Home / ಕವನ / ಕವಿತೆ / ಬೆಳಸು

ಬೆಳಸು


ನನ್ನ ಅಜ್ಜಿಯದು
ತುಂಬು ಸಂಸಾರ
ನನ್ನ ಅವ್ವನಿಗೆ
ನಾಲ್ಕು ಮಂದಿ ಮಕ್ಕಳು
ನನಗೆ-
ಒಬ್ಬಳೇ ಹೆಣ್ಣು ಮಗಳು
ಎಲ್ಲ ನೆನಪಾಗುವುದು-

ನಾನು, ನನ್ನ ತಂಗಿ
ತಮ್ಮಂದಿರು ಹಂಚಿಕೊಂಡೆವು
ಅನ್ನದಂತೆಯೇ ಪ್ರೀತಿಯನ್ನು
ಸಾಧಿಸಿದೆವು ದ್ವೇಷವನ್ನು
ಬಿಟ್ಟುಕೊಟ್ಟವು ಹಠವನ್ನು
ಒಟ್ಟಾಗಿಯೆ ಕಂಡೆವು ಕನಸುಗಳನ್ನು

ಕಿತ್ತಾಡಿದೆವು, ರಾಜಿಯಾದೆವು
ಕರುಬಿದೆವು, ಮರುಗಿದೆವು
ಪರಸ್ಪರ ಜೊತೆಯಾಗಿಯೇ
ಇಟ್ಟೆವು ಹೆಜ್ಜೆಗಳನ್ನು
ಅವ್ವ ನೋಯುವಳೆಂದು
ಬಲಿಕೊಟ್ಟೆವು
ಸಣ್ಣ ಪುಟ್ಟ ಆಕಾಂಕ್ಷೆಗಳನ್ನು

ಅಪ್ಪ ಬಸವಳಿಯದಿರಲಿ
ಎಂದು ಹೆಗಲು ಕೊಟ್ಟೆವು ನೊಗಕ್ಕೆ
ಬಯಸದ ಪ್ರತಿಫಲವನ್ನು
ಕೊಟ್ಟು-ಕೊಂಡೆವು ಪ್ರೀತಿಯ
ಈಜಿ ಪ್ರವಾಹದ ವಿರುದ್ಧ
ಸೇರಿದೆವು ದಡ ಒಟ್ಟಾಗಿ


ಈಗ:
ನನ್ನ ಮಗಳು ಇಡೀ
ಪರಿವಾರದ ಕಣ್ಮಣಿ
ಅಣ್ಣ, ತಂಗಿ, ತಮ್ಮ
ಸಂಬಂಧಗಳ ಒಳಸುಳಿ ಅರಿಯಳು
ರಾಜಿಯಾಗುವುದು, ಹಂಚಿಕೊಳ್ಳುವುದು
ಅವಳಿಗೆ ನಿಘಂಟಿನ ಪದಗಳು

ಅಚ್ಚೆಯ ಕುಂಡದಲ್ಲಿ
ಅವ್ವ ಅಪ್ಪನ ನೆರಳಲ್ಲೇ
ಬೆಳೆದ ಹೂಬಳ್ಳಿ
ಪ್ರಖರ ಸೂರ್‍ಯನನು ಎದುರಿಸಲಾರಳು
ಅಂಜುಕುಳಿ-
ಗಾಳಿಯಾಟಕೂ ಬೆದರುವಳು

ವಿಚಿತ್ರವೆನಿಸುವುದು
ಎಷ್ಟು ಇತ್ತರೂ
ಏನೇ ಇತ್ತರೂ
ಮತ್ತಷ್ಟು ಬಯಸುವಳು
ಭಿಕ್ಷುಕಿಯಂತೆ….

ಇಡೀ ಲೋಕವ
ತಂದು ಸುರಿದರೂ ತುಂಬದವಳ
ಭಿಕ್ಷಾಪಾತ್ರೆ
ಹಸಿವು ಹಸಿವೆಂದು ಚೀರುವಳು


ನನಗೊ ಒಳಗೊಳಗೆ ವೇದನೆ
ಮಮತೆ ಮುಳುವಾಯಿತೆ?
ಅನುಮಾನ-

ನಿದ್ರೆಯಿಲ್ಲದ ರಾತ್ರಿಗಳಲ್ಲಿ
ಕೆಟ್ಟ ಕನಸುಗಳು…

ಶುಭ್ರವಾದ ಆಕಾಶ
ಹಕ್ಕಿಯಾಗಿದ್ದಾಳೆ ನನ್ನ ಮಗಳು
ಅವಳಿಗೆ ರೆಕ್ಕೆಗಳೇ ಇಲ್ಲ!
ನೀಲಿ ಸಮುದ್ರ
ದೋಣಿಯಲ್ಲಿದ್ದಾಳೆ ನನ್ನ ಮಗಳು
ಹುಟ್ಟೇ ಇಲ್ಲ!

ನನೇ ನೆಟ್ಟು ನೀರುಣಿಸಿ
ಬೆಳೆಸಿದ ಸಸಿ
ಭರಭರ ಬೆಳೆದು ಸೊಕ್ಕಿ ನಿಂತಿದೆ
ಮರವಾಗಿ-
ಸ್ವಾರ್ಥವೇ ಅದರ ಫಲವಾಗಿ…

ಎದೆ ಹಾಲು
ಹಾಲಾಹಲವಾಗುವುದೆಂದರೆ…
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...