Home / ಕವನ / ಕವಿತೆ / ಕಾಂಟೆಸಾದಲ್ಲಿ ಕಾವ್ಯ

ಕಾಂಟೆಸಾದಲ್ಲಿ ಕಾವ್ಯ

ಕಾಂಟೆಸಾದಲ್ಲಿ ಕೂತಾಗ ಕಾವ್ಯವಾಗದಿದ್ದರೆ
ಕುಂಟುನೆಪದ ಭವ್ಯತೆಯಲ್ಲಿ ಬತ್ತಿ ಹೋಗುತ್ತೇನೆ.
ಉರಳುವ ಚಕ್ರದಲ್ಲಿ ನರಳುವ ಕರುಳು-
ಕಾರಿರುಳ ಕಾರಲ್ಲಿ ಕಾಲಿಡುತ್ತಾನೆ ಕೌರವ;
ವಂದಿ ಮಾಗಧರು ನಂದಿ ಹೋದ ಹಾದಿಯಲ್ಲಿ
ಬರಿತಲೆಯ ಬರಿಗಾಲ ನಿಜ ಮಾನವ!

ಮತ್ತೊಬ್ಬ ಹತ್ತುತ್ತಿದ್ದಾನೆ ವೃಷಭಾಚಲಕ್ಕೆ
ಜಗತ್ತನ್ನು ಗೆದ್ದ ದೊಡ್ಡಸ್ತಿಕೆಯ ಶಿಖರಕ್ಕೆ
ಗೆದ್ದವರು ಎಷ್ಟೋ ಜನ! ಎಲ್ಲಿ ಬರೆಸಲಿ ಶಾಸನ?
ನಿರಸನಗೊಂಡದ್ದೇ ನಿಜವಾದ ಕವನ.

ಮೃತ್ಯುವೇ ಮೈವೆತ್ತ ಮುತ್ತುರತ್ನದ ಕಿರೀಟ
ಇಲ್ಲಿ ಆಸ್ಥಾನದಲ್ಲಿ ನೀಲಾಂಜನೆಯ ನೃತ್ಯ!
ಬಿಟ್ಟ ಕಣ್ಣುಗಳಲ್ಲಿ ಭ್ರಮೆಯ ಬೆಟ್ಟಗಳು
ಕುಸಿದು ಕುಪ್ಪೆಯಾಗುವುದರಲ್ಲಿ ಎಂಥ ಸತ್ಯ!

ಒಳಗೆ ತತ್ತಿಯೊಡೆದು ಹುಟ್ಟಿದೆ ಕತ್ತಿಕಾಳಗ
ತುಂಬಿ ಬರುತ್ತಿದೆ ನೆನಪಿನ ಕೊಳಗ;
ಬದುವಿನ ಮೇಲೆ ಚಿಟ್ಟೆ ಹಿಡಿಯುವಾಗ
ಹಾವು ಹೆಡೆ ಬಿಚ್ಚಿದ್ದು;
ಬುಸುಗುಡುವ ಬೆವರಲ್ಲಿ ಬಿಸಿಲ ಕುಡಿದು
ಕಣ್ಣುಗಳಲ್ಲಿ ಬಣ್ಣದ ಚಿತ್ತಾರ ಬಿಡಿಸಿದ್ದು;
ಬಸ್ಸಿಗೆ ಕಾಸಿಲ್ಲದೆ ಕಾಲಲ್ಲಿ ಕಾವ್ಯ ಬರೆದದ್ದು;
ಹಸಿದ ಹೊಟ್ಟೆಯ ಒಳಗೆ ಕನಸುಗಳು ಕಚ್ಚಿದ್ದು-
ಕತ್ತಲೆಯ ಕಟ್ಟುಗಳನ್ನು ಬಿಚ್ಚಿಕೊಳ್ಳುತ್ತದೆ
ಬುದ್ಧ ಬೆಳಕಿನ ಬುತ್ತಿ:

ಕಾವ್ಯ ತುಂಬಿಕೊಳ್ಳಬೇಕು ಕಾಂಟೆಸಾದ ಒಳಗೆ
ನೆನಪಾಗುತ್ತಲೇ ಇರಬೇಕು ಬರಿಗಾಲ ನಡಿಗೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...