Home / ಕವನ / ಕವಿತೆ / ಕಳೆದವು ಹತ್ತು ದಿನ

ಕಳೆದವು ಹತ್ತು ದಿನ

ಕಳೆದವು ಹತ್ತು ದಿನ
ನಿಮ್ಮ ಕಾಯುತಲಿ ಎನ್ನರಸ
ಬಾಗಿಲ ಬಳಿಯಲಿ ನಿಂತೇ
ನಿಮ್ಮಯ ಬರವನು ನೋಡುತ್ತ ||

ಬರುವೆನೆಂದು ಹೇಳಿ ಹೋದ ನಿಮ್ಮನು
ಮರಳಿ ಬರುವಿರೆಂದು ಕಾದೆನು
ಬರುವ ಅವರಿವರ ಕಣ್ಣಾಲಿಸಿ ನೋಡಿದೆ
ಪರಿತಪಿಸಿದೆ ||

ಮೊದಲ ರಾತ್ರಿಯ ನಗುಮೊಗದ
ಚಂದದಿ ಬರಸೆಳೆದು ಮುತ್ತನಿತ್ತಿರಿ
ಆ ದಿನ! ಮೃದುವಚನವಿತ್ತು ಹೋದಿರಿ ಎಲ್ಲಿಗೆ ||

ಇರುವಿರಿ ಹೇಗೆ ಇರುವಿರಿ ಪ್ರೀತಿಯಲಿ
ಎನ್ನರಸಿ ನಿಮ್ಮದೇ ಚಿಂತೆಯು ದಿನದಿನವು
ಕುಳಿತರೂ ನಿಂತರು ಮಲಗಿದರು ಕಾಡುತಿದೆ
ನಿಮ್ಮದೇ ನೆನಪು ||

ಬಣ್ಣದ ಓಕುಳಿ ಬರಿದೆ ಚೆಲ್ಲಿದಿರಿ
ಬರಿದಾಗಿಸದಿರಿ ನನ್ನಾಸೆ ಕರಿಮೋಡಗಳಲಿ
ಮಿಂಚು ಹೊಳೆದಂತೆ ಕಾಡುತಿಹುದು ನಿಮ್ಮ ನೆನಪು ||

ನಾನು ನಿಮ್ಮನ್ನು ಮರೆತೆ ಎನ್ನದಿರಿ
ಮರೆಯಲು ಬಿಡುವೆನೇ ನಾ ನಿಮ್ಮ |
ಸುಖಃ ನಿಮ್ಮ ಒಲುಮೆಯಲಿ ನಾನಿರಲು ||

ಬಯಲು ಹಸಿರಿನಲಿ ಬೀಗಲೇ ಇಲ್ಲ
ತನಿ ಬೆಳದಿಂಗಳು ಬರಲಿಲ್ಲ
ಉಕ್ಕಲಿಲ್ಲ ಕಡಲ ಅಲೆಗಳು
ಹಕ್ಕಿಗಳ ಚಿಲಿಪಿಲಿ ದನಿಯಿಲ್ಲಾ ||

ನಂಬಿಹೆನು ನಿಮ್ಮ ಬರುವಿರಿ ಎಂದು
ಸುಖಃ ಕದವ ತೆರೆದು ಬೆಳಕಾಗಿ ಬರಲು
ನೀವು! ಕಾದಿರುವೆನು ಹಗಲು ಇರುಳು ||
*****

Tagged:

One Comment

  • Instead of waiting to come,keeping in heart is better because when you kept in heart there is no chance of escaping,and waiting for escaped😛..nimm ella kavite galanna odutta iruve,nimm anubavagalu chanda,heege bareyuttiri preeti batti hoda manasugalali preeti tumbuttiri

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...