Home / ಲೇಖನ / ಇತರೆ / ಸುಧಾರಣೆ ಎಲ್ಲಿಂದ?

ಸುಧಾರಣೆ ಎಲ್ಲಿಂದ?

ಪ್ರಿಯ ಸಖಿ,

ಸಮಾಜವಾದಿಗಳನ್ನು ಸದಾ ಕಾಡುತ್ತಾ ಬಂದಿರುವ ವಿಷಯವೆಂದರೆ ಸಮಾಜ ಸುಧಾರಣೆಯನ್ನು ವ್ಯಕ್ತಿಯಿಂದ ಪ್ರಾರಂಭಿಸಬೇಕೋ, ಸಮುದಾಯದಿಂದ ಪ್ರಾರಂಭಿಸಬೇಕೋ ಎಂಬುದು. ಸಹಜವಾಗೇ ಇದಕ್ಕೆ ಪೂರ್ವಪರವಾದಗಳೂ ಇವೆ. ಸಮುದಾಯದಿಂದ ಸುಧಾರಣೆ ಆಗಬೇಕೆನ್ನುವವರು, ಸಮಾಜದಲ್ಲಿ ಅನೇಕ ಅನಿಷ್ಟಗಳಿವೆ. ಅವುಗಳನ್ನೆಲ್ಲಾ ಸಂಘಟನೆಯ ಮೂಲಕ, ಸಮುದಾಯ ಜಾಗೃತಿಯ ಮೂಲಕ, ಸಿದ್ಧಾಂತಗಳನ್ನು ಅಳವಡಿಸುವ ಮೂಲಕ ಸರಿಪಡಿಸಬೇಕೆನ್ನುತ್ತಾರೆ. ಸಾಮಾಜಿಕ ಕ್ರಾಂತಿಯಿಂದ ಮಾತ್ರ ಸಮಾಜ ಸುಧಾರಣೆಯನ್ನುವುದು ಇವರ ವಾದ. ಆದರೆ ವ್ಯಕ್ತಿ ಸುಧಾರಣೆಯಿಂದ ಮಾತ್ರ ಸಮಾಜ ಸುಧಾರಣೆಯೆಂದು ನಂಬಿರುವವರು ಸಮಾಜದ ಅನಿಷ್ಟಕ್ಕೆ ಇತರರು ಹೇಗೆ ಜವಾಬ್ದಾರರೋ ನಾನೂ ಅಷ್ಟೇ ಜವಾಬ್ದಾರ ಹೀಗಾಗಿ ಮೊದಲು ನಾನು ಸರಿ ಹೋಗಬೇಕು. ನಂತರ ಸಮಾಜವನ್ನು ತಿದ್ದುವ ಪ್ರಯತ್ನ ಎನ್ನುತ್ತಾರೆ.

ಎರಡೂ ವಾದಗಳೂ ಅವರವರ ಮೂಗಿನ ನೇರಕ್ಕೆ ಸರಿಯೆನಿಸಿದರೂ ಎರಡೂ ವಾದಗಳಿಗೂ ತನ್ನದೇ ಆದ ಮಿತಿಗಳೂ ಇವೆ. ಸಾಮಾಜಿಕ ಕ್ರಾಂತಿಯ ಹುಟ್ಟು ಬೀದಿಗಳಲ್ಲಿ ಆಗುವುದಿಲ್ಲ. ಮನೆಗಳಲ್ಲಿ ಆಗಬೇಕು. ಮನಸ್ಸಿನಲ್ಲಿ ಆಗಬೇಕು ಎಂಬುದು ಒಂದು ವಾದವಾದರೆ, ಸಾಮಾಜಿಕ ಕ್ರಾಂತಿಯಿಂದ ಇಡೀ ಸಮುದಾಯವೇ ಒಳಿತಿನತ್ತ, ಸತ್ಯದ ಹಾದಿಯಲ್ಲಿ ನಡೆಯುವಂತಾದಾಗ ಅಲ್ಲಿ ಸಮಷ್ಠಿ ಪ್ರಜ್ಞೆಯೇ ಮುಖ್ಯವಾಗುತ್ತದೆಯೇ ಹೊರತು ವ್ಯಕ್ತಿಯಲ್ಲ ಎನ್ನುತ್ತದೆ ಇನ್ನೊಂದು ವಾದ. ಸಖಿ, ಆದರೆ ಹಲವು ವ್ಯಕ್ತಿಗಳ ಒಂದು ಸಮುದಾಯ ಎಂಬುದನ್ನು ನಾವು ಮರೆಯುವಂತಿಲ್ಲ. ಒಂದು ಸಂಘಟನೆ, ಸಮುದಾಯ ಇಡಿಯಾಗಿ ಹೇಗೆ ನಡೆದುಕೊಂಡರೂ ಅದರಲ್ಲಿನ ವ್ಯಕ್ತಿಗಳು ಭಿನ್ನರೇ. ಅನನ್ಯರೇ. ಎಲ್ಲರಿಗೂ ಅವರದೇ ಆದ ವ್ಯಕ್ತಿತ್ವಗಳಿರುತ್ತವೆ ನಂಬಿಕೆಗಳಿರುತ್ತವೆ. ದೃಷ್ಟಿಕೋನಗಳಿರುತ್ತವೆ. ಕೆಟ್ಟ, ಒಳ್ಳೆಯ ಸ್ವಭಾವಗಳೂ ಇರುತ್ತವೆ.

