Home / ಕವನ / ಕವಿತೆ / ಸೀನಿಯರ್ ಕ್ರಿಕೆಟಿಗನ ಸಂಜೆ

ಸೀನಿಯರ್ ಕ್ರಿಕೆಟಿಗನ ಸಂಜೆ

ಕಿವಿ ಬಿರಿವ ಬೊಬ್ಬೆ, ಭೋರಿಡುವ ಜನಸಾಗರ.
ಓವರಿಗೆ ಎರಡೆರಡು ಫೋರುಗಳ ಗುಡುಗು
ನಡುವೆ ಸಿಕ್ಸರ್ ಸಿಡಿಲು,
ಸೃಷ್ಟಿಯಾಗುತ್ತಿದೆ ಮಿಂಚಿನೋಟದ ಕವಿತೆ
ಮೈದಾನದಲ್ಲೆ ಕಣ್ಣಿದಿರು!
ಕಣ್ಣು ಹರಿದಲ್ಲೆಲ್ಲ ಬಾವುಟದ ಆವುಟ
ಕುಣಿದು ಧೀಂಕಿಡುವ ಸಹಸ್ರಾರು ಭಕ್ತರ
ಆನಂದ ನೃತ್ಯ!
ಚಿತ್ರ ಕ್ಲಿಕ್ಕಿಸುತ್ತಿರುವ ಥರಾವರಿ ಕ್ಯಾಮೆರಾ,
ಲಾಠಿ ಬೀಸುವ ಖಾಕಿ ಟೊಣಪರನ್ನೂ ತಳ್ಳಿ
ಫೀಲ್ಡಿನೊಳಕ್ಕೆ ನುಗ್ಗಿ ಮುಟ್ಟಿ ಓಡುವ ಪಡ್ಡೆ ಹುಡುಗು ಹೋರಿಗಳು,
ಮೆಚ್ಚಿ ಮನಸ್ಸಿನಲ್ಲೆ ಬಾಚಿ ಮುತ್ತಿಡುವ
ಕಾಲೇಜು ಬೆಡಗಿಯರು;
ಟಿ.ವಿ.ಗೆ ಅಂಟಿಕೂತ ಲಕ್ಷಲಕ್ಷಜನಕ್ಕೆ
ಆನಂದೊದ್ರೇಕ;
ಕಣ್ಣಂಚಿನಲ್ಲಿ ಕೊಂಚ ತುಳುಕು, ಗದ್ಗದ ಕಂಠ.
ಮಾರನೆ ಬೆಳಿಗ್ಗೆ
ವೃತ್ತಪತ್ರಿಕೆಗೆ ಪರದಾಟ, ಸುದ್ದಿಗೆ ಸುಗ್ಗಿ
ಬ್ಯಾಟು ಬೀಸುತ್ತಿರುವ ಅರ್ಜುನ ಪರಾಕ್ರಮದ
ದಿಟ್ಟ ಭಂಗಿಯ ಚೀರುಚಿತ್ರ,
ಆಳುವ ಪ್ರಧಾನಿಗೇ ಅಬ್ಬ ಎನ್ನಿಸುವ ಜಯಕಾರ ಸತ್ಕಾರ;
ರಾಜಕಾರಣಿಗೆ ಸಲ್ಲುವ ನಕಲಿ ಮಾಲಲ್ಲ,
ನೂರಕ್ಕೆ ನೂರು ಎಲ್ಲ ಹೃತ್ಪುರ್ವಕ
ತಟ್ಟತಳ ತನಕ.

ಆ ಎಲ್ಲ ವೈಭವ ಕಳೆದ ಕಾರ್ತಿಕದಲ್ಲಿ.
ಹಿಂದಿದ್ದ ಹದ್ದುಗಣ್ಣಿನ ಹರಿತ ಈಗೆಲ್ಲಿ ?
ಸಿಡಿಗುಂಡಿನಂತೆ ಭರ್ರೆಂದು ನುಗ್ಗುವ ಚೆಂಡು
ಬಳಿ ಬರುವ ತನಕ ಸುಳಿವೇ ಸಿಗುವುದಿಲ್ಲ;
ಬ್ಯಾಟಿನಂಚಿಗೆ ಬಡಿದು ಸ್ಲಿಪ್ಪಲ್ಲೆ ಕ್ಯಾಚು,
ಮುನ್ನುಗ್ಗಿ ಬೀಸಿದರೆ ಕಣ್ಣು ತಪ್ಪಿಸಿ ಚೆಂಡು ಬೆನ್ನಲ್ಲೆ ಸ್ಟಂಪು,
ಕೆಲವೇ ನಿಮಿಷ, ಮತ್ತೆ ಪೆವಿಲಿಯನ್ ಕಡೆ ಪಯಣ!
ತಗ್ಗಿಸಿದ ತಲೆ, ನೀರು ತುಂಬುತ್ತಿರುವ ಕಣ್ಣು,
ಕೆನ್ನೆಗೆ ಛಟೀರೆಂದು ಬಾರಿಸಿದಳೆಂಬಂತೆ
ಇರಿದು ನೋಡುವ ಹೆಣ್ಣು,
ಸುತ್ತ ಗ್ಯಾಲರಿಯಿಂದ ಅಟ್ಟಿ ಹೀಯಾಳಿಸುವ
ಗೇಲಿ, ವ್ಯಂಗ್ಯದ ಕೂಗು,
ಮೂದಲಿಕೆ ಚೂರಿನುಡಿ, ಎಲ್ಲವೂ ಕೇಳಿಸುವಂತೆ,
“ದಿಟ್ಟ ಹೋರಾಟಗಳ ಸಾರಿ ಸಾವಿರ ಬಾರಿ
ಗೆದ್ದು, ಯಾವಾಗಲೋ ಒಮ್ಮೆ ಬಿದ್ದರೆ ಮಲ್ಲ
ಗೌರವದ ಶಿಖರದಿಂದುರುಳಿ ಗೋರಿಗೆ ದಾರಿ
ಹೊಳೆಯಲ್ಲಿ ಹುಣಿಸೆ ತೊಳೆದಂತೆ ಹಿಂದಿನದೆಲ್ಲ”

ಆದರೆ ಇದಂತು ನಿಜ
ಹಿಂದೆ ಕೈ ಹಿಡಿದಿದ್ದ ಮ್ಯಾಜಿಕ್ ಕೈಕೊಟ್ಟಿದೆ
ಕಿತ್ತುಹಾಕುವ ಮೊದಲು ಭರತವಾಕ್ಯದ ಮಾತು
ಆಡಿ ಬಿಡು ನೀನೇ;
ಕ್ಯೂನಲ್ಲಿ ನಿಂತು ನಿನ್ನನ್ನೇ ನೋಡುತ್ತ
ಕಾಯುತ್ತಿರುವ ಹುಡುಗ
ಬರಲಿ ಟೀಮಿನ ಒಳಗೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...