Home / ಕವನ / ಅನುವಾದ / ವಿಗ್ರಹ

ವಿಗ್ರಹ

ಹೌದು, ನನಗವನು ಗೊತ್ತಿದ್ದ. ವರ್ಷಗಟ್ಟಲೆ ಅವನೊಡನೆ ಇದ್ದೆ.
ಚಿನ್ನದಂಥ ಮನುಷ್ಯ, ಕಲ್ಲಿನಷ್ಟು ಗಟ್ಟಿ. ಸುಸ್ತಾಗಿದ್ದ.
ಪೆರುಗ್ವೇಯಲ್ಲಿ ಅಪ್ಪ ಅಮ್ಮನನ್ನು ಬಿಟ್ಟು
ಮಕ್ಕಳನ್ನು ಬಿಟ್ಟು, ಮಾವ ಚಿಕ್ಚಪ್ಪಂದಿರನ್ನು ಬಿಟ್ಟು
ಹೊಸದಾಗಿ ಭಾವನಂಟರಾದವರನ್ನು ಬಿಟ್ಟು,
ಮನೆ ಬಿಟ್ಟು, ಸಾಕಿದ್ದ ಕೋಳಿ ಬಿಟ್ಟು,
ಅರ್ಧ ಓದಿದ್ದ, ಇನ್ನೂ ಓದದೇ ಇದ್ದ ಪುಸ್ತಕ ಬಿಟ್ಟು
ಹೋಗಿದ್ದ. ಬಾಗಿಲು ತಟ್ಟಿದಾಗ ಅವನೆ ತೆರೆದ,
ಪೊಲೀಸರು ಹಿಡಿದುಕೊಂಡು ಹೋದರು.
ಹೊಡೆದರು, ಫ್ರಾನ್ಸು, ಡೆನ್ಮಾರ್‍ಕು
ಸ್ಪೇನು, ಇಟಲಿ ಹೋದಲೆಲ್ಲ ರಕ್ತಕಾರಿಕೊಂಡ.
ಅಲೆದಾಡುತ್ತಲೇ ಸತ್ತ. ನನಗೀಗ ಅವನ ಮುಖ ಕಾಣುತ್ತಿಲ್ಲ.
ಗಂಭೀರ ಮೌನ ಕೇಳಿಸುತ್ತಿಲ್ಲ. ಆಮೇಲೆ ಒಮ್ಮೆ,
ಬಿರುಗಾಳಿ ರಾತ್ರಿಯಲ್ಲಿ,
ಬೆಟ್ಟಕ್ಕೆ ಹಿಮದ ನಯ ಬಟ್ಟೆ ಕವಿಯುತ್ತಿದ್ದಾಗ,
ಕುದುರೆ ಮೇಲೆ ಹೋಗುತ್ತಾ
ಅಲ್ಲಿ, ದೂರದಲ್ಲಿ, ಗೆಳೆಯನನ್ನು ಕಂಡೆ.
ಕಲ್ಲಿನಲ್ಲಿ ಮೂಡಿದ್ದ ಮುಖ,
ಕಾಡು ಹವೆಯ ಧಿಕ್ಕರಿಸಿದ ಭಾವ,
ಪೀಡಿತರ ನರಳಾಟವನ್ನು ಮುಖಕ್ಕೆ ತಂದಪ್ಪಳಿಸುವ ಗಾಳಿ.
ಅಲ್ಲಿ ಗಡೀಪಾರಾದವನು ನೆಲೆ ಮುಟ್ಟಿದ.
ತನ್ನದೇ ದೇಶದಲ್ಲಿ ಕಲ್ಲಾಗಿ ಬದುಕಿದ.
*****
ಮೂಲ: ಪಾಬ್ಲೋ ನೆರುಡಾ / Pablo Neruda

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...