Home / ಕವನ / ಕವಿತೆ / ಬೆಳಸು

ಬೆಳಸು


ನನ್ನ ಅಜ್ಜಿಯದು
ತುಂಬು ಸಂಸಾರ
ನನ್ನ ಅವ್ವನಿಗೆ
ನಾಲ್ಕು ಮಂದಿ ಮಕ್ಕಳು
ನನಗೆ-
ಒಬ್ಬಳೇ ಹೆಣ್ಣು ಮಗಳು
ಎಲ್ಲ ನೆನಪಾಗುವುದು-

ನಾನು, ನನ್ನ ತಂಗಿ
ತಮ್ಮಂದಿರು ಹಂಚಿಕೊಂಡೆವು
ಅನ್ನದಂತೆಯೇ ಪ್ರೀತಿಯನ್ನು
ಸಾಧಿಸಿದೆವು ದ್ವೇಷವನ್ನು
ಬಿಟ್ಟುಕೊಟ್ಟವು ಹಠವನ್ನು
ಒಟ್ಟಾಗಿಯೆ ಕಂಡೆವು ಕನಸುಗಳನ್ನು

ಕಿತ್ತಾಡಿದೆವು, ರಾಜಿಯಾದೆವು
ಕರುಬಿದೆವು, ಮರುಗಿದೆವು
ಪರಸ್ಪರ ಜೊತೆಯಾಗಿಯೇ
ಇಟ್ಟೆವು ಹೆಜ್ಜೆಗಳನ್ನು
ಅವ್ವ ನೋಯುವಳೆಂದು
ಬಲಿಕೊಟ್ಟೆವು
ಸಣ್ಣ ಪುಟ್ಟ ಆಕಾಂಕ್ಷೆಗಳನ್ನು

ಅಪ್ಪ ಬಸವಳಿಯದಿರಲಿ
ಎಂದು ಹೆಗಲು ಕೊಟ್ಟೆವು ನೊಗಕ್ಕೆ
ಬಯಸದ ಪ್ರತಿಫಲವನ್ನು
ಕೊಟ್ಟು-ಕೊಂಡೆವು ಪ್ರೀತಿಯ
ಈಜಿ ಪ್ರವಾಹದ ವಿರುದ್ಧ
ಸೇರಿದೆವು ದಡ ಒಟ್ಟಾಗಿ


ಈಗ:
ನನ್ನ ಮಗಳು ಇಡೀ
ಪರಿವಾರದ ಕಣ್ಮಣಿ
ಅಣ್ಣ, ತಂಗಿ, ತಮ್ಮ
ಸಂಬಂಧಗಳ ಒಳಸುಳಿ ಅರಿಯಳು
ರಾಜಿಯಾಗುವುದು, ಹಂಚಿಕೊಳ್ಳುವುದು
ಅವಳಿಗೆ ನಿಘಂಟಿನ ಪದಗಳು

ಅಚ್ಚೆಯ ಕುಂಡದಲ್ಲಿ
ಅವ್ವ ಅಪ್ಪನ ನೆರಳಲ್ಲೇ
ಬೆಳೆದ ಹೂಬಳ್ಳಿ
ಪ್ರಖರ ಸೂರ್‍ಯನನು ಎದುರಿಸಲಾರಳು
ಅಂಜುಕುಳಿ-
ಗಾಳಿಯಾಟಕೂ ಬೆದರುವಳು

ವಿಚಿತ್ರವೆನಿಸುವುದು
ಎಷ್ಟು ಇತ್ತರೂ
ಏನೇ ಇತ್ತರೂ
ಮತ್ತಷ್ಟು ಬಯಸುವಳು
ಭಿಕ್ಷುಕಿಯಂತೆ….

ಇಡೀ ಲೋಕವ
ತಂದು ಸುರಿದರೂ ತುಂಬದವಳ
ಭಿಕ್ಷಾಪಾತ್ರೆ
ಹಸಿವು ಹಸಿವೆಂದು ಚೀರುವಳು


ನನಗೊ ಒಳಗೊಳಗೆ ವೇದನೆ
ಮಮತೆ ಮುಳುವಾಯಿತೆ?
ಅನುಮಾನ-

ನಿದ್ರೆಯಿಲ್ಲದ ರಾತ್ರಿಗಳಲ್ಲಿ
ಕೆಟ್ಟ ಕನಸುಗಳು…

ಶುಭ್ರವಾದ ಆಕಾಶ
ಹಕ್ಕಿಯಾಗಿದ್ದಾಳೆ ನನ್ನ ಮಗಳು
ಅವಳಿಗೆ ರೆಕ್ಕೆಗಳೇ ಇಲ್ಲ!
ನೀಲಿ ಸಮುದ್ರ
ದೋಣಿಯಲ್ಲಿದ್ದಾಳೆ ನನ್ನ ಮಗಳು
ಹುಟ್ಟೇ ಇಲ್ಲ!

ನನೇ ನೆಟ್ಟು ನೀರುಣಿಸಿ
ಬೆಳೆಸಿದ ಸಸಿ
ಭರಭರ ಬೆಳೆದು ಸೊಕ್ಕಿ ನಿಂತಿದೆ
ಮರವಾಗಿ-
ಸ್ವಾರ್ಥವೇ ಅದರ ಫಲವಾಗಿ…

ಎದೆ ಹಾಲು
ಹಾಲಾಹಲವಾಗುವುದೆಂದರೆ…
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...