ನರ-ವಾನರ

ಕಾಡಿನ ಕೋತಿ ಬಿದುರಿನ ಚದುರೆ ಖಾಸ ಬಂಗ್ಲಿ ಬೋನಲ್ಲಿ……….
ವಿಕಾರ! ವಿಕಟ! ನಗೆಗೇಡೆಂದು ಹಳಿವರು ನಾವು ಮಾನವರು!
ಗಡವಮಂಗ, ಬಾಲದಕೋತಿ, ಮೊಂಡು ಬಾಲ, ನೀಲಮೂಗು,
ಈ ಪರಿಯುಂಟು ಮಂಗಗಳು ಹಣ್ಣೆ ತಿಂದು ಜೀವಿಪವು;
ಸಂಶಯ ಬಂತು ಆಕೆಗೆ! ನೀವೇ ನೆಂಬಿರಿ ಉತ್ತಮರೆ?
ಮಾನವರು ನಾವು! ವಾನರರು ಅವು! ಯಾರು ಹೇಳಿ ನಗೆಗೀಡು?
ಕೂದಲು ಉದುರೆ, ಹಲ್ಲು ಕಳಚೆ, ಗುಳ್ಳೆಗಣ್ಣು ಗಜ್ಜುಗವಾಗೆ!
ಚರ್ಮವೊಂದೇ ವ್ಯತ್ಯಾಸ! ವಸ್ತ್ರವೊಂದೇ ವ್ಯತ್ಯಾಸ!
ಎಂಥ ವಿಕಾರ ಅಡಗಿದೆ ಇಲ್ಲಿ ಮಾನವ ದೇಹದಲ್ಲಿ……..!
ಪರಿಯಿಷ್ಟೆ ಇನ್ನೂ ಸೂಕ್ಷ್ಮ ತೋರಿಸಬಲ್ಲೆ -ತೋರಿಸಿ ನಿಮ್ಮ ನೋಯಿಸಲೊಲ್ಲೆ!
ಆದರೆ, ನೋಡಿ, ಒಮ್ಮಾತಿನಲ್ಲಿ ಇದ್ದರೆ ಬೋನಿನ ಒಳಗಡೆ ನಾವು
ಕಾಣುವವೆಷ್ಟೋ ಅವಕಿಂತ ಅ-ವ-ಲ-ಕ್ಷ-ಣ!…………….
ತುಸುವೂ ಇಲ್ಲ ವ್ಯಾಯಾಮ! ಯೌವ್ವನ ಕಳೆಯಲು ಪರಿತಾಪ!
ನುಂಗುವುದಂತೂ ಲಾಡು, ಚಿರೋಟಿ ತಿಂದರೆ ಅರಗದು ನಮಗೇ ಗೊತ್ತು!
ಗುಡ್ಡದ ಗಾತ್ರ, ತಂಬಾಕು ಸೇದಲು ಸಾಲದು ನಿತ್ಯ ನಿತ್ಯ!
ಸಾಗರದಷ್ಟು ಸಾರಾಯಿ ಕುಡಿಯದೆ ತೃಪ್ತಿ ನಮಗೆಲ್ಲಿ?
ಯಾಕೋ ಏನೋ ಯಾರಿಗೆ ಗೊತ್ತು ಮಾನವರೆಲ್ಲರ ಪರಿಯಷ್ಟೆ!
ಕಾಯಗಳನ್ನು ಕಸುವಾಗಿಡಲು ಹಣ್ಣೇತಿಂದು ಇರಬಹುದಲ್ಲ?
ಆದರೆ ನೋಡಿ ಹಣ್ಣೆಲ್ಲ ವಾನರರಾಹಾರ!

ಹಣ್ಣು ಎಂದರೆ ಸಾಮಾನ್ಯ ಅಲ್ಲವು ಕೇಳಿ ನಿವೆಲ್ಲ!
ಬೇಸಿಗೆ ಬಿಸಿಲು, ಮಾಗೀ ಗಾಳೀ, ಭೂಮೀ ಸಾರ, ಜಡಿಮಳೆಯು
ಎಲ್ಲ ಸೇರಿ ಹಣ್ಣಿನ ರೂಪ ತಿಳಿಯದೆ? ನಿಮಗೆ? ಈ ಗುಟ್ಟು?
ದೇಹವ ಶೋಧಿಸಿ, ಮಿದುಳನು ತೊಳೆದು,
ದ್ವೇಷದ ದೋಷದ, ಇಲ್ಲಣ ತೊಡೆದು
ಮಾನವ ದೇಹವ ದೇವರ ಭಾವಕೆ ಸರಿಸಮನೆನಿಸಲು ಹಣ್ಣೇ ಬೇಕು!
ಆದರೆ, ನಾವು ದೇವರ ನೋಡಿಸಿ ಹಾ-ಯಾ-ಗಿ-ಹೆ-ವು!…………….
ಅದಕೇ ತಾನೇ, ಅವು ತಾವಾಗಿ ಕಾಣುತ ನಮ್ಮನುಹರಿದೂ ಹಾರೀ,
ಹತ್ತೀ, ಕುಣಿದೂ!…………..
ಬೆಳಗೂ ಬೈಗೂ, ತಲೆಕೆಳಗಾಗಿ ನೇತುಬಿದ್ದಿವೆ ಬೋನಲ್ಲಿ!
ಮಾಡುತಿಹನೆ ಅಪಹಾಸ್ಯ? ಮಾಡುತಿಹವೆ ನೀತಿಬೋಧೆ?
ನಗರದ ನರರ ಪರಿಮಿಷ್ಟೆ! ಬೋನಿನ ವಾನರರರಿವಷ್ಟೆ
ಅದು ನೋಡಿದರೆ ದೈವತ್ವ! ಅದರ ವಿಕಾರವೆ ನಮಗೆ ಮಹತ್ವ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೩೭
Next post ನವಿಲುಗರಿ – ೧೦

ಸಣ್ಣ ಕತೆ

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…