Home / ಕವನ / ಕವಿತೆ / ಕಳೆದವು ಹತ್ತು ದಿನ

ಕಳೆದವು ಹತ್ತು ದಿನ

ಕಳೆದವು ಹತ್ತು ದಿನ
ನಿಮ್ಮ ಕಾಯುತಲಿ ಎನ್ನರಸ
ಬಾಗಿಲ ಬಳಿಯಲಿ ನಿಂತೇ
ನಿಮ್ಮಯ ಬರವನು ನೋಡುತ್ತ ||

ಬರುವೆನೆಂದು ಹೇಳಿ ಹೋದ ನಿಮ್ಮನು
ಮರಳಿ ಬರುವಿರೆಂದು ಕಾದೆನು
ಬರುವ ಅವರಿವರ ಕಣ್ಣಾಲಿಸಿ ನೋಡಿದೆ
ಪರಿತಪಿಸಿದೆ ||

ಮೊದಲ ರಾತ್ರಿಯ ನಗುಮೊಗದ
ಚಂದದಿ ಬರಸೆಳೆದು ಮುತ್ತನಿತ್ತಿರಿ
ಆ ದಿನ! ಮೃದುವಚನವಿತ್ತು ಹೋದಿರಿ ಎಲ್ಲಿಗೆ ||

ಇರುವಿರಿ ಹೇಗೆ ಇರುವಿರಿ ಪ್ರೀತಿಯಲಿ
ಎನ್ನರಸಿ ನಿಮ್ಮದೇ ಚಿಂತೆಯು ದಿನದಿನವು
ಕುಳಿತರೂ ನಿಂತರು ಮಲಗಿದರು ಕಾಡುತಿದೆ
ನಿಮ್ಮದೇ ನೆನಪು ||

ಬಣ್ಣದ ಓಕುಳಿ ಬರಿದೆ ಚೆಲ್ಲಿದಿರಿ
ಬರಿದಾಗಿಸದಿರಿ ನನ್ನಾಸೆ ಕರಿಮೋಡಗಳಲಿ
ಮಿಂಚು ಹೊಳೆದಂತೆ ಕಾಡುತಿಹುದು ನಿಮ್ಮ ನೆನಪು ||

ನಾನು ನಿಮ್ಮನ್ನು ಮರೆತೆ ಎನ್ನದಿರಿ
ಮರೆಯಲು ಬಿಡುವೆನೇ ನಾ ನಿಮ್ಮ |
ಸುಖಃ ನಿಮ್ಮ ಒಲುಮೆಯಲಿ ನಾನಿರಲು ||

ಬಯಲು ಹಸಿರಿನಲಿ ಬೀಗಲೇ ಇಲ್ಲ
ತನಿ ಬೆಳದಿಂಗಳು ಬರಲಿಲ್ಲ
ಉಕ್ಕಲಿಲ್ಲ ಕಡಲ ಅಲೆಗಳು
ಹಕ್ಕಿಗಳ ಚಿಲಿಪಿಲಿ ದನಿಯಿಲ್ಲಾ ||

ನಂಬಿಹೆನು ನಿಮ್ಮ ಬರುವಿರಿ ಎಂದು
ಸುಖಃ ಕದವ ತೆರೆದು ಬೆಳಕಾಗಿ ಬರಲು
ನೀವು! ಕಾದಿರುವೆನು ಹಗಲು ಇರುಳು ||
*****

Tagged:

One Comment

  • Instead of waiting to come,keeping in heart is better because when you kept in heart there is no chance of escaping,and waiting for escaped😛..nimm ella kavite galanna odutta iruve,nimm anubavagalu chanda,heege bareyuttiri preeti batti hoda manasugalali preeti tumbuttiri

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...