Home / ಕವನ / ಕವಿತೆ / ಎಲ್ಲಿ ಹೋದಳು ನಮ್ಮ ಅಡಗೂಲಜ್ಜಿ?

ಎಲ್ಲಿ ಹೋದಳು ನಮ್ಮ ಅಡಗೂಲಜ್ಜಿ?

ಎಲ್ಲಿ ಹೋದಳು ನಮ್ಮ ಅಡಗೂಲಜ್ಜಿ
ಎಲ್ಲಿ ಗುರುತುಗಳನು ಒಮ್ಮಲೆ ಉಜ್ಜಿ

ನಡೆದರು ಮುಗಿಯದ ಕಾಡಿನ ಹಾದಿ
ಕಾಣಿಸಿತೊಂದು ಗುಡಿಸಲ ಬಿಡದಿ

ಮೀಯಲು ಬೆಚ್ಚನೆ ಬಿಸಿ ನೀರಿತ್ತು
ಕುಡಿಯಲು ಪನ್ನೀರಿನ ಷರಬತ್ತು

ಒಲೆಯ ಮೇಲೊಂದು ಮಾಯಾ ಗಡಿಗೆ
ಬಯಸಿದ ತಕ್ಷಣ ಪಾಯಸದಡಿಗೆ

ಆ ದಿನ ಅಲ್ಲೇ ನಮ್ಮ ಠಿಕಾಣಿ
ದಿಂಬಿನ ಬದಿಗೇ ನೂಲಿನ ಏಣಿ

ಮಲಗಿರಲೇನದು ಯಾರೋ ಎದ್ದು
ಮನೆಯೊಳಗೆಲ್ಲೋ ನಡೆಯುವ ಸದ್ದು

ಕನಸೋ ನೆನಸೊ ಯಾರಿಗೆ ಗೊತ್ತು
ರಾತ್ರಿ ತುಂಬಾ ಹೊತ್ತಾಗಿತ್ತು

ಅಜ್ಜೀ ಅಜ್ಜೀ ಏನಜ್ಜೀ
ನಡೆಯುವ ಸದ್ದು ಯಾರಜ್ಜೀ

ಬಂದಿಲ್ಲವೆ ಮಕ್ಕಳೆ ಇನ್ನೂ ನಿದ್ದೆ
ಬಂದಿದೆಯೆಂದೇ ನಾ ತಿಳಿದಿದ್ದೆ

ಹೇಳುವೆನೊಂದು ಸುದ್ದಿಯ ನಿಮಗೆ
ಕಣ್ಣಿಗೆ ಮಂಪರು ಹತ್ತುವವರೆಗೆ

ತುಂಬಾ ಚೆಲುವೆ ರಾಜನ ಮಗಳು
ಕಾಲಿನವರೆಗೂ ಇಳಿಯುವ ಹೆರಳು

ಆದರೆ ಒಬ್ಬ ಮಾಂತ್ರಿಕ ಬಂದು
ಪೀಡಿಸುತಿರುವನು ಆಕೆಯನಿಂದು

ತಾನೇ ಹಿಡಿದು ಆಕೆಯ ಕೈಯ
ರಾಜ್ಯವ ಪಡೆವುದು ಅವನ ಉಪಾಯ

ನಾಳೆ ಹೇಳುವೆ ಇನ್ನುಳಿದದ್ದು
ಮಲಗಿರಿ ಈಗ ಕಂಬಳಿ ಹೊದ್ದು

ಅಜ್ಜೀ ಅಜ್ಜೀ ಹೇಳಜ್ಜೀ
ಆತನ ಕೊಲುವುದು ಹೇಗಜ್ಜೀ

ಬಂದಿಲ್ಲವೆ ಮಕ್ಕಳೆ ಇನ್ನೂ ನಿದ್ದೆ
ಬಂದಿದೆಯೆಂದೇ ನಾ ತಿಳಿದಿದ್ದೆ

ಏಳು ಸಮುದ್ರಗಳಾಚೆಗೆ ದ್ವೀಪ
ಉರಿಯುವುದಲ್ಲಿ ನಂದಾದೀಪ

ಅಲ್ಲೇ ಇರುವುದು ಮಾಂತ್ರಿಕ ಜೀವ
ಆರಿಸಲೆಂದೇ ಆತನು ಸಾವ

ಆದರೆ ಮಾತ್ರ ದ್ವೀಪದ ಸುತ್ತಲು
ರಕ್ಕಸನೊಬ್ಬ ಇರುವನು ಕಾವಲು

ನಾಳೆ ಹೇಳುವೆ ಆತನ ಗುಟ್ಟು
ಮಲಗಿರಿ ಈಗ ಗಾಬರಿ ಬಿಟ್ಟು

ಭಾರೀ ನಿದ್ದೆಯೆ ಬಿದ್ದಿರಬೇಕು
ಎಚ್ಚರವಾಗಲು ಸೂರ್ಯನ ಬೆಳಕು

ಸುತ್ತ ನೋಡಿದರೆ ಉರಿಗಣ್ಣುಜ್ಜಿ
ಎಲ್ಲೂ ಇಲ್ಲದ ಅಡಗೂಲಜ್ಜಿ

ಎಲ್ಲಿ ಹೋದಳು ನಮ್ಮ ಅಡಗೂಲಜ್ಜಿ
ಎಲ್ಲ ಗುರುತುಗಳನು ಒಮ್ಮೆಲೆ ಉಜ್ಜಿ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...