Home / ಕವನ / ಕವಿತೆ / ಕಾಂಟೆಸಾದಲ್ಲಿ ಕಾವ್ಯ

ಕಾಂಟೆಸಾದಲ್ಲಿ ಕಾವ್ಯ

ಕಾಂಟೆಸಾದಲ್ಲಿ ಕೂತಾಗ ಕಾವ್ಯವಾಗದಿದ್ದರೆ
ಕುಂಟುನೆಪದ ಭವ್ಯತೆಯಲ್ಲಿ ಬತ್ತಿ ಹೋಗುತ್ತೇನೆ.
ಉರಳುವ ಚಕ್ರದಲ್ಲಿ ನರಳುವ ಕರುಳು-
ಕಾರಿರುಳ ಕಾರಲ್ಲಿ ಕಾಲಿಡುತ್ತಾನೆ ಕೌರವ;
ವಂದಿ ಮಾಗಧರು ನಂದಿ ಹೋದ ಹಾದಿಯಲ್ಲಿ
ಬರಿತಲೆಯ ಬರಿಗಾಲ ನಿಜ ಮಾನವ!

ಮತ್ತೊಬ್ಬ ಹತ್ತುತ್ತಿದ್ದಾನೆ ವೃಷಭಾಚಲಕ್ಕೆ
ಜಗತ್ತನ್ನು ಗೆದ್ದ ದೊಡ್ಡಸ್ತಿಕೆಯ ಶಿಖರಕ್ಕೆ
ಗೆದ್ದವರು ಎಷ್ಟೋ ಜನ! ಎಲ್ಲಿ ಬರೆಸಲಿ ಶಾಸನ?
ನಿರಸನಗೊಂಡದ್ದೇ ನಿಜವಾದ ಕವನ.

ಮೃತ್ಯುವೇ ಮೈವೆತ್ತ ಮುತ್ತುರತ್ನದ ಕಿರೀಟ
ಇಲ್ಲಿ ಆಸ್ಥಾನದಲ್ಲಿ ನೀಲಾಂಜನೆಯ ನೃತ್ಯ!
ಬಿಟ್ಟ ಕಣ್ಣುಗಳಲ್ಲಿ ಭ್ರಮೆಯ ಬೆಟ್ಟಗಳು
ಕುಸಿದು ಕುಪ್ಪೆಯಾಗುವುದರಲ್ಲಿ ಎಂಥ ಸತ್ಯ!

ಒಳಗೆ ತತ್ತಿಯೊಡೆದು ಹುಟ್ಟಿದೆ ಕತ್ತಿಕಾಳಗ
ತುಂಬಿ ಬರುತ್ತಿದೆ ನೆನಪಿನ ಕೊಳಗ;
ಬದುವಿನ ಮೇಲೆ ಚಿಟ್ಟೆ ಹಿಡಿಯುವಾಗ
ಹಾವು ಹೆಡೆ ಬಿಚ್ಚಿದ್ದು;
ಬುಸುಗುಡುವ ಬೆವರಲ್ಲಿ ಬಿಸಿಲ ಕುಡಿದು
ಕಣ್ಣುಗಳಲ್ಲಿ ಬಣ್ಣದ ಚಿತ್ತಾರ ಬಿಡಿಸಿದ್ದು;
ಬಸ್ಸಿಗೆ ಕಾಸಿಲ್ಲದೆ ಕಾಲಲ್ಲಿ ಕಾವ್ಯ ಬರೆದದ್ದು;
ಹಸಿದ ಹೊಟ್ಟೆಯ ಒಳಗೆ ಕನಸುಗಳು ಕಚ್ಚಿದ್ದು-
ಕತ್ತಲೆಯ ಕಟ್ಟುಗಳನ್ನು ಬಿಚ್ಚಿಕೊಳ್ಳುತ್ತದೆ
ಬುದ್ಧ ಬೆಳಕಿನ ಬುತ್ತಿ:

ಕಾವ್ಯ ತುಂಬಿಕೊಳ್ಳಬೇಕು ಕಾಂಟೆಸಾದ ಒಳಗೆ
ನೆನಪಾಗುತ್ತಲೇ ಇರಬೇಕು ಬರಿಗಾಲ ನಡಿಗೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...