Home / ಕವನ / ಕವಿತೆ / ನರ-ವಾನರ

ನರ-ವಾನರ

ಕಾಡಿನ ಕೋತಿ ಬಿದುರಿನ ಚದುರೆ ಖಾಸ ಬಂಗ್ಲಿ ಬೋನಲ್ಲಿ……….
ವಿಕಾರ! ವಿಕಟ! ನಗೆಗೇಡೆಂದು ಹಳಿವರು ನಾವು ಮಾನವರು!
ಗಡವಮಂಗ, ಬಾಲದಕೋತಿ, ಮೊಂಡು ಬಾಲ, ನೀಲಮೂಗು,
ಈ ಪರಿಯುಂಟು ಮಂಗಗಳು ಹಣ್ಣೆ ತಿಂದು ಜೀವಿಪವು;
ಸಂಶಯ ಬಂತು ಆಕೆಗೆ! ನೀವೇ ನೆಂಬಿರಿ ಉತ್ತಮರೆ?
ಮಾನವರು ನಾವು! ವಾನರರು ಅವು! ಯಾರು ಹೇಳಿ ನಗೆಗೀಡು?
ಕೂದಲು ಉದುರೆ, ಹಲ್ಲು ಕಳಚೆ, ಗುಳ್ಳೆಗಣ್ಣು ಗಜ್ಜುಗವಾಗೆ!
ಚರ್ಮವೊಂದೇ ವ್ಯತ್ಯಾಸ! ವಸ್ತ್ರವೊಂದೇ ವ್ಯತ್ಯಾಸ!
ಎಂಥ ವಿಕಾರ ಅಡಗಿದೆ ಇಲ್ಲಿ ಮಾನವ ದೇಹದಲ್ಲಿ……..!
ಪರಿಯಿಷ್ಟೆ ಇನ್ನೂ ಸೂಕ್ಷ್ಮ ತೋರಿಸಬಲ್ಲೆ -ತೋರಿಸಿ ನಿಮ್ಮ ನೋಯಿಸಲೊಲ್ಲೆ!
ಆದರೆ, ನೋಡಿ, ಒಮ್ಮಾತಿನಲ್ಲಿ ಇದ್ದರೆ ಬೋನಿನ ಒಳಗಡೆ ನಾವು
ಕಾಣುವವೆಷ್ಟೋ ಅವಕಿಂತ ಅ-ವ-ಲ-ಕ್ಷ-ಣ!…………….
ತುಸುವೂ ಇಲ್ಲ ವ್ಯಾಯಾಮ! ಯೌವ್ವನ ಕಳೆಯಲು ಪರಿತಾಪ!
ನುಂಗುವುದಂತೂ ಲಾಡು, ಚಿರೋಟಿ ತಿಂದರೆ ಅರಗದು ನಮಗೇ ಗೊತ್ತು!
ಗುಡ್ಡದ ಗಾತ್ರ, ತಂಬಾಕು ಸೇದಲು ಸಾಲದು ನಿತ್ಯ ನಿತ್ಯ!
ಸಾಗರದಷ್ಟು ಸಾರಾಯಿ ಕುಡಿಯದೆ ತೃಪ್ತಿ ನಮಗೆಲ್ಲಿ?
ಯಾಕೋ ಏನೋ ಯಾರಿಗೆ ಗೊತ್ತು ಮಾನವರೆಲ್ಲರ ಪರಿಯಷ್ಟೆ!
ಕಾಯಗಳನ್ನು ಕಸುವಾಗಿಡಲು ಹಣ್ಣೇತಿಂದು ಇರಬಹುದಲ್ಲ?
ಆದರೆ ನೋಡಿ ಹಣ್ಣೆಲ್ಲ ವಾನರರಾಹಾರ!

ಹಣ್ಣು ಎಂದರೆ ಸಾಮಾನ್ಯ ಅಲ್ಲವು ಕೇಳಿ ನಿವೆಲ್ಲ!
ಬೇಸಿಗೆ ಬಿಸಿಲು, ಮಾಗೀ ಗಾಳೀ, ಭೂಮೀ ಸಾರ, ಜಡಿಮಳೆಯು
ಎಲ್ಲ ಸೇರಿ ಹಣ್ಣಿನ ರೂಪ ತಿಳಿಯದೆ? ನಿಮಗೆ? ಈ ಗುಟ್ಟು?
ದೇಹವ ಶೋಧಿಸಿ, ಮಿದುಳನು ತೊಳೆದು,
ದ್ವೇಷದ ದೋಷದ, ಇಲ್ಲಣ ತೊಡೆದು
ಮಾನವ ದೇಹವ ದೇವರ ಭಾವಕೆ ಸರಿಸಮನೆನಿಸಲು ಹಣ್ಣೇ ಬೇಕು!
ಆದರೆ, ನಾವು ದೇವರ ನೋಡಿಸಿ ಹಾ-ಯಾ-ಗಿ-ಹೆ-ವು!…………….
ಅದಕೇ ತಾನೇ, ಅವು ತಾವಾಗಿ ಕಾಣುತ ನಮ್ಮನುಹರಿದೂ ಹಾರೀ,
ಹತ್ತೀ, ಕುಣಿದೂ!…………..
ಬೆಳಗೂ ಬೈಗೂ, ತಲೆಕೆಳಗಾಗಿ ನೇತುಬಿದ್ದಿವೆ ಬೋನಲ್ಲಿ!
ಮಾಡುತಿಹನೆ ಅಪಹಾಸ್ಯ? ಮಾಡುತಿಹವೆ ನೀತಿಬೋಧೆ?
ನಗರದ ನರರ ಪರಿಮಿಷ್ಟೆ! ಬೋನಿನ ವಾನರರರಿವಷ್ಟೆ
ಅದು ನೋಡಿದರೆ ದೈವತ್ವ! ಅದರ ವಿಕಾರವೆ ನಮಗೆ ಮಹತ್ವ!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...