Home / ಕವನ / ಕವಿತೆ / ಕಳೆದವು ಹತ್ತು ದಿನ

ಕಳೆದವು ಹತ್ತು ದಿನ

ಕಳೆದವು ಹತ್ತು ದಿನ
ನಿಮ್ಮ ಕಾಯುತಲಿ ಎನ್ನರಸ
ಬಾಗಿಲ ಬಳಿಯಲಿ ನಿಂತೇ
ನಿಮ್ಮಯ ಬರವನು ನೋಡುತ್ತ ||

ಬರುವೆನೆಂದು ಹೇಳಿ ಹೋದ ನಿಮ್ಮನು
ಮರಳಿ ಬರುವಿರೆಂದು ಕಾದೆನು
ಬರುವ ಅವರಿವರ ಕಣ್ಣಾಲಿಸಿ ನೋಡಿದೆ
ಪರಿತಪಿಸಿದೆ ||

ಮೊದಲ ರಾತ್ರಿಯ ನಗುಮೊಗದ
ಚಂದದಿ ಬರಸೆಳೆದು ಮುತ್ತನಿತ್ತಿರಿ
ಆ ದಿನ! ಮೃದುವಚನವಿತ್ತು ಹೋದಿರಿ ಎಲ್ಲಿಗೆ ||

ಇರುವಿರಿ ಹೇಗೆ ಇರುವಿರಿ ಪ್ರೀತಿಯಲಿ
ಎನ್ನರಸಿ ನಿಮ್ಮದೇ ಚಿಂತೆಯು ದಿನದಿನವು
ಕುಳಿತರೂ ನಿಂತರು ಮಲಗಿದರು ಕಾಡುತಿದೆ
ನಿಮ್ಮದೇ ನೆನಪು ||

ಬಣ್ಣದ ಓಕುಳಿ ಬರಿದೆ ಚೆಲ್ಲಿದಿರಿ
ಬರಿದಾಗಿಸದಿರಿ ನನ್ನಾಸೆ ಕರಿಮೋಡಗಳಲಿ
ಮಿಂಚು ಹೊಳೆದಂತೆ ಕಾಡುತಿಹುದು ನಿಮ್ಮ ನೆನಪು ||

ನಾನು ನಿಮ್ಮನ್ನು ಮರೆತೆ ಎನ್ನದಿರಿ
ಮರೆಯಲು ಬಿಡುವೆನೇ ನಾ ನಿಮ್ಮ |
ಸುಖಃ ನಿಮ್ಮ ಒಲುಮೆಯಲಿ ನಾನಿರಲು ||

ಬಯಲು ಹಸಿರಿನಲಿ ಬೀಗಲೇ ಇಲ್ಲ
ತನಿ ಬೆಳದಿಂಗಳು ಬರಲಿಲ್ಲ
ಉಕ್ಕಲಿಲ್ಲ ಕಡಲ ಅಲೆಗಳು
ಹಕ್ಕಿಗಳ ಚಿಲಿಪಿಲಿ ದನಿಯಿಲ್ಲಾ ||

ನಂಬಿಹೆನು ನಿಮ್ಮ ಬರುವಿರಿ ಎಂದು
ಸುಖಃ ಕದವ ತೆರೆದು ಬೆಳಕಾಗಿ ಬರಲು
ನೀವು! ಕಾದಿರುವೆನು ಹಗಲು ಇರುಳು ||
*****

Tagged:

One Comment

  • Instead of waiting to come,keeping in heart is better because when you kept in heart there is no chance of escaping,and waiting for escaped😛..nimm ella kavite galanna odutta iruve,nimm anubavagalu chanda,heege bareyuttiri preeti batti hoda manasugalali preeti tumbuttiri

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...