Home / ಕವನ / ಅನುವಾದ / ಪ್ರೇಮ

ಪ್ರೇಮ

ಪ್ರೇಮ! ವಿಚಿತ್ರ ವಸ್ತುವಾಗಿದೆ ಜಗದಿ! ಅದ್ಬುತ ಶಕ್ತಿ ನಿಧಾನ.
ನಿದ್ರೆಯಲದು ಜಾಗೃತಿ! ಜಾಗೃತಿಯಲ್ಲಿ ಅಪ್ಪುದು ನಿದ್ರೆ ಸಮಾನ.
ಪ್ರೇಮದಮಲು ಮುಸುಕುವುದಾರಿಗೆ ಅಕ್ಷಿಗಳಲಿ ಉನ್ಮತ್ತ
ಎಚ್ಚರ ನಿದ್ರಾ ಎರಡೂ ಅವರಿಗೆ ಆಗಿ ಹೋಗುವುದೈ ದೂರ!

ಗಂಧವಿಲ್ಲದ ಹೂವಿನಂತೆಯೆ ಚಂದ್ರ ಚಂದ್ರಿಕಾಹೀನ!
ಹಾಗೇ ನೀರಸ ಮಾನವ ಜೀವನವಿದ್ದರೆ ಪ್ರೇಮ ವಿಹೀನ
ಪ್ರೇಮ ಸ್ವರ್ಗವು! ಸ್ವರ್ಗ ಪ್ರೇಮವು! ಪ್ರೇಮ ಅಶಂಕ ಅಶೋಕ.
ಈಶ್ವರಪ್ರತಿಬಿಂಬ ಪ್ರೇಮವು! ಪ್ರೇಮ ಹೃದಯದಾಲೋಕ.

ಜಗದಲಿ ಬಂದರೆ ಪೀಡೆ ಸರ್ವವೂ ಅಪ್ಪುದು ಹೃದಯ ಅಧೀರ!
ಆದರೆ ಸಿಹಿಸಿಹಿ ಸೊಗಸುವುದೈ ಎದೆಯಲ್ಲಿ ಪ್ರೇಮದಾ ಪೀಡಾ.
ವ್ಯಾಕುಲವೆನಿಸದು ಪ್ರೇಮ ಪೀಡೆಯಿಂ ಯಾರದದೆಂದೂ ಪ್ರಾಣ
ಭಾಗ್ಯಹೀನ ನವ ನಿಷ್ಟುರನೈ ನಿಜ ಎದೆಯವನದು ಪಾಷಾಣ.

ಯಾರ ಮೇಲೆ ದಯಾದೃಷ್ಟಿ ಬೀರ್‍ವನೋ ಮಂಗಳ ಮಯ ಭಗವಾನ!
ಪೂರ್ಣ ಪ್ರೇಮ ಪೀಡೆಯಲಿ ಹಿಂಡುವನವನು ಆತನ ಪ್ರಾಣ!
ಯಾರಿಗೆ ಅನುಭವವಾಗಿದೆ ಪ್ರೇಮದ ಪೀಡೆಯ ಬಹು ಆನಂದ
ಆತನಿಗಿಂತ ದೊಡ್ಡವನಾರು ಸುಖಿ! ಇಹದಲಿ ಸ್ವಚ್ಛಂದ.

ಪ್ರೇಮೋನ್ಮತ್ತ ಹೃದಯದಿ ಇರದೈ! ಹೀನ ವಿರೋಧ ಕ್ರೋಧ!
ದುರ್ಗುಣಕಾಗದು ಪ್ರೇಮದ ಪಥದಲಿ ಮಾಡುವುದು ಅವರೋಧ!
ಪ್ರೇಮ ವೇದನಾಮುಗ್ಧ ಜನ (ಇಹರೈ) ಸುಖನಿದ್ರಾಮಯಮತ್ತ
ಪ್ರೇಮದ ಬೆಳಕನು ಕಣ್ಣಲ್ಲಿ ತುಂಬಿ ನೋಳ್ಪರು ಜಗವ ಸಮಸ್ತ!

