Home / ಕವನ / ಅನುವಾದ / ಕೆಡುಕು ಮತ್ತೆ ಮಳೆಯಂತೆ ಸುರಿಯುವಾಗ

ಕೆಡುಕು ಮತ್ತೆ ಮಳೆಯಂತೆ ಸುರಿಯುವಾಗ

ಬಹಳ ಮುಖ್ಯವಾದ ಪತ್ರ ಹಿಡಿದು ಆಫೀಸಿಗೆ ಒಬ್ಬ ಓಡಿ ಬರುತಾನೆ. ಕಛೇರಿ ಅವಧಿ
ಮುಗಿದು ಬಾಗಿಲು ಹಾಕಿರುತ್ತದೆ, ಹಾಗೆ,
ಊರಿಗೆ ಪ್ರವಾಹದ ನೀರು ನುಗ್ಗುತ್ತಿದೆ ಎಂದೊಬ್ಬ ಸುದ್ಧಿತರುತಾನೆ. ಅವನ ಭಾಷೆ
ಅವರಿಗೆ ತಿಳಿಯುವುದಿಲ್ಲ. ಹಾಗೆ
ನಾಲ್ಕು ಬಾರಿ ಭಿಕ್ಷೆ ಕೊಟ್ಟ ಮನೆಯ ಮುಂದೆ ಐದನೆಯ ಬಾರಿ ಭಿಕ್ಷುಕ ನಿಂತು ಕೂಗುತ್ತಾನೆ
ಈಗ ಅವನಿಗೆ ನಿಜವಾಗಿ ಹೊಟ್ಟೆಹಸಿದಿದೆ. ಹಾಗೆ
ಡಾಕ್ಟರಿಗೆ ಕಾಯುತ್ತಾ ರೋಗಿಯೊಬ್ಬ ಬಿದ್ದಿದ್ದಾನೆ. ಗಾಯದಿಂದ ರಕ್ತ ಹರಿಯುತ್ತಲೇ ಇದೆ.
ಹಾಗೆ
ನಾವೀಗ ಮುಂದೆ ಬಂದು ಕೆಡುಕು ಸಂಭವಿಸಿದ್ದನ್ನು ಹೇಳುತ್ತಿದ್ದೇವೆ.
ಕಟುಕರಂತೆ ನಮ್ಮ ಗೆಳೆಯರನ್ನು ಕೊಚ್ಚಿ ಹಾಕಿದರೆಂಬ ಸುದ್ದಿ ಮೊದಲಿಗೆ ತಿಳಿದಾಗ
ಭಯದ ಚೇತ್ಕಾರವಿತ್ತು. ನಂತರ ನೂರು ಜನರನ್ನು ಕೊಚ್ಚಿ ಹಾಕಿದರು. ಸಾವಿರ ಜನರನ್ನು
ಕೊಚ್ಚಿದಾಗ ಕಟುಕತನಕ್ಕೆ ಕೊನೆಯಿರಲಿಲ್ಲ. ಮೌನದ ಕಂಬಳಿ ಎಲ್ಲರನ್ನು ಕವಿದಿತ್ತು.
ಕೆಡುಕು ಮಳೆಯಂತೆ ಧೋ ಎಂದು ಸುರಿಯುವಾಗ ಯಾರೂ ಗೊಣಗುವುದಿಲ್ಲ.
ತಪ್ಪಿನ ಮೇಲೆ ತಪ್ಪು, ಕೆಡುಕಿನ ಮೇಲೆ ಕೆಡುಕು ರಾಶಿ ಬೀಳುತ್ತ ಹೋದಾಗ ಅವು
ಯಾವುವೂ ಕಣ್ಣಿಗೇ ಕಾಣದಂತೆ ಅದೃಶ್ಯವಾಗುತ್ತವೆ. ನೋವು ಸಹಿಸಲಾರದಷ್ಟಾದಾಗ
ಅಳು, ಚೇರಾಟಗಳು ಕೂಡ ಕೇಳುವುದಿಲ್ಲ. ಅಳು ಕೂಡ ಬೇಸಗೆ ಮಳೆಯಂತೆ
ಸುರಿಯುತ್ತದೆ.
*****
ಮೂಲ: ಬೆರ್ಟಾಲ್ಟ್ ಬ್ರೆಖ್ಟ್ / Bertolt Brecht

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...