Home / ಕವನ / ಅನುವಾದ / ಕೊನೆ, ಮೊದಲು

ಕೊನೆ, ಮೊದಲು

ಪ್ರತಿಯೊಂದು ಯುದ್ಧಮುಗಿದ ಮೇಲೂ
ಯಾರಾದರೂ ಮತ್ತೆ ಎಲ್ಲವನ್ನೂ ಅಣಿಗೊಳಿಸಬೇಕು.
ಹಾಳಾದದ್ದೆಲ್ಲ ಮತ್ತೆ ತನಷ್ಟಕ್ಕೇ
ಸರಿಯಾಗುವುದಿಲ್ಲ ತಾನೇ?

ಯಾರಾದರೂ ಬಂದು ರಸ್ತೆ ಮೇಲೆ ಬಿದ್ದ
ಕಲ್ಲು ಮಣ್ಣು ಪಕ್ಕಕ್ಕೆ ತಳ್ಳಿ
ಹೆಣ ಹೂತ್ತೆಗಾಡಿಗಳು
ಸಾಗುವುದಕ್ಕೆ ದಾರಿ ಮಾಡಬೇಕು.

ಯಾರಾದರೂ ಸರಿ
ಗಾಜಿನ ಚೂರು, ರಕ್ತದ ಬಟ್ಟೆ ರಾಶಿ,
ಸೋಫಾ ಸ್ಪ್ರಿಂಗು, ಕೆಸರು, ಬೂದಿ, ಇಟ್ಟಿಗೆ,
ಸಿಮೆಂಟು ಕಬ್ಬಿಣದ ಅವಶೇಷಗಳ ನಡುವೆ ಕಷ್ಪಪಡಲೇಬೇಕು

ಯಾರಾದರೂ ಬಂದು
ಗೋಡೆಗೆ ಆಸರೆಯಾಗಿ ಕಂಬವನ್ನು ಎತ್ತಿನಿಲ್ಲಿಸಬೇಕು,
ಕಿಟಕಿಗೆ ಗಾಜು ಹಾಕಬೇಕು, ಬಾಗಿಲುವಾಡ ಕೂಡಿಸಬೇಕು.

ಸಂಗೀತದ ಸದ್ದಿಲ್ಲ, ಫೋಟೋಗಳ ಸುಳಿವಿಲ್ಲ
ವರ್‍ಷಗಟ್ಟಲೆ ಸುಮೃನೆ ದುಡಿಯಬೇಕು.
ಕ್ಯಾಮೆರಾಗಳೆಲ್ಲ ಬೇರೆ ಹೊಸ ಯುದ್ಧಗಳ
ಫೋಟೋ ತೆಗೆಯಲು ಹೋಗಿವೆ.
ಸೇತುವೆಗಳು ಹೊಸವಾಗಬೇಕು,
ಅಂಗಿ ತೋಳು ಮೇಲಕ್ಕೆ ಮಡಿಸಿ ಮಡಿಸಿ
ಚಿಂದಿ ಚಿಂದಿಯಾಗಬೇಕು.

ಪೊರಕೆ ಹಿಡಿದ ಯಾರಾದರೂ
ಇದೆಲ್ಲ ಹೇಗಾಯಿತೆಂದು ನೆನಪು ಮಾಡಿಕೊಳ್ಳುತ್ತಾರೆ.
ಸುಮ್ಮನೆ ನಿಂತ ಇನ್ನು ಯಾರೋ
ಗಾಯವಿರದ ತಮ್ಮ ತಲೆ ತೂಗುತ್ತಾ ಕೇಳುತ್ತಾರೆ.
ಅಲ್ಲೆ ಸಮೀಪದಲ್ಲಿ ಬಹಳ ಜನ
ಈ ಹಳೆಯ ಯುದ್ಧದ ಕತೆಯೆಲ್ಲ
ಬರೀ ಬೋರು ಅಂದುಕೊಳ್ಳುತ್ತ ಇರಲೇಬೇಕು.
ಬೆಳೆದ ಮುಳ್ಳು ಪೊದೆಯ ಅಡಿಯಲ್ಲಿ
ಸಿಕ್ಕುಬಿದ್ದಿರುವ ತುಕ್ಕುಹಿಡಿದ
ವಾಗ್ವಾದವನ್ನು ಕಿತ್ತು ಆಗಾಗ ತಿಪ್ಪೆಗೆ ಎಸೆಯುವವರು
ಯಾರಾದರೂ ಇನ್ನೂ ಇರಲೇಬೇಕು.
ಇದೆಲ್ಲ ಆದದ್ದು ಏನು ಯಾಕೆ ಎಂದು
ತಿಳಿದಿರುವವರು
ಅಷ್ಟು ತಿಳಿಯದವರಿಗೆ ಅವಕಾಶ ಮಾಡಿಕೊಟ್ಟು
ಜಾಗಖಾಲಿ ಮಾಡಲೇಬೇಕು.
ಅಷ್ಟು ತಿಳಿಯದವರು
ಏನೂ ತಿಳಿಯದವರಿಗೆ
ಅವರು ಏನೇನೋ ತಿಳಿಯದು ಎಂದು ಕೂಡಾ ತಿಳಿಯದವರಿಗೆ
ಅವಕಾಶ ಮಾಡಿಕೊಡುತ್ತಾರೆ.
ಆಮೇಲೆ
ಕಾರ್‍ಯಕ್ರಮಗಳನ್ನೆಲ್ಲ ಮುಚ್ಚಿ ಬೆಳೆದ
ಹಸಿರು ಹುಲ್ಲಿನ ಮೇಲೆ,
ಹಲ್ಲಿನಲ್ಲಿ ಹುಲ್ಲಿನೆಳೆ ಕಚ್ಚುತ್ತಾ
ಮೇಲೆ ತೇಲುವ ಮೋಡವನ್ನು
ಬಿಟ್ಟ ಕಣ್ಣು ಬಿಟ್ಟಂತೆ ನೋಡುತ್ತಾ
ಅಂಗಾತ ಮಲಗಿದವನು ಇದ್ದೇ ಇರಬೇಕು.
*****
ಮೂಲ: ವಿಸ್ಲಾವಾ ಝ್ಯಿಂಬ್ರೊಸ್ಕ / Wisława Szymborska

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...