ಹೂವಿನ ಮಂಜರಿ ಪಲ್ಲವದಲ್ಲಿ ಪ್ರಿಯತಮ ರೂಪ ವಿಲೋಕೀ!
ತುಂಬಿ ಹರಿವುದೈ ಮಹಾಮೋದದಿಂ ಪ್ರೇಮಿಯ ಎದೆತುಳಿಕೀ!
ನೋಡಿ ಮೊಗ್ಗನು ಮಾಡುವ ನಾತನು ಉಸ್ಮತ್ತ ಪ್ರಲಾಪ
ಎಷ್ಟರ ತನಕ ಅಡಗುವೆ ನೀನೀ ದಳಗಳ ನಡುವೆ ಗೋಪ!

ಪ್ರೇಮ ತುಂಬಿಹ ಅರ್ಧ ತೆರೆದಿಹ ಕಣ್ಣಲಿ ಶಶಿಯ ಸಹಾಸ
ಪ್ರೇಮಿಯು ಕಂಡು ಭ್ರಮಿಸುವನಾಗ ಪ್ರಿಯತಮ ಹಾಸ ವಿಕಾಸ.
ಸರ್ವವು ಆತಗೆ ಪ್ರೇಮದ ಮಾಯೆಯು ಸಚರಾಚರ ಸಂಸಾರ
ಪ್ರೇಮ ಮಗ್ನನು ನಿತ್ಯ ನಾನು ಮಾಳ್ಪನು ಪ್ರೇಮೋದ್ಯಾನ ವಿಹಾರ!

ಪ್ರೇಮವೇದನಾ ವ್ಯಥಿತ ಹೃದಯದಿಂ ಮಧಿತ ಪ್ರಮೋದ್ಗಾರ
ಉಕ್ಕಿ ಭೂಮಿಯ ತುಂಬಿಬಿಡುವುದೈ! ನವಜೀವನ ಉತ್ಸಾಹ!
ಕರುಣಾಭರದೀ ಪ್ರೇಮ ಕಂಬನಿ ಸುರಿವುದು ಸುಧೆಯ ಸಮಾನ
ನೆನೆಸುತ ದಯೆಯ ಬೇರನು ಕೊಡುವುದು ಜಗಕಾಶ್ರಯದಾನ!

ಜನಜನದಲ್ಲಿ ಪ್ರೇಮೀಕಾಂಬನು ಪ್ರಿಯತಮನಾಕಾಂತಿ
ಅದರಿಂದಾತಗೆ ಲೋಕಸೇವೆಯೋಳ್ ದೊರಕುವದು ಅತಿಶಾಂತಿ.
ಪೀಡಿತನಾಪೀಡೇ-ಕ್ಷುದಿತನ ಹಸಿವೇ-ತೃಷಿತನ ದಾಹ-
ಕಳೆದು ನಿರಾಶ್ರಯ-ಆಶಾರಹಿತಗೆ ಕೊಡುವನು ಉತ್ಸಾಹಾ!

ಕೃಶಿತ ಜಾತಿಯ ಉನ್ನತಿಗೈಸಿ ನಿವಾರಿಸಿ ಕಂಟಕ ದೂರ
ಪ್ರೇಮೀ ಪರಮ ತೃಪ್ತನಪ್ಪನು ಆಹ್ಲಾದಿತ ಭರಪೂರ.
ದಯೆ! ಕರ್ತವ್ಯ! ಎಂಬುದಿಲ್ಲ-ಅಲ್ಲ! ಆತನದಾರಿಗು ದಾಸ!
ಆಶಿಪನಾತನು ಸದಾ ನೋಡಲು ಪ್ರಿಯತಮ ರೂಪ ವಿಕಾಸ.
ರೂಪವೆಲ್ಲಿದೆ? ಆರ್ತಮುಖದಲಿ- ಪ್ರಕೃತಹರ್ಷದ ಹಾಸ
ಆಗುವುದೆಂದು! ಉದಿತವಾಗಲೇ ಪ್ರಿಯತಮ ರೂಪವಿಕಾಸ

[ಶ್ರೀ ಕವಿವರ ರಾಮನರೇಶಜೀ ತ್ರಿಪಾಠಿಯವರ ಹಿಂದೀ ‘ಮಿಲನ’ ದಿಂದ].
*****
ಅನುವಾದ

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...