Home / ಕವನ / ಅನುವಾದ / ಮುತ್ತು ಚೆಲ್ಲಾಪಿಲ್ಲಿ

ಮುತ್ತು ಚೆಲ್ಲಾಪಿಲ್ಲಿ

ಮುತ್ತು ಚೆಲ್ಲಾಪಿಲ್ಲಿ. ಹಾರಕಟ್ಟಿದ ದಾರವು ಹರಿಯಿತೆ?
ಮುತ್ತುಗಬನಾಯ್ದು ಕಟ್ಟಿದರೂ ಮತ್ತೆ, ಫಲವೇನು?
ನೀನಿಲ್ಲ. ಪೋಣಿಸಿದ ಮುತ್ತು ಹಾರವಾಗಲು
ನಿನ್ನ ಸದೃಢ ಕೊರಳು ಬೇಕೇ ಬೇಕು.
ಚಳಿ ಮುಂಜಾವು, ಇರುಳಿನೊಡನೆ ಕಾದಾಡಿ
ಬಳಲಿ, ಬಿಳುಪೇರಿ, ಸೂರ್ಯ ಹುಟ್ಟಲೆಂದು ಕಾದಂತೆ ಕಾದಿದ್ದೇನೆ.
ನಾಟಕದ ನಡುವೆ ನಿನ್ನ ಪ್ರವೇಶದ
ಯಾವೊಂದು ಭಾವಭಂಗಿಯೂ ಕಣ್ಣು ತಪ್ಪಬಾರದೆಂದು
ಕಾತರದಿಂದ ಕಾದಿರುವ ಪ್ರೇಕ್ಷಕ ಸಮೂಹ ನನ್ನ ಮುಖ.
ಲೈಟ್ ಹೌಸಿನ ಬೆಳಕಾಡುವ ವಿಶಾಲ ನಗರದ
ಬಯಲ ಬಯಸುವ ಒಳನಾಡ ಕಿರುತೊರೆಯಂತೆ;
ಬೆಟ್ಟದ ಮೇಲೆ ಸುರಿದ ಬಿರುಮಳೆ
ತನ್ನತ್ತ ಹರಿದು ಜೀವ ಉಕ್ಕಿಸಲೆಂದು
ಕಾದ ಮರುಭೂಮಿಯ ನದಿಯ ಪಾತ್ರದಂತೆ;
ಮುಗ್ಧ ಕಿಟಕಿಯಲ್ಲಿ ನಕ್ಷತ್ರವೊಂದು ಕಂಡು
ತನ್ನ ಪ್ರಶ್ನೆಗೆಲ್ಲಾ ಉತ್ತರ ಹೇಳಿತೆಂದು
ಹಂಬಲಿಸುವ ಸೆರೆಯಾಳಿನಂತೆ;
ಕಂಕುಳ ಕೆಳಗಿದ್ದ ಬೆಚ್ಚನೆ ಊರುಗೋಲನ್ನು ದೇವರ ಮುಂದೆಸೆದ,
ಪವಾಡ ಸಂಭವಿಸಿದೆ ಬಿದ್ದಲ್ಲಿಂದ ಮೇಲೇಳಲಾರದ ಹೆಳವನಂತೆ;
ನಾನು ಹಾಗೇ ಬಿದ್ದುಕೊಂಡಿದ್ದು ಕೊನೆಯ ಕಾಣುವವರೆಗೆ
ತೆವಳಬೇಕು ನೀನು ಬಾರದಿದ್ದರೆ.
ನನಗೆ ನೀನಷ್ಟೇ ಬೇಕು.
ಬಿರುಕಲ್ಲಿ ಮೂಡಿದ ಹುಲ್ಲುಗರಿಯ ಸ್ಪರ್ಶ ಪಡೆದು
ಕಾಲು ಹಾದಿಯ ಕಲ್ಲು ಇಡೀ ವಸಂತ ಬೇಕೆಂದು ಹಂಬಲಿಸದೇ?
ಹಳ್ಳಿಯ ಕೆರೆಯಲ್ಲಿ ತನ್ನ ಬಿಂಬ ನೋಡಬಯಸುವ ಚಂದ್ರ
ಮೈದುಂಬಿ ಪೂರ್ಣನಾಗಬೇಡವೆ? ಭವಿಷ್ಯದ ಪೂರ್ಣತೆ
ನಮ್ಮತ್ತ ನಾಲ್ಕು ಹೆಜ್ಜೆಯಾದರೂ ಹಾಕದಿದ್ದರೆ
ಏನಾದರೂ ಪೂರ್ತಿಯಾಗುವುದಾದರೂ ಹೇಗೆ?
ಕೊನೆಗೂ ನೀನು ನಾಟಕದ ಪಾತ್ರವರ್ಗದಲ್ಲಿಲ್ಲವೇ,
ಓ ಹೆಸರು ಹೇಳಬಾರದವಳೇ?
ಉಳಿದಿರುವ ಸಮಯ ಸ್ವಲ್ವ
ನಿನಗೆ ತಕ್ಕವನಾಗಿ ಉಳಿಯೆ;
ವಯಸ್ಸಾಗಿ, ಮುದುಕನಾಗಿ,
ಅಥವ ನನ್ನ ಮಕ್ಕಳು ನನ್ನನ್ನು ಮರವೆಗೆ ದಬ್ಬ…..
ಮುತ್ತು ಚೆಲ್ಲಾಪಿಲ್ಲಿ.
*****
ಮೂಲ: ರೇನರ್ ಮಾರಿಯಾ ರಿಲ್ಕ್ / Rainer Maria Rilke

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...