Home / ಕವನ / ಕವಿತೆ / ಕಳೆದವು ಹತ್ತು ದಿನ

ಕಳೆದವು ಹತ್ತು ದಿನ

ಕಳೆದವು ಹತ್ತು ದಿನ
ನಿಮ್ಮ ಕಾಯುತಲಿ ಎನ್ನರಸ
ಬಾಗಿಲ ಬಳಿಯಲಿ ನಿಂತೇ
ನಿಮ್ಮಯ ಬರವನು ನೋಡುತ್ತ ||

ಬರುವೆನೆಂದು ಹೇಳಿ ಹೋದ ನಿಮ್ಮನು
ಮರಳಿ ಬರುವಿರೆಂದು ಕಾದೆನು
ಬರುವ ಅವರಿವರ ಕಣ್ಣಾಲಿಸಿ ನೋಡಿದೆ
ಪರಿತಪಿಸಿದೆ ||

ಮೊದಲ ರಾತ್ರಿಯ ನಗುಮೊಗದ
ಚಂದದಿ ಬರಸೆಳೆದು ಮುತ್ತನಿತ್ತಿರಿ
ಆ ದಿನ! ಮೃದುವಚನವಿತ್ತು ಹೋದಿರಿ ಎಲ್ಲಿಗೆ ||

ಇರುವಿರಿ ಹೇಗೆ ಇರುವಿರಿ ಪ್ರೀತಿಯಲಿ
ಎನ್ನರಸಿ ನಿಮ್ಮದೇ ಚಿಂತೆಯು ದಿನದಿನವು
ಕುಳಿತರೂ ನಿಂತರು ಮಲಗಿದರು ಕಾಡುತಿದೆ
ನಿಮ್ಮದೇ ನೆನಪು ||

ಬಣ್ಣದ ಓಕುಳಿ ಬರಿದೆ ಚೆಲ್ಲಿದಿರಿ
ಬರಿದಾಗಿಸದಿರಿ ನನ್ನಾಸೆ ಕರಿಮೋಡಗಳಲಿ
ಮಿಂಚು ಹೊಳೆದಂತೆ ಕಾಡುತಿಹುದು ನಿಮ್ಮ ನೆನಪು ||

ನಾನು ನಿಮ್ಮನ್ನು ಮರೆತೆ ಎನ್ನದಿರಿ
ಮರೆಯಲು ಬಿಡುವೆನೇ ನಾ ನಿಮ್ಮ |
ಸುಖಃ ನಿಮ್ಮ ಒಲುಮೆಯಲಿ ನಾನಿರಲು ||

ಬಯಲು ಹಸಿರಿನಲಿ ಬೀಗಲೇ ಇಲ್ಲ
ತನಿ ಬೆಳದಿಂಗಳು ಬರಲಿಲ್ಲ
ಉಕ್ಕಲಿಲ್ಲ ಕಡಲ ಅಲೆಗಳು
ಹಕ್ಕಿಗಳ ಚಿಲಿಪಿಲಿ ದನಿಯಿಲ್ಲಾ ||

ನಂಬಿಹೆನು ನಿಮ್ಮ ಬರುವಿರಿ ಎಂದು
ಸುಖಃ ಕದವ ತೆರೆದು ಬೆಳಕಾಗಿ ಬರಲು
ನೀವು! ಕಾದಿರುವೆನು ಹಗಲು ಇರುಳು ||
*****

Tagged:

One Comment

  • Instead of waiting to come,keeping in heart is better because when you kept in heart there is no chance of escaping,and waiting for escaped😛..nimm ella kavite galanna odutta iruve,nimm anubavagalu chanda,heege bareyuttiri preeti batti hoda manasugalali preeti tumbuttiri

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...