Home / ಕವನ / ಅನುವಾದ / ಹಾಗೆ ಆಗಬಹುದಿತ್ತು ಸಮುದ್ರವೇ

ಹಾಗೆ ಆಗಬಹುದಿತ್ತು ಸಮುದ್ರವೇ

ಕಡಲ ಉಪ್ಪು ನೀರಿನಲ್ಲುರುಳುರುಳಿ ಒರಟಾದ ಕಲ್ಲಿನಂತೆ,
ಅಪಳಿಸುವ ಅಲೆಗೆ ಎದೆಯೊಡ್ಡಿ, ಬಂದೇ ಬರುವ
ಚಳಿಗೆ ಮಳೆ ಗಾಳಿ ಬಿಸಿಲಿಗೆ ಸಾಕ್ಷಿಯಾಗಿ
ಕಾಲದ ಕಟ್ಟು ಮೀರಿದ ಬಂಡೆಗಲ್ಲಿನಂತೆ
ಸಹಜವಾಗಿ ಇದ್ದುಬಿಡಬಹುದಾಗಿತ್ತು. ಹಾಗೆ ಆಗಲಿಲ್ಲ.

ತನ್ನ ಕುರಿತು, ಪರರ ಕುರಿತು,
ಕ್ಷಣಕ್ಕೊಂದು ರೂಪತಾಳಿ ಜಾರಿ ಹೋಗುವ
ಬದುಕನ್ನು ಕುರಿತು ಚಿಂತೆಯನ್ನು ಹೊದ್ದುಕೊಂಡೆ.
ಬಡಿಯಲೋ ಕೊಲ್ಲಲೋ ಕೈಯೆತ್ತುವ ಮುನ್ನ
ತುಯ್ಯಲಾಡುವ ಮನದವನಾದೆ.

ಬೆಕ್ಕು ಸುಳಿದಂತೆ ಲೋಕದಲ್ಲಿ ಸುಳಿವ
ಕೆಡುಕನ್ನು ಕಣ್ಣಾರೆ ಕಾಣಲು ಬಯಸಿದೆ.
ಜಗದ ಯಂತ್ರದ ಚಲನೆ ತಟ್ಟನೆ
ನಿಲ್ಲಿಸುವ ಸನ್ನೆ ಗೋಲು ಎಲ್ಲೆಂದು ತಡುಕಿದೆ.

ಕ್ಷಣದರ್ಧದಲ್ಲಿ ಲೋಕದೆಲ್ಲ ಸಂಭವಗಳು ಛಿದ್ರವಾಗುವವು
ಎಂದರಿತು ನನ್ನದೇ ಹಾದಿ ಮಾಡಿಕೊಂಡು
ನಾನು ಸಾಗಿದ್ದೆ. ನನ್ನ ಮನಸ್ಸು
ತನ್ನ ಸೆಳೆವ ಮತ್ತೊಂದು ಹಾದಿಯಲ್ಲಿ ನಡೆದಿತ್ತು.

ನಿರ್ಧರಿಸುವ ಮನಸ್ಸು, ನಿರ್ವಚನಗೊಂಡ ಮನಸ್ಸು
ಎರಡನ್ನೂ ಕತ್ತರಿಸಿ ಬೇರೆ ಮಾಡುವ ಚೂರಿ
ಬೇಕಾಗಿತ್ತೋ ಏನೋ. ನಿನ್ನ ಸಿಡಿಲಕ್ಷರಗಳು
ಕಿಕ್ಕಿರಿದ ಗ್ರಂಥವಲ್ಲ, ಬೇರೆಯದೇ ಪುಸ್ತಕ
ಬೇಕಾಗಿತ್ತು ನನಗೆ. ಆದರೂ ಬೇಸರವಿಲ್ಲ.
ನಿನ್ನ ಹಾಡು ಅಂತರಾಳದ ಗಂಟುಗಳ ತೊಡಕು ಸಡಿಲಿಸುವುದು
ಈ ಕ್ಷಣದ ನಿನ್ನ ಆರ್‍ಭಟ ನಕ್ಷತ್ರಗಳ ಮುಟ್ಟುವುದು.
*****
ಮೂಲ: ಯೂಜೀನ್ ಮಾಂಟೇಲ್ / Eugenio Montale

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...