Home / ಕವನ / ಕವಿತೆ / ಎಲೆ ಸಾವೇ ನೀನೇಕೆ ಜೀವಂತ?

ಎಲೆ ಸಾವೇ ನೀನೇಕೆ ಜೀವಂತ?

ಬಿದ್ದ ಮರಗಳ ಬುಡಕ್ಕೆ ಹತ್ತಿದ ಗೆದ್ದಲು
ನಿಗಿ ನಿಗಿ ಕೆಂಡಕ್ಕೆ ಕಣ್ಣೀರು ಬಿದ್ದು ಬರಿ ಇದ್ದಿಲು
ದಾರಿ ಬದಿಯಲ್ಲಿ ದುಗುಡ ತುಂಬಿದ ಗಿಡ
ಮೇಲೆ ನೋಡಿದರೆ ನಡುಗುತ್ತಿರುವ ಮೋಡ.

ಬಿದ್ದ ಮನೆಯ ಜಂತೆಗಳಲ್ಲಿ ಕಂತೆಕಂತೆ ಕತೆಗಳು
ಸಂತೆ ಗದ್ದಲದ ನಡುವೆ ಮೌನಕವಿತೆಗಳು
ರಕ್ಕೆ ಸುಟ್ಟ ಹಕ್ಕಿಯೊಳಗೆ ನಿಂತ ನಾದಗಳು
ಬೇರಲ್ಲೇ ಬೋರಲಾಗಿ ಬಿದ್ದ ಜೀವಬಳ್ಳಿಗಳು.

ಎಲ್ಲಿ ಹೋದರು ಅವರು ಎತ್ತಿ ಆಡಿಸಿದವರು?
ತೋಳ ತುಂಬ ಭಾವ ತುಂಬಿಕೊಂಡ ಜನರು!
ಬಂದೆಯಾ ಮಗುವೆ ಈ ನೆಲದ ನಗುವೆ
ಎನ್ನುತ್ತ ಮನದುಂಬಿ ಹಾಡಾಗಿ ಮಿಡಿದವರು
ಮನೆತನವ ಮೀರಿ ಗೆಳತನದ ಹಣತೆಯಲ್ಲಿ
ಉರಿದು ಕರಕಾದ ಹಟ್ಟಿಯ ಅಜ್ಜಂದಿರು
ಮುಟ್ಟಿ ಮಲ್ಲಿಗೆ ಮಾಡಿದವರು.

ಎಲೆ ಸಾವೇ ನೀನೇಕೆ ಜೀವಂತ?
ಎಲ್ಲರ ಜೀವ ಕಳೆಯುವ ಧಾವಂತ!
ಭೂಮಿಯೊಳಗಿಂದ ಎದ್ದುಬರುವೆ
ಆಕಾಶದಿಂದ ಬಿದ್ದು ಸುರಿವೆ
ಬೆಂಕಿಯಾಗಿ ಬಿರುಗಾಳಿಯಾಗಿ
ಹರಿವ ನೀರೊಳಗಿನ ಉರಿಯಾಗಿ
ಜೀವ ಕಳೆಯುತ್ತಲೇ ಜೀವಕಳೆಯಾಗುತ್ತಿರುವೆ.

ಹೊಕ್ಕುಳಲ್ಲಿ ಹುಟ್ಟಿದ ಸಾವೇ
ಬಳ್ಳಿಗೆ ಕೊಳ್ಳಿಯಿಡುವುದು ತರವೆ?
ಮಗುವಿನ ಮೊದಲ ಅಳು
ನಗುವಾಗುವ ಮೊದಲೇ
ಸಿಡಿಯಾಗಿ ಹಿಡಿಯುವ ಉಡವೇ,
ಬೆನ್ನು ಬಿಡದ ಬಾಳ ಗಡುವೇ,
ಮಾತುಗಳನ್ನು ಮೌನದಲ್ಲಿ ಒಸಗುತ್ತೀಯ
ನಗುವನ್ನು ನಡುವಲ್ಲೇ ಕತ್ತರಿಸುತ್ತೀಯ
ಹಾವಿನ ಸೇಡಿಗೆ ಹತ್ಯೆಯಾಗುತ್ತೀಯ
ನೋವಿನ ನೇಣಿಗೆ ಆತ್ಮಹತ್ಯೆಯಾಗುತ್ತೀಯ
ಪೊಲೀಸರ ಗುಂಡಾಗುತ್ತೀಯ
ಹೆಣ್ಣಿಗೆ ಗಂಡಾಗುತ್ತೀಯ
ಕುರ್ಚಿಯಲ್ಲಿ ಕೂತ ಭರ್ಜಿಯಾಗುತ್ತೀಯ
ಎಲ್ಲರೊಳಗಿದ್ದೂ ಎದುರುಬದರಾಗುತ್ತೀಯ
ನೀನಲ್ಲವೆ ನಿಜವಾದ ಆತ್ಮ!
ಸಾವಿಲ್ಲದ ಅಂತರಾತ್ಮ!

ಸಾವು ಶಿಖರವಾಗಿ ಪರ್ವತಾರೋಹಿಗಳೇ ಎಲ್ಲ
ಆಮ್ಲಜನಕ ಯಾರ ಬಳಿಯಲ್ಲೂ ಇಲ್ಲ!
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...