ಬುದ್ಧ

ಕೇಳಿಸಿಕೊಳ್ಳುವವನಂತೆ ದೂರ ದೂರ ಬಹು ದೂರದ ಮೌನ…
ಉಸಿರು ಬಿಗಿ ಹಿಡಿದು ಕಿವಿಗೊಟ್ಟರೂ ನಮಗೆ ಕೇಳದ ನಿಶ್ಯಬ್ಧ.
ಅವನೊಂದು ನಕ್ಷತ್ರ. ಅಸಂಖ್ಯ ಬೃಹತ್ ತಾರೆಗಳು,
ನಮ್ಮ ಕಣ್ಣಿಗೆ ಕಾಣದೆ, ಅವನ ಸುತ್ತುವರೆದಿದೆ.
ಅವನೇ ಎಲ್ಲಾ. ಇಲ್ಲೆ ಸುಳಿದಾಡುತ್ತ ಅವನು
ನಮ್ಮನ್ನು ನೋಡಲೆಂದು ಕಾಯೋಣವೇನು ನಾವು? ಅವನಿಗೇನಿದೆ ಆ ಬಿಸಾತು?
ಕಾಲಿಗೆ ಬಿದ್ದರೂ, ನಾವು ಬೇಡಿದರೂ
ಅವನು ನಿಶ್ಚಲ, ನಿಶ್ಯಬ್ದ.. ಬೆಕ್ಕಿನಂತೆ.
ಲಕ್ಷವರ್‍ಷಗಳಿಂದ ಅವನೊಳಗೆ ಬೆಳೆದಿದೆ
ನಮ್ಮನ್ನು ಅವನತ್ತ ಸೆಳೆವ ಶಕ್ತಿ
ನಾವಿನ್ನೂ ಅನುಭವಿಸಬೇಕಾದದ್ದು ಮರೆತಿದ್ದಾನೆ,
ಅವನ ಅರಿವಿಗೆ ಬಂದದ್ದು ನಮ್ಮ ಅಳವಿನಾಚೆ ದೂರದಲ್ಲಿದೆ
*****
ಕಲಾವಿದ ರೋಡಿನ್ ನ ತೋಟದಲ್ಲಿ ಪುಟ್ಟ ಗುಡ್ಡದ ಮೇಲಿದ್ದ ಬುದ್ಧನ ವಿಗ್ರಹ ನೋಡಿ ೧೯೦೫ರಲ್ಲಿ ಬರೆದದ್ದು.

ಮೂಲ: ರೇನರ್ ಮಾರಿಯಾ ರಿಲ್ಕ್ / Rainer Maria Rilke

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮೋಹನ ಮುರಳಿ
Next post ಸೃಜನಕ್ರಿಯೆ ಸಾವಿರ ವರ್ಷಗಳ ಏಕಾಂತ

ಸಣ್ಣ ಕತೆ

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…