Home / ಕವನ / ಕವಿತೆ / ಡಾನ್‌ನ ಕಗ್ಗೊಲೆ

ಡಾನ್‌ನ ಕಗ್ಗೊಲೆ

 

ಜನವರಿ ಅಥವಾ ಮೇ ತಿಂಗಳಿನ ಮಧ್ಯಭಾಗದಲ್ಲಿ
ಆತ ನಮ್ಮ ಸಾರಾಯಿ ಗಡಂಗಿಗೆ ವೆಂಡರ್ ಆಗಿ ಬಂದ.
ಅಷ್ಟೊತ್ತಿಗಾಗಲೇ ಛೋಟ ಡಾನ್‌ಗಳೆನ್ನಿಸಿಕೊಂಡವರ
ತಲೆ ತೆಗೆದು ಬಂದಿದ್ದ.
ಅವನ ಮುಖದ ಮೇಲೆ ನೊಣಗಳು ಹಾಯುತ್ತಿರಲಿಲ್ಲ;
ಆದರೆ ಹೂ‌ಎಲೆ ತೊಟ್ಟುಗಳು ತೇಲಿತೇಲಿ ಬೀಳುತ್ತಿದ್ದವು.

ಅವನು ನಾಪತ್ತೆಯಾದ ಆ ದಿನಗಳ ಬಗ್ಗೆ ಖಚಿತವಾಗಿ ಹೇಳಲಾಗದು.

ಅವನು ತಿರುಗಿ ಬಂದಾಗ ದಿಕ್ಕಿಲ್ಲದ, ನಿರ್ಗತಿಕ ಮನುಷ್ಯನಂತೆ
ದಟ್ಟ ದಾಡಿ ಬೆಳೆಸಿಕೊಂಡಿದ್ದ, ಕುಂಟುತ್ತಿದ್ದ.
ದೈಹಿಕವಾಗಿ, ಮಾನಸಿಕವಾಗಿ ವಿರೋಚಿತ
ಸೋಲು ಕಂಡಿದ್ದನೆಂದೇ ಹೇಳಬಹುದು.

ಸಾರಾಯಿ ಗಡಂಗು ತೆರೆಯುತ್ತೇನೆಂದೋಗಿ
ಬಾರ್ ಮಾಲೀಕನಿಂದ ಭೀಕರ ಹಲ್ಲೆಗೊಳಗಾದ,
ಸತ್ತು ಹೋಗಿದ್ದನಾದರೂ ಬದುಕುಳಿದಿದ್ದ.

ಈ ಸಲ ಕಾಣೆಯಾದವನು ಬಹಳ ಬೇಗ ತನ್ನ ಕಡೆಯ ದಿನವನ್ನು
ಆತುರಾತುರವಾಗಿ ಪ್ರಕಟಿಸಿಬಿಟ್ಟಿದ್ದ.
ಕೆಲಸದ ಆಮಿಷ ಒಡ್ಡಿ, ಪರಸ್ಥಳವೊಂದಕ್ಕೆ ಕರೆದೊಯ್ದ ಹಳೆದ್ವೇಷಿಗಳು
ಅವನ ಪಾದಗಳನ್ನು ಕತ್ತರಿಸಿ, ನೇಣು ಹಾಕಿದ್ದರು.

ಹೀಗೆ ಭೀಕರ ಕಗ್ಗೊಲೆಯಲ್ಲಿ ಒಂದು ದಿನ ಅಂತ್ಯಗೊಂಡಿದ್ದ;
ಅವನು ಇದ್ದನೆಂಬುದಕ್ಕೆ ನನ್ನ ಬಳಿ ಯಾವುದೇ ಪುರಾವೆ ಇಲ್ಲ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...