಸಮಯ

ಎಂದೆಂದು ಮುಗಿಯದ ಕತೆ ಬೇಕು ನನಗೆ
ಸುಂದರಿಯೊಬ್ಬಳು ಇರಲದರ ಒಳಗೆ

ಸುಂದರಿಯೊಬ್ಬಾಕೆ ಇದ್ದರೆ ಒಳಗೆ
ಎಂದೆಂದು ಮುಗಿಯದ ಕತೆಯೇಕೆ ನಿನಗೆ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...