Home / ಕವನ / ಕವಿತೆ / ನಾಸಿಯಾ

ನಾಸಿಯಾ

ಕೆಫೇಟೇರಿಯಾದಲ್ಲಿ ಒಬ್ಬಳೇ ಇದ್ದಳು ಲಿಜಾ ಟೇಬಲ್ ಮುಂದೆ
ಕಾಫಿಗೆ ಹೇಳಿ ಸಿಗರೇಟು ಸೇದುತ್ತ
ಬಿಳಿಚಿದ ಕೈಬೆರಳುಗಳಿಂದ ಸನ್ನೆ ಮಾಡಿದಳು
ಹೋಗಿ ಅವಳ ಬಳಿ ಕುಳಿತೆ ನಕ್ಕಳು ಮೆಲ್ಲನೆ
ಸುಮ್ಮನೆ ಏನೇನೋ ಹೇಳಿದಳು ಈಗೀಗ
ಏಕೆ ದೂರಾ ಎಂದು ಕೇಳಿದ್ದಕ್ಕೆ ಕೆಲಸಾ ಅ೦ದೆ ಜೋಲುಮುಖ ಮಾಡಿ

ಮೂರು ತಿಂಗಳು ಎಂದಳು ಸಿಗರೇಟು ಹಚ್ಚಿ
ಹೂಂ ಎಂದೆ ತುಟಿಗಳೆಡೆಯಿಂದ
ಜಾಕಿಯ ಕೆಲಸ ಎಂದಳು ಹೊಗೆರಿಂಗು ಬಿಟ್ಟೆ
ಜಾಕಿಗೆ ಒಂದು ಬೇಬಿ ಬೇಕಂತೆ ಇಷ್ಟು ವರ್ಷದ ಮೇಲೆ
ಎಂದಳು ಮಜಾ ಅಂದೆ ಆಶ್ಚರ್ಯದಿಂದ ನೋಡಿದಳು
ಬೇರೇನೊ ನೆನಪಾಯ್ತು ಲಿಜಾ ಅಂದೆ

ಹೊರಗೆ ಮಳೆ ಬೀಳುತ್ತಿತ್ತು ಚಳಿಗಾಳಿ ಲಿಜಾಳ
ಸಣ್ಣಕೊಡೆಯಡಿಯಲ್ಲಿ ನಡೆದೆವು ಓಣಿದೀಪಗಳ ಕೆಳಗೆ
ಅವಳ ಸೊ೦ಟ ಬಳಸಿದೆ ಚಳಿ ಅಲ್ಲ ಎಂದಳು
ಅವಳ ಮೂರು ತಿಂಗಳ ಹೊಟ್ಟೆ ಮುಟ್ಟಿ ನೋಡಿದೆ
ಜಾಕಿಗೆ ಸೆನ್ಸ್‌ ಇಲ್ಲ ಎಂದಳು

ಲಿಜಾ ಬಾಗಿಲು ತೆರೆದು ಬಾತ್ ರೂಮಿಗೆ ಹೋಗಿ
ಸ್ಕರ್ಟ್‌ ಕಳಚಿ ನೈಟ್ ಗೌನು ಹಾಕಿ ಬಂದಳು
ಮಂಚದ ಮೇಲೆ ಕುಸಿದೆ ಪರಿಚಿತ ಹೆಣ್ಣ
ಪರಿಚಿತ ಹಾಸಿಗೆಯ ಪರಿಚಿತ ಬೆವರ ವಾಸನೆ ಈಗ
ಹೊಟ್ಟೆಯೊಳಗೆ ಕಪ್ಪೆಯ ಹಾಗೆ ನುಸುಳಿತು
ಆಕಳಿಸಿ ಮೈಮುರಿದು ಇದೀಗ ಎಲ್ಲಾ ಕಷ್ಟ
ಈ ಬೇಬಿಯ ಸಮಸ್ಯೆ ಎಂದಳು ಅಂಗಾತ ಮಲಗಿ
ಅಗ್ಗ ಪೌಡರಿನ ನಾಥ ಬುರುಗಿನ ನಾಧ ಡುಬ್ಬದ ಹಾಗೆ
ಬೆಳೆದಿತ್ತು ಈ ಬೇಸರ ಬೇರೆ ಗೊಣಗಿದೆ
ಹೂಂ ಎಂದು ಕೇಳಿದಳು ಕರಗಿಸು ಅಂದೆ
ಇಷ್ಟರ ಮೇಲೆ ಸ್ವಲ್ಪ ಕಷ್ಟ ಮೈಗೆ ತೊಂದರೆ ಎಂದಳು
ಈ ಚಕ್ರಬಿಂಬದ ಸುತ್ತ ಸುಳಿಯಲಾರೆ
ಇದನ್ನು ಭೇದಿಸಲಾರೆ
ನಿರ್ವೀರ್ಯ ನಾನು ಇದೆಲ್ಲಾ ಕೆಟ್ಟ ವಾಕರಿಕೆ
ಬೇಸರ ಬರಿಸುತ್ತದೆ ನನಗೆ-ಪ್ಲೀಸ್ ಗೌನು ಕೆಳಕ್ಕೆ ಸರಿಸು
ಇಲ್ಲಾ ಲೈಟು ಆರಿಸು ಲಿಜಾ ಅಂದೆ
ಏನೇನೊ ಕನವರಿಸುತ್ತೀರಿ ನಿದ್ದೆಯ ಮತ್ತು
ಸ್ವಲ್ಪ ಮಜಾ ಇರಲಿ ಎಂದು ನೆನೆದೆ ಸುಮ್ಮನೆ ಮಲಗಿ
ಈ ಚಳಿಗೆ ಎಂದು ನನ್ನ ಒಳಕ್ಕೆ ಸೆಳೆದು
ತಲೆತಡವಿ ಮಲಗಿದಳು-ಚಡಪಡಿಸಲಾರದೆ
ಬಿದ್ದೆ ಬೆಳಗಾಗುವುದನ್ನೆ ಕಾದು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...