Home / ಕವನ / ಕವಿತೆ / ಹೆಂಡಗಡಂಗಿನ ಚಿತ್ರ

ಹೆಂಡಗಡಂಗಿನ ಚಿತ್ರ

ಗೋಡೆ ಮೇಲಿನ ದೊಡ್ಡ ಗಾತ್ರದ ಎಲೆಗಳ ಹೂಬಳ್ಳಿ
ಸ್ತಬ್ಧ ಚಿತ್ರವಾಗಿಯಷ್ಟೇ ಉಳಿದಿದೆ.  ಎಂದೋ ಉದುರಿದ ಎಲೆಗಳು
ನೆಲ ಬಗೆದು ಬೂಮಿಯೊಡಲು ಸೇರಿ, ಗೆದ್ದಲಿಡಿದು ಎಲುಬು ತಿಂದ
ಮನುಷ್ಯನಂತೇ ಆಗಿಹೋಗಿವೆಯೇನೊ.

ಬುದ್ಧಿ ಬಂದಾಗ ಮೂಲೆ ಸೇರಿದ ಪ್ರಜ್ಞಾಹೀನ ಇನ್ನೂ ಮೇಲೆದ್ದಿಲ್ಲ.
ಉಡುಪು ಮಾಸಿಲ್ಲ, ಪ್ರೇಮ ಮಾತ್ರ ಬೆಂಕಿಯಂತೆ ಉರಿದು ಹೋಗುತಿದೆ.
ಮಳೆಗಾಲದ ಬಣ್ಣಬಣ್ಣದ ಚಿಟ್ಟೆಗಳು ಒಳಸುಳಿದು ಹೂದೋಟದತ್ತ ಹಾರಿಹೋಗಲಾರಂಭಿಸಿವೆ.

ಹುಲಿ ಆಡಿಸುವವನು ಈಗಷ್ಟೇ ಪೀಪಾಯಿ ಘಾಟು ಹೆಂಡ ಏರಿಸಿ,
ಜನರ ಮಧ್ಯೆಯೇ ನಡೆದುಹೋಗಿದ್ದಾನೆ.

ವಸಂತಮಾಸದ ಹಿರಿಮೆಯಲಿ ಹಿಗ್ಗುವ ಪ್ರಕೃತಿ ಸೌಂದರ್ಯದ ಮೋಹಕಪ್ರಭೆ – ಹೆಂಡಗಿರಾಕಿಗಳನ್ನು
ಯಥೇಚ್ಛವಾಗಿ ಕರೆತರುತ್ತಿದೆ.
ದಮ್ಮಡಿಯಿಲ್ಲದೆ ಕುಡಿದವನೊಬ್ಬ ಅಡವಿಟ್ಟು ಹೋದ ಸ್ಯಾಕ್ಸಫೋನ್
ಇನ್ನೂ ಅಡ್ಡಗೋಡೆಯ ಮೇಲಿದೆ.

ತಡಿಕೆ ಮರೆಯಲ್ಲಿ ಹಂದಿಬಾಡಿನ ಚಾಕಣ ಉರಿಯುತ್ತಿದ್ದವಳು ಮಾತ್ರ
ಅಂದು ಗೈರು ಹಾಜರು.  ಹಸಿ ನೆಲಗಡಲೆ, ಆಲೂಗಡ್ಡೆ ನಂಜಿಕೊಳ್ಳುವ
ಕುಡುಕರಿಗೆ ಅವಳ ಚಿಂತೆಯೇ ಇಲ್ಲ.

ನಾಲ್ಕೈದು ಬಾತುಕೋಳಿಗಳೊಂದಿಗೆ ಬಂದು ಮೂಲೆ ಸೇರಿದ ಬೇಟೆಗಾರ-
ಅಂದಿನ ಶೌರ್ಯ ಸಾಹಸಗಳ ವರ್ಣನೆ ಮಾಡುತ್ತಲೇ ನೆಲಕ್ಕೆ ಬೀಳುತ್ತಾನೆ.

ಕಾಲವನ್ನೇ ಮೀರಿ ಮುನ್ನಡೆಯುವ ಹೆಂಡಗಡಂಗು-
ಕ್ಷಣಕಾಲ ನಿಂತು ನಡೆದಂತೆಯೂ ಭಾಸವಾಗುತ್ತಿತ್ತು.

*****

Tagged:

Leave a Reply

Your email address will not be published. Required fields are marked *

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...