Home / ಕವನ / ಕವಿತೆ / ಹೆಂಡಗಡಂಗಿನ ಚಿತ್ರ

ಹೆಂಡಗಡಂಗಿನ ಚಿತ್ರ

ಗೋಡೆ ಮೇಲಿನ ದೊಡ್ಡ ಗಾತ್ರದ ಎಲೆಗಳ ಹೂಬಳ್ಳಿ
ಸ್ತಬ್ಧ ಚಿತ್ರವಾಗಿಯಷ್ಟೇ ಉಳಿದಿದೆ.  ಎಂದೋ ಉದುರಿದ ಎಲೆಗಳು
ನೆಲ ಬಗೆದು ಬೂಮಿಯೊಡಲು ಸೇರಿ, ಗೆದ್ದಲಿಡಿದು ಎಲುಬು ತಿಂದ
ಮನುಷ್ಯನಂತೇ ಆಗಿಹೋಗಿವೆಯೇನೊ.

ಬುದ್ಧಿ ಬಂದಾಗ ಮೂಲೆ ಸೇರಿದ ಪ್ರಜ್ಞಾಹೀನ ಇನ್ನೂ ಮೇಲೆದ್ದಿಲ್ಲ.
ಉಡುಪು ಮಾಸಿಲ್ಲ, ಪ್ರೇಮ ಮಾತ್ರ ಬೆಂಕಿಯಂತೆ ಉರಿದು ಹೋಗುತಿದೆ.
ಮಳೆಗಾಲದ ಬಣ್ಣಬಣ್ಣದ ಚಿಟ್ಟೆಗಳು ಒಳಸುಳಿದು ಹೂದೋಟದತ್ತ ಹಾರಿಹೋಗಲಾರಂಭಿಸಿವೆ.

ಹುಲಿ ಆಡಿಸುವವನು ಈಗಷ್ಟೇ ಪೀಪಾಯಿ ಘಾಟು ಹೆಂಡ ಏರಿಸಿ,
ಜನರ ಮಧ್ಯೆಯೇ ನಡೆದುಹೋಗಿದ್ದಾನೆ.

ವಸಂತಮಾಸದ ಹಿರಿಮೆಯಲಿ ಹಿಗ್ಗುವ ಪ್ರಕೃತಿ ಸೌಂದರ್ಯದ ಮೋಹಕಪ್ರಭೆ – ಹೆಂಡಗಿರಾಕಿಗಳನ್ನು
ಯಥೇಚ್ಛವಾಗಿ ಕರೆತರುತ್ತಿದೆ.
ದಮ್ಮಡಿಯಿಲ್ಲದೆ ಕುಡಿದವನೊಬ್ಬ ಅಡವಿಟ್ಟು ಹೋದ ಸ್ಯಾಕ್ಸಫೋನ್
ಇನ್ನೂ ಅಡ್ಡಗೋಡೆಯ ಮೇಲಿದೆ.

ತಡಿಕೆ ಮರೆಯಲ್ಲಿ ಹಂದಿಬಾಡಿನ ಚಾಕಣ ಉರಿಯುತ್ತಿದ್ದವಳು ಮಾತ್ರ
ಅಂದು ಗೈರು ಹಾಜರು.  ಹಸಿ ನೆಲಗಡಲೆ, ಆಲೂಗಡ್ಡೆ ನಂಜಿಕೊಳ್ಳುವ
ಕುಡುಕರಿಗೆ ಅವಳ ಚಿಂತೆಯೇ ಇಲ್ಲ.

ನಾಲ್ಕೈದು ಬಾತುಕೋಳಿಗಳೊಂದಿಗೆ ಬಂದು ಮೂಲೆ ಸೇರಿದ ಬೇಟೆಗಾರ-
ಅಂದಿನ ಶೌರ್ಯ ಸಾಹಸಗಳ ವರ್ಣನೆ ಮಾಡುತ್ತಲೇ ನೆಲಕ್ಕೆ ಬೀಳುತ್ತಾನೆ.

ಕಾಲವನ್ನೇ ಮೀರಿ ಮುನ್ನಡೆಯುವ ಹೆಂಡಗಡಂಗು-
ಕ್ಷಣಕಾಲ ನಿಂತು ನಡೆದಂತೆಯೂ ಭಾಸವಾಗುತ್ತಿತ್ತು.

*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...