Home / ಕವನ / ಅನುವಾದ / ಮಿಸ್ಟರ್ ಕಾಗಿಟೋ ನರಕದ ಬಗ್ಗೆ ಹೀಗೆಂದುಕೊಳ್ಳುತ್ತಾನೆ

ಮಿಸ್ಟರ್ ಕಾಗಿಟೋ ನರಕದ ಬಗ್ಗೆ ಹೀಗೆಂದುಕೊಳ್ಳುತ್ತಾನೆ

ನರಕದ ತಳಾತಳದಲ್ಲಿರುವ ಸೀಮೆ. ಎಲ್ಲರೂ ಅಂದುಕೊಂಡಂತೆ ಅಲ್ಲಿ
ನಿರಂಕುಶಾಧಿಕಾರಿಗಳಿಲ್ಲ. ಮಾತೃಹಂತಕರು, ಮಾತೃಗಾಮಿಗಳು, ಹೆಣಗಳನ್ನು ದರದರ
ಎಳೆದಾಡಿದವರು, ದೇಶದ್ರೋಹಿಗಳು ಯಾರೂ ಇಲ್ಲ. ನರಕದ ತಳಾತಳ ಕಾಲವಿದರ
ಆಶ್ರಯತಾಣ, ಎಲ್ಲೆಲ್ಲೂ ಕನ್ನಡಿಗಳು, ಸಂಗೀತ ವಾದ್ಯಗಳು, ವರ್ಣಚಿತ್ರಗಳು. ಸುಮ್ಮನೆ
ನೋಡಿದರೆ ಇದು ನರಕದ ಡಿಲಕ್ಸ್ ಡಿಪಾರ್ಟ್ಮೆಂಟು ಅನ್ನಿಸುತ್ತದೆ; ಕುದಿಯುವ ಎಣ್ಣೆ
ಕೊಪ್ಪರಿಗೆ ಇಲ್ಲ. ಮೈ ಕೊಯ್ಯುವ ಗರಗಸವಿಲ್ಲ. ಧಗಧಗ ಉರಿಯುವ ಬೆಂಕಿ
ನಾಲಗೆಗಳಿಲ್ಲ.
ವರ್‍ಷ ಪೂರ್ತಿ ಕಾವ್ಯ ಸ್ಪರ್ಧೆ, ಸಂಗೀತೋತ್ಸವ, ಕಲಾ ಮೇಳಗಳೇ. ಇವಕ್ಕೆ ಕ್ಲೈಮಾಕ್ಸ್
ಎಂಬುದಿಲ್ಲ. ಶಾಶ್ವತವಾಗಿ, ಬಹುಮಟ್ಟಿಗೆ ಅನಂತವಾಗಿ ಅಖಂಡವಾದ ಕ್ಲೈಮಾಕ್ಸೇ
ಯಾವಾಗಲೂ. ತಿಂಗಳಿಗೊಂದು ಹೊಸ ಪಂಥ, ಹೊಸ ಶೈಲಿಯ ಅವಿಷ್ಕಾರ.
ಅಗ್ರಗಾಮಿ ಕವಿ ಕಲಾವಿದರ ಮುನ್ನೆಡೆಯನ್ನು ತಡೆಯುವವರೇ ಇಲ್ಲ.
ನರಕದೊಡೆಯ ಬೇಲ್ಸೆಬಬ್‍ನಿಗೆ ಕಲೆಯನ್ನು ಕಂಡರೆ ತುಂಬ ಪ್ರೀತಿ. ನರಕದ ಮೇಳ,
ನರಕದ ಕವಿಗಳು, ನರಕದ ಸಂಗೀತಗಾರರು ಇವರೆಲ್ಲ ಸ್ವರ್ಗದಲ್ಲಿರುವ ಇಂಥವರಿಗಿಂತ
ತುಂಬ
ಅತ್ಯುತ್ತಮ ಎಂದು ಜಂಬಕೊಚ್ಚಿಕೊಳ್ಳಲು ಶುರುಮಾಡಿದ್ದಾನೆ. ಅತ್ಯುತ್ತಮ ಕಲೆ ಇದ್ದರೆ
ಅತ್ಕುತ್ತಮ ಸರ್ಕಾರವಿರುತ್ತದೆ. ಸತ್ಯ, ಪರಮ ಸತ್ಯ. ಸದ್ಯದಲ್ಲೆ ನರಕದ ಕಲಾವಿದರಿಗೂ
ಸ್ವರ್ಗದವರಿಗೂ ನಡುವೆ ಒಂದು ಸ್ಪರ್ಧೆ ಇದೆ, ಎರಡು ವಿಶ್ವಗಳ ಮಹಾ ಸರ್ಧೆ.
ಡಾಂಟೆ, ಫ್ರಾ ಏಂಜಲಿಕೋ, ಬಾಖ್ ಎಷ್ಟು ಮಟ್ಟಿಗೆ ಉಳಿದುಕೊಳ್ಳುತಾರೋ ನೋಡಬೇಕು.
ನರಕದೊಡೆಯ ಕಲೆಗೆ ಸಾಹಿತ್ಯಕ್ಕೆ ತುಂಬ ಪ್ರೋತ್ಸಾಹ ಕೊಡುತ್ತಾನೆ. ಕಲಾವಿದರಿಗೆ
ಶಾಂತಿ, ಅತ್ಯುತ್ತಮ ಆಹಾರ, ನರಕದ ಬದುಕಿನ ತಳಮಳ ತಾಗದಂಥ ಪ್ರತ್ಯೇಕ ಪರಿಪೂರ್ಣ
ಏಕಾಂತ ಒದಗಿಸಿದ್ದಾನೆ.
*****
ಮೂಲ: ಝ್ಬಿಗ್ನ್ಯೂ ಹರ್‍ಬರ್‍ಟ್ / Zbigniew Herbert

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...