ತಾನು ಸಂಫಟನೆಯ ಮೂಲಕ ಹೇಳುವ ಸಿದ್ಧಾಂತಗಳಿಗೆ, ತತ್ವಗಳಿಗೆ ಅವನು ವ್ಯಕ್ತಿಯಾಗಿ ತನ್ನ ವೈಯಕ್ತಿಕ ಬದುಕಿನಲ್ಲಿ ಬದ್ಧನಾಗಿದ್ದಾಗ ಮಾತ್ರ ಅವನಿಗೆ ಅದನ್ನು ಇತರರಿಗೆ ಬೋಧಿಸುವ, ಉಪದೇಶಿಸುವ ನೈತಿಕ ಹಕ್ಕಿರುತ್ತದೆ.

ಅದಿಲ್ಲದೆ ನಾನು ನನ್ನ ಇಷ್ಟಬಂದಂತೆ ಬದುಕುತ್ತೇನೆ. ನೀವು ಮಾತ್ರ ಹೀಗೇ ಬದುಕಿ ಎಂದು ಹೇಳಲು ಅವನಿಗೆ ಯಾವ ಅಧಿಕಾರವೂ ಇರುವುದಿಲ್ಲ. ತನ್ನ ಬದುಕಿನಲ್ಲಿ ತತ್ವಗಳಿಗೆ ಬದ್ಧನಾಗಿಲ್ಲದ ವ್ಯಕ್ತಿ ಉಪದೇಶಿಸಲು ನಿಂತಾಗ ಸಮಾಜ ಅವನನ್ನು ನೀನೆಷ್ಟು ಸರಿ? ಎಂದು ಪ್ರಶ್ನಿಸುವುದಿಲ್ಲವೇ?

ನುಡಿದಂತೆ ನಡೆದೂ ತೋರಿದ, ತನ್ನ ಬದುಕಿನಲ್ಲಿ ಅಳವಡಿಸಿಕೊಂಡ ಸತ್ಯ, ತತ್ವಗಳನ್ನಷ್ಟೇ ಇತರರಿಗೂ ಬೋಧಿಸಿದ, ಬೇಕಿದ್ದರೆ ಪ್ರಾಣ ಬಿಟ್ಟೇನು, ತಾನು ಬದುಕಿನಲ್ಲಿ ನಂಬಿರುವ, ಬದ್ಧನಾಗಿರುವ ತತ್ವಗಳನ್ನಲ್ಲ ಎಂದು ನಂಬಿದ್ದ ಮಹಾತ್ಮಾ ಗಾಂಧಿ ಯಂತಹವರು ಅದಕ್ಕೇ ನಮಗೆ ಇಂದಿಗೂ ಪ್ರಿಯರಾಗುತ್ತಾರೆ ಹಾಗೂ ಪ್ರಸ್ತುತರಾಗುತ್ತಾರೆ.

ಬೀದಿಯಲ್ಲಿ ನಿಂತು ಮೂಢನಂಬಿಕೆಗಳ ವಿರುದ್ಧ ಭಾಷಣ ಬಿಗಿದು, ಘೋಷಣೆ ಕೂಗಿದವನು, ತಾನೇ ಮೂಢನಂಬಿಕೆಗಳ ದಾಸನಾಗಿದ್ದರೆ, ತನ್ನ ಮನೆಯಲ್ಲಿ ತಾಂಡವವಾಡುತ್ತಿರುವ ಮೂಢನಂಬಿಕೆಯ ಒಂದು ಕಡ್ಡಿಯನ್ನೂ ಅಲುಗಿಸಲು ಸಾಧ್ಯವಾಗದಿದ್ದರೆ ಇಂತಹವನ ಮಾತುಗಳನ್ನು ಮಾತ್ರ ಕೇಳಿ ಯಾವ ಕ್ರಾಂತಿಯಾಗುತ್ತದೆ? ಸಖಿ ಸುಧಾರಣೆ ಎಲ್ಲಿಂದ? ಎಂಬುದನ್ನು ಈಗ ನೀನೇ ನಿರ್ಧರಿಸು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...