Home / ಕವನ / ಕವಿತೆ / ಸಂಗೀತ ಸಂಜೆ

ಸಂಗೀತ ಸಂಜೆ

 

ಸಂಜೆಗತ್ತಲಿನ ಸಂಗೀತವನ್ನು ಮೆಚ್ಚಿ ಬಂದು ಕುಳಿತಿದ್ದಾನೆ,
ಅವನು ಬೆಚ್ಚಗೆ ಅವಳನ್ನೊದ್ದುಕೊಂಡು.

ಗೂಡಿನ ಹೂವುಗಳು ಸ್ವೇಚ್ಛೆಯಾಗಿ ಮಿಡುಕಿದ ನಂತರ
ಹೊರಗಿನ ಗಾಳಿ ಅಲೆ‌ಅಲೆಯಾಗಿ ಅಪ್ಪಳಿಸಿದೆ.
ಕಾಡಿನ ಥಂಡಿಯ ವಾತಾವರಣದಲ್ಲಿ ಅವಳು ಕಲಿಸಿದ ಪ್ರೇಮಪಾಠ
ಅವನ ತೋಳ್ಬಂಧನದ ವಶವಾಗಿದೆ.
ಲಾಟೀನಿನ ಬೆಳಕು ಕೋಣೆಗೆ ಕವಿದ ಮಬ್ಬನ್ನು ಸೀಳಿಹಾಕುತ್ತಿದ್ದಂತೆ,
ತನ್ನ ಜಾನಪದ ವಾದ್ಯದ ಕೀಲಿಗಳನ್ನು ಸರಿಹೊಂದಿಸುವ ದುಶ್ಚಟದಲಿ
ಅವಳು ಬೀಳುತ್ತಾಳೆ.

ಹೊಲದಿನ್ನೆಗಳಿಗೆ ಗೇಯಲೋಗಿದ್ದವರೆಲ್ಲರೂ ತಮ್ಮತಮ್ಮ ಮನೆಗಳಿಗೆ
ಹಿಂದಿರುಗುತ್ತಿದ್ದಂತೆ-ಕೀಲಿ ತಿರುಗಿದ ಹೀನಸ್ವರ ಅವರೆಲ್ಲರನ್ನೂ
ತಡೆದು ನಿಲ್ಲಿಸುವುದು. ಅದು ಸತ್ತ ನಂತರ ಏರ್ಪಾಡಾಗುವ ಶ್ರದ್ಧಾಂಜಲಿಯ
ಸಂಗೀತ ಸ್ವರದಂತೆಯೂ, ಸಾಯುವ ಮೊದಲಿನ ನೆನಪುಗಳಂತೆಯೂ
ಕೇಳಿಸಿದೆ. ಘೋರಗಾಳಿ ಅವನು ಉರಿಸಿದ ಸಣ್ಣ ಪ್ರಮಣದ ಬೆಂಕಿಯನ್ನು,
ಈಗಾಗಲೇ ಉರಿಯಗೊಟ್ಟ ಅವಳ ಮನಸ್ಸಿನ ಜ್ವಾಲೆಗಳಲ್ಲಿ
ವಿಶ್ರಾಂತಿ ಬಯಸಹೋಗಿದೆ.

ಕೀಲಿ ಬಿಗಿಯಾಗಿ ಸುಶ್ರಾವ್ಯ ಸ್ವರ ಎಬ್ಬಿಸಿ,
ಅಲ್ಲಿನ ಎಲ್ಲವನ್ನೂ ದಾಟಿಕೊಂಡು ಹೂಗಳಿರುವ ಕಪ್ಪುಗೋಡೆಗಳಲಿ
ಅಪರಾಧವನ್ನು ಬಿಟ್ಟು, ನಿಷ್ಟಾವಂತ ಪ್ರೇಮವನ್ನು ಕದ್ದೊಯ್ದಿದೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...