Home / ಕವನ / ಅನುವಾದ / ಕೆಡುಕು ಮತ್ತೆ ಮಳೆಯಂತೆ ಸುರಿಯುವಾಗ

ಕೆಡುಕು ಮತ್ತೆ ಮಳೆಯಂತೆ ಸುರಿಯುವಾಗ

ಬಹಳ ಮುಖ್ಯವಾದ ಪತ್ರ ಹಿಡಿದು ಆಫೀಸಿಗೆ ಒಬ್ಬ ಓಡಿ ಬರುತಾನೆ. ಕಛೇರಿ ಅವಧಿ
ಮುಗಿದು ಬಾಗಿಲು ಹಾಕಿರುತ್ತದೆ, ಹಾಗೆ,
ಊರಿಗೆ ಪ್ರವಾಹದ ನೀರು ನುಗ್ಗುತ್ತಿದೆ ಎಂದೊಬ್ಬ ಸುದ್ಧಿತರುತಾನೆ. ಅವನ ಭಾಷೆ
ಅವರಿಗೆ ತಿಳಿಯುವುದಿಲ್ಲ. ಹಾಗೆ
ನಾಲ್ಕು ಬಾರಿ ಭಿಕ್ಷೆ ಕೊಟ್ಟ ಮನೆಯ ಮುಂದೆ ಐದನೆಯ ಬಾರಿ ಭಿಕ್ಷುಕ ನಿಂತು ಕೂಗುತ್ತಾನೆ
ಈಗ ಅವನಿಗೆ ನಿಜವಾಗಿ ಹೊಟ್ಟೆಹಸಿದಿದೆ. ಹಾಗೆ
ಡಾಕ್ಟರಿಗೆ ಕಾಯುತ್ತಾ ರೋಗಿಯೊಬ್ಬ ಬಿದ್ದಿದ್ದಾನೆ. ಗಾಯದಿಂದ ರಕ್ತ ಹರಿಯುತ್ತಲೇ ಇದೆ.
ಹಾಗೆ
ನಾವೀಗ ಮುಂದೆ ಬಂದು ಕೆಡುಕು ಸಂಭವಿಸಿದ್ದನ್ನು ಹೇಳುತ್ತಿದ್ದೇವೆ.
ಕಟುಕರಂತೆ ನಮ್ಮ ಗೆಳೆಯರನ್ನು ಕೊಚ್ಚಿ ಹಾಕಿದರೆಂಬ ಸುದ್ದಿ ಮೊದಲಿಗೆ ತಿಳಿದಾಗ
ಭಯದ ಚೇತ್ಕಾರವಿತ್ತು. ನಂತರ ನೂರು ಜನರನ್ನು ಕೊಚ್ಚಿ ಹಾಕಿದರು. ಸಾವಿರ ಜನರನ್ನು
ಕೊಚ್ಚಿದಾಗ ಕಟುಕತನಕ್ಕೆ ಕೊನೆಯಿರಲಿಲ್ಲ. ಮೌನದ ಕಂಬಳಿ ಎಲ್ಲರನ್ನು ಕವಿದಿತ್ತು.
ಕೆಡುಕು ಮಳೆಯಂತೆ ಧೋ ಎಂದು ಸುರಿಯುವಾಗ ಯಾರೂ ಗೊಣಗುವುದಿಲ್ಲ.
ತಪ್ಪಿನ ಮೇಲೆ ತಪ್ಪು, ಕೆಡುಕಿನ ಮೇಲೆ ಕೆಡುಕು ರಾಶಿ ಬೀಳುತ್ತ ಹೋದಾಗ ಅವು
ಯಾವುವೂ ಕಣ್ಣಿಗೇ ಕಾಣದಂತೆ ಅದೃಶ್ಯವಾಗುತ್ತವೆ. ನೋವು ಸಹಿಸಲಾರದಷ್ಟಾದಾಗ
ಅಳು, ಚೇರಾಟಗಳು ಕೂಡ ಕೇಳುವುದಿಲ್ಲ. ಅಳು ಕೂಡ ಬೇಸಗೆ ಮಳೆಯಂತೆ
ಸುರಿಯುತ್ತದೆ.
*****
ಮೂಲ: ಬೆರ್ಟಾಲ್ಟ್ ಬ್ರೆಖ್ಟ್ / Bertolt Brecht

